Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌


Team Udayavani, Mar 28, 2024, 6:30 AM IST

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

ಜೈಪುರ: ಸ್ಪರ್ಧಾತ್ಮಕ ಕ್ರಿಕೆಟ್‌ ಕೊರತೆಯಿಂದ ತುಸು ಮಂಕಾಗಿರುವ ರಿಷಭ್‌ ಪಂತ್‌ ಮತ್ತು ಅವರ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಗುರುವಾರ ಬಲಿಷ್ಠ ರಾಜಸ್ಥಾನ್‌ ರಾಯಲ್ಸ್‌ ಸವಾಲು ಎದುರಾಗಲಿದೆ. ಇದು ಜೈಪುರದಲ್ಲಿ ನಡೆಯುವ ಮುಖಾಮುಖೀ. ರಾಜಸ್ಥಾನ್‌ಗೆ ಸತತ 2ನೇ ತವರು ಪಂದ್ಯವಾದರೆ, ಡೆಲ್ಲಿಗೆ ಸತತ 2ನೇ ತವರಾಚೆಯ ಪಂದ್ಯ.

ಇಲ್ಲಿ ಆಡಲಾದ ಮೊದಲ ಮುಖಾ ಮುಖೀಯಲ್ಲಿ ಸಂಜು ಸ್ಯಾಮ್ಸನ್‌ ಸಾರಥ್ಯದ ರಾಜಸ್ಥಾನ್‌ 20 ರನ್ನು ಗಳಿಂದ ಲಕ್ನೋವನ್ನು ಮಣಿಸಿತ್ತು. ಹಾಗೆಯೇ ಚಂಡೀಗಢದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಎದುರಿಸಿದ ಡೆಲ್ಲಿ ಕ್ಯಾಪಿಟಲ್ಸ್‌ 4 ವಿಕೆಟ್‌ಗಳ ಸೋಲನುಭವಿಸಿತ್ತು. ಇದೀಗ ಗೆಲುವಿನ ಖಾತೆ ತೆರೆಯಲು ಹಾತೊರೆಯುತ್ತಿದೆ. ಆದರೆ ರಾಜಸ್ಥಾನ್‌ “ಹೋಮ್‌ ಗ್ರೌಂಡ್‌’ನಲ್ಲಿ ಆಡುತ್ತಿರುವ ಕಾರಣ ಫೇವರಿಟ್‌ ಎನಿಸಿದೆ.

ಪಂತ್‌ ಆಗಮನವೇ ಖುಷಿ
453 ದಿನಗಳ ದೊಡ್ಡ ವಿರಾಮದ ಬಳಿಕ ಆಡಲಿಳಿದ ರಿಷಭ್‌ ಪಂತ್‌, ಪಂಜಾಬ್‌ ವಿರುದ್ಧ 13 ಎಸೆತಗಳಿಂದ 18 ರನ್‌ ಮಾಡಿದ್ದರು. 2 ಬೌಂಡರಿ ಕೂಡ ಬಾರಿಸಿದ್ದರು. ಕೀಪಿಂಗ್‌ ವೇಳೆ ಜಿತೇಶ್‌ ಶರ್ಮ ಅವರನ್ನು ಸ್ಟಂಪ್ಡ್ ಔಟ್‌ ಮಾಡುವ ಮೂಲಕವೂ ಗಮನ ಸೆಳೆದಿದ್ದರು. ಒಂದು ದೊಡ್ಡ ಇನ್ನಿಂಗ್ಸ್‌ ಆಡುವುದಷ್ಟೇ ಪಂತ್‌ ಮುಂದಿರುವ ಸವಾಲು. ಅನಂತರ ಅವರು ಅದೇ “ಓಲ್ಡ್‌ ಡ್ಯಾಶಿಂಗ್‌ ಪಂತ್‌’ ಆಗುವುದರಲ್ಲಿ ಅನುಮಾನವಿಲ್ಲ. ರಾಜಸ್ಥಾನ್‌ ವಿರುದ್ಧ ಅವರು ಬೌಲ್ಟ್, ಅಶ್ವಿ‌ನ್‌, ಚಹಲ್‌ ಮೊದಲಾದವರ ಬೌಲಿಂಗ್‌ ಸವಾಲನ್ನು ಎದುರಿಸಿ ನಿಲ್ಲಬೇಕಿದೆ.

