ಐಪಿಎಲ್‌: ಇಂದು ಹೊಸ ತಂಡಗಳ ಖರೀದಿಗೆ ಸ್ಪರ್ಧೆ


Team Udayavani, Oct 25, 2021, 5:21 AM IST

ಐಪಿಎಲ್‌: ಇಂದು ಹೊಸ ತಂಡಗಳ ಖರೀದಿಗೆ ಸ್ಪರ್ಧೆ

ದುಬಾೖ: ಐಪಿಎಲ್‌ನ ಎರಡು ಹೊಸ ತಂಡಗಳ ಖರೀದಿಗೆ ಸೋಮವಾರ ಘಟಾನುಘಟಿ ಕಂಪೆನಿಗಳ ನಡುವೆ ಹಣಾಹಣಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಬಿಸಿಸಿಐ 7,000ದಿಂದ 10,000 ಕೋಟಿ ರೂ. ಗಳಿಸುವ ನಿರೀಕ್ಷೆಯಿದೆ. ಒಟ್ಟು 22 ಕಂಪೆನಿಗಳು ಟೆಂಡರ್‌ ಪಡೆದಿವೆ. ಈ ಪೈಕಿ 6 ಬಿಡ್ಡರ್‌ಗಳು ಗಂಭೀರವಾಗಿ ತಂಡ ಖರೀದಿಗೆ ಯತ್ನಿಸುವ ನಿರೀಕ್ಷೆಯಿದೆ. ಆದರೆ ನೂತನ ಮಾಲಕರ ಹೆಸರನ್ನು ಬಿಸಿಸಿಐ ಸೋಮವಾರವೇ ಪ್ರಕಟಿಸುತ್ತದೆಯೇ ಎನ್ನುವುದು ಖಚಿತವಾಗಿಲ್ಲ.

ಗೌತಮ್‌ ಅದಾನಿ ಮಾಲಕತ್ವದ ಅದಾನಿ ಸಮೂಹ ಮತ್ತು ಸಂಜೀವ್‌ ಗೊಯೆಂಕಾ ಮಾಲಕತ್ವದ ಆರ್‌ಪಿಎಸ್‌ಜಿ ಸಮೂಹ ಸದ್ಯದ ಬಿಡ್ಡರ್‌ಗಳ ಪೈಕಿ ದೊಡ್ಡ ಹೆಸರುಗಳು. ಇಬ್ಬರಿಗೂ ಹಣಕ್ಕಂತೂ ಯಾವುದೇ ಕೊರತೆಯಿಲ್ಲ. ಈ ಪೈಕಿ ಸಂಜೀವ್‌ ಗೊಯೆಂಕಾಗೆ ಕ್ರಿಕೆಟ್‌ ಬಗ್ಗೆ ವಿಪರೀತ ಪ್ರೀತಿಯಿದೆ.

ಬಿಸಿಸಿಐ ನಿಯಮಗಳ ಪ್ರಕಾರ ಒಂದು ಕಂಪೆನಿಯಾಗಲೀ, ವ್ಯಕ್ತಿಯಾಗಲೀ ವೈಯಕ್ತಿಕವಾಗಿ ಅಥವಾ ಗರಿಷ್ಠ ಮೂವರು ಒಗ್ಗೂಡಿ ಯಾವುದೇ ತಂಡದ ಮೇಲೆ ಹಕ್ಕು ಚಲಾಯಿಸಬಹುದು. ಒಂದು ವೇಳೆ ಒಬ್ಬ ವ್ಯಕ್ತಿ ಅಥವಾ ಒಂದು ಕಂಪೆನಿ ತಂಡದ ಖರೀದಿಗೆ ಮುಂದಾಗುವುದಾದರೆ ಅದರ ವಾರ್ಷಿಕ ವಹಿವಾಟು ಕನಿಷ್ಠ 3,000 ಕೋಟಿ ರೂ. ಇರಬೇಕು. ಮೂವರು ಒಗ್ಗೂಡಿ ಖರೀದಿಸುವುದಾದರೆ ಪ್ರತಿಯೊಬ್ಬರ ತಲಾ ವಾರ್ಷಿಕ ಆದಾಯ ಕನಿಷ್ಠ 2,500 ಕೋಟಿ ರೂ. ಇರಬೇಕಾಗುತ್ತದೆ.

ಇದನ್ನೂ ಓದಿ:ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಒಂದು ತಂಡದ ಮೊತ್ತ ಕನಿಷ್ಠ 2,000 ಕೋಟಿ ರೂ. ಎಂದು ಬಿಸಿಸಿಐ ನಿಗದಿ ಮಾಡಿದೆ. ಪೈಪೋಟಿ ಏರುತ್ತ¤ ಮೊತ್ತ ಕನಿಷ್ಠ 3,500 ಕೋಟಿ ರೂ., ಗರಿಷ್ಠ 5,000 ಕೋಟಿ ರೂ.ಗೆ ತಲುಪುವ ಲೆಕ್ಕಾಚಾರದಲ್ಲಿ ಬಿಸಿಸಿಐ ಇದೆ. ಈಗಾಗಲೇ 2023ರಿಂದ 27ರ ವರೆಗಿನ ಐಪಿಎಲ್‌ ನೇರ ಪ್ರಸಾರದಿಂದ 35,000 ಕೋಟಿ ರೂ. ಬರುವ ಅಂದಾಜು ಮಾಡಲಾಗಿದೆ. ಐಪಿಎಲ್‌ ತಂಡಗಳು 10ಕ್ಕೆ ಏರುವುದರಿಂದ ಈ ರೀತಿಯ ಲೆಕ್ಕಾಚಾರವಿದೆ. ಹೀಗಿರುವಾಗ ತಂಡ ಖರೀದಿಸುವ ಫ್ರಾಂಚೈಸಿಗಳಿಗೂ ಈ ಹಣದಲ್ಲಿ ಪಾಲು ಸಿಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.