ಐಪಿಎಲ್‌ ಪಂದ್ಯಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳ: ಬಿಸಿಸಿಐ ಯೋಜನೆ 


Team Udayavani, Jun 10, 2022, 6:59 AM IST

ಐಪಿಎಲ್‌ ಪಂದ್ಯಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳ: ಬಿಸಿಸಿಐ ಯೋಜನೆ 

ಹೊಸದಿಲ್ಲಿ: ಮುಂಬರುವ ಐಪಿಎಲ್‌ ಋತುಗಳಲ್ಲಿ ಪಂದ್ಯಗಳ ಸಂಖ್ಯೆಯನ್ನು ಹೆಚ್ಚಿಸಲು ಬಿಸಿಸಿಐ ಯೋಜನೆಯೊಂದನ್ನು ರೂಪಿಸಿದೆ. ಐಪಿಎಲ್‌ ನೇರ ಪ್ರಸಾರದ ಮಾಧ್ಯಮ ಹಕ್ಕುಗಳ ಹರಾಜು ನಡೆಯಲಿದ್ದು, ಬಿಡ್‌ದಾರರನ್ನು ಆಕರ್ಷಿಸಲು ಪಂದ್ಯಗಳ ಸಂಖ್ಯೆಯನ್ನು ಹೆಚ್ಚಿಸುವುದು ಬಿಸಿಸಿಐ ಯೋಜನೆಯಾಗಿದೆ.

ಇದು 2023-27ರ ನಡುವಿನ ಯೋಜನೆ. ಆಗ ಪಂದ್ಯಗಳ ಸಂಖ್ಯೆ 74ರಿಂದ 84, ಬಳಿಕ 94ರ ತನಕ ಏರುವ ಸಾಧ್ಯತೆ ಇದೆ. ಈ ಬಾರಿ 2 ಹೊಸ ತಂಡಗಳ ಸೇರ್ಪಡೆಯಿಂದಾಗಿ ಪಂದ್ಯಗಳ ಸಂಖ್ಯೆ 74ಕ್ಕೆ ಏರಿತ್ತು. ಮುಂದಿನೆರಡು ಋತುಗಳಲ್ಲಿ ಇದೇ ಮಾದರಿ ಮುಂದುವರಿಯಲಿದೆ. ಆದರೆ 2025 ಹಾಗೂ 2026ರಲ್ಲಿ 84 ಪಂದ್ಯ, 2027ರಲ್ಲಿ 94 ಪಂದ್ಯ ಗಳನ್ನು ಆಡಿಸುವುದು ಬಿಸಿಸಿಐ ಯೋಜನೆ.

ಈ ಬಾರಿ ಎರಡು ಗ್ರೂಪ್‌ಗ್ಳ ಮಾದರಿ ಯಲ್ಲಿ ಪಂದ್ಯಾವಳಿ ನಡೆದಿತ್ತು (5 ಪ್ಲಸ್‌ 5). ಆಯಾ ಗ್ರೂಪ್‌ನ ತಂಡಗಳ ವಿರುದ್ಧ ತಲಾ 2 ಪಂದ್ಯ, ಇನ್ನೊಂದು ಗ್ರೂಪ್‌ನ 4 ತಂಡಗಳ ವಿರುದ್ಧ ತಲಾ ಒಂದು ಪಂದ್ಯ ಹಾಗೂ ಒಂದು ತಂಡದ ವಿರುದ್ಧ 2 ಪಂದ್ಯಗಳನ್ನು ಆಡಿಸಲಾಗಿತ್ತು. ಅಲ್ಲಿಗೆ ತಂಡವೊಂದು ಲೀಗ್‌ ಹಂತದಲ್ಲಿ 14 ಪಂದ್ಯಗಳನ್ನಾಡಿತ್ತು.

ಮುಂದಿನೆರಡು ವರ್ಷ ಇದೇ ಮಾದರಿ ಇರಲಿದೆ. 2025ರಲ್ಲೂ ಇದೇ ಮಾದರಿ, ಆದರೆ ಸಣ್ಣದೊಂದು ಬದಲಾವಣೆ ಮಾಡಲಾಗುವುದು. ಮತ್ತೂಂದು ಗ್ರೂಪ್‌ನ 3 ತಂಡಗಳ ವಿರುದ್ಧ ತಲಾ ಒಂದು ಪಂದ್ಯ, 2 ತಂಡಗಳ ವಿರುದ್ಧ ತಲಾ 2 ಪಂದ್ಯ ಆಡಬೇಕಾಗುತ್ತದೆ. ಆಗ ಲೀಗ್‌ ಹಂತದಲ್ಲಿ ಪ್ರತಿಯೊಂದು ತಂಡಕ್ಕೆ 15 ಪಂದ್ಯ ಲಭಿಸುತ್ತದೆ. ಕೂಟದ ಒಟ್ಟು ಪಂದ್ಯಗಳ ಸಂಖ್ಯೆ 74ರಿಂದ 84ಕ್ಕೆ ಏರಲಿದೆ. ಪ್ಲೇ ಆಫ್ ಮಾದರಿಯಲ್ಲಿ ಯಾವುದೇ ಬದಲಾವಣೆ ಇಲ್ಲ.

2027ರಲ್ಲಿ 90 ಲೀಗ್‌ ಪಂದ್ಯ :

2027ರಲ್ಲಿ ಎರಡು ಗ್ರೂಪ್‌ಗಳ ಮಾದರಿ ಇರುವುದಿಲ್ಲ. ಬದಲಾಗಿ ರೌಂಡ್‌ ರಾಬಿನ್‌ ಲೀಗ್‌ ಇರುತ್ತದೆ. ಇಲ್ಲಿ ಪ್ರತಿಯೊಂದು ತಂಡ ಉಳಿದ 9 ತಂಡಗಳೊಂದಿಗೆ ತಲಾ 2 ಪಂದ್ಯಗಳನ್ನು ಆಡಬೇಕು. ಆಗ ಲೀಗ್‌ ಪಂದ್ಯಗಳ ಸಂಖ್ಯೆ 90ಕ್ಕೆ ಏರುತ್ತದೆ. ಇಲ್ಲಿಯೂ ಪ್ಲೇ ಆಫ್ ಮಾದರಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಈ ರೀತಿ ಹಂತ ಹಂತವಾಗಿ ಮುಂದಿನೈದು ವರ್ಷಗಳ ಪಂದ್ಯಗಳ ಸಂಖ್ಯೆ 370ರ ಬದಲು 410ಕ್ಕೆ ಏರಲಿದೆ. ನೇರ ಪ್ರಸಾರದ ಹಕ್ಕುದಾರರು ಇದರಿಂದ ಹೆಚ್ಚಿನ ಲಾಭ ಪಡೆಯಬಹುದು.

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.