ಆದರೆ ರಿಷಭ್‌ ಪಂತ್‌ ಪುನರಾಗ ಮನವೇ ತಂಡದ ಪಾಲಿಗೆ ಖುಷಿ ಕೊಡುವ ಸಂಗತಿ. ಕೋಚ್‌ ರಿಕಿ ಪಾಂಟಿಂಗ್‌ ಕೂಡ ಇದೇ ಅಭಿ ಪ್ರಾಯ ಪಡುತ್ತಾರೆ. ಹೀಗಾಗಿ ಪಂತ್‌ ಅವರನ್ನು ಅವರಷ್ಟಕ್ಕೇ ಬಿಟ್ಟು ತಂಡದ ಉಳಿದ ಆಟಗಾರರು ಗೆಲುವಿಗೆ ಪಣತೊಡಬೇಕಿದೆ. ಆಸ್ಟ್ರೇಲಿಯದ ಜೋಡಿ ಆಗಿರುವ ಡೇವಿಡ್‌ ವಾರ್ನರ್‌, ಮಿಚೆಲ್‌ ಮಾರ್ಷ್‌, ವಿಂಡೀಸ್‌ನ ಶೈ ಹೋಪ್‌, ಕೀಪರ್‌ ಅಭಿಷೇಕ್‌ ಪೊರೆಲ್‌ ಅವರೆಲ್ಲ ಡೆಲ್ಲಿ ಸರದಿಯ ಪ್ರಮುಖ ಬ್ಯಾಟರ್. ಪೃಥ್ವಿ ಶಾ ಕೂಡ ರೇಸ್‌ನಲ್ಲಿದ್ದಾರೆ.

ಇನ್ನು ಬೌಲಿಂಗ್‌ ವಿಭಾಗ. ಪಂಜಾಬ್‌ ಎದುರಿನ ಪಂದ್ಯದ ವೇಳೆ ಅನುಭವಿ ಇಶಾಂತ್‌ ಶರ್ಮ ಕಾಲು ಉಳುಕಿಸಿಕೊಂಡು ಹೊರನಡೆದದ್ದು ಡೆಲ್ಲಿಗೆ ಭಾರೀ ಹಿನ್ನಡೆಯಾಗಿ ಪರಿಣಮಿಸಿತ್ತು. 2 ಓವರ್‌ ಎಸೆದಿದ್ದ ಇಶಾಂತ್‌ 16 ರನ್‌ ನೀಡಿ ಒಂದು ವಿಕೆಟ್‌ ಉರುಳಿಸಿದ್ದರು. ರಾಜಸ್ಥಾನ್‌ ವಿರುದ್ಧ ಆಡುವುದು ಇನ್ನೂ ಖಾತ್ರಿಯಾಗಿಲ್ಲ. ಸ್ಪಿನ್ನರ್‌ಗಳಾದ ಅಕ್ಷರ್‌ ಪಟೇಲ್‌ ಮತ್ತು ಕುಲದೀಪ್‌ ಯಾದವ್‌ ಜೈಪುರ ಟ್ರ್ಯಾಕ್‌ನಲ್ಲಿ ಮ್ಯಾಜಿಕ್‌ ಮಾಡುವುದನ್ನು ನಿರೀಕ್ಷಿಸಲಾಗುತ್ತಿದೆ.

ಬಲಿಷ್ಠ ಬ್ಯಾಟಿಂಗ್‌ ಸರದಿ
ರಾಜಸ್ಥಾನ್‌ ಬಲಿಷ್ಠ ಬ್ಯಾಟಿಂಗ್‌ ಸರದಿಯನ್ನು ಹೊಂದಿರುವ ತಂಡ. ಜೈಸ್ವಾಲ್‌, ಬಟ್ಲರ್‌, ಸ್ಯಾಮ್ಸನ್‌, ಪರಾಗ್‌, ಹೆಟ್‌ಮೈರ್‌, ಜುರೆಲ್‌ ಇಲ್ಲಿನ ಪ್ರಮುಖರು. ಲಕ್ನೋ ವಿರುದ್ಧ ಜೈಸ್ವಾಲ್‌-ಬಟ್ಲರ್‌ ಅಷ್ಟೇನೂ ಯಶಸ್ಸು ಸಾಧಿಸದೆ ಹೋದರೂ ಇದು ಕೂಟದ ಅತ್ಯಂತ ಅಪಾಯ ಕಾರಿ ಆರಂಭಿಕ ಜೋಡಿ ಎಂಬುದರಲ್ಲಿ ಅನುಮಾನವಿಲ್ಲ.

ಸಂಜು ಸ್ಯಾಮ್ಸನ್‌ ಅಜೇಯ 82 ರನ್‌ ಬಾರಿಸುವ ಮೂಲಕ ತಂಡದ ಮೊತ್ತವನ್ನು ಇನ್ನೂರರ ಗಡಿಗೆ ತಂದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಟಿ20 ವಿಶ್ವಕಪ್‌ ಮೇಲೆ ಕಣ್ಣಿಟ್ಟಿರುವ ಸಂಜು, ಹೆಚ್ಚು ಜವಾಬ್ದಾರಿಯುತ ಪ್ರದರ್ಶನ ನೀಡುವ ಯೋಜನೆ ಹಾಕಿಕೊಂಡಿದ್ದಾರೆ.

ರಾಜಸ್ಥಾನ್‌ ತಂಡದ ವೇಗದ ಬೌಲಿಂಗ್‌ ವಿಭಾಗದ ಪ್ರಮುಖ ರೆಂದರೆ ಬೌಲ್ಟ್, ಬರ್ಗರ್‌, ಆವೇಶ್‌ ಖಾನ್‌ ಮತ್ತು ಸಂದೀಪ್‌ ಶರ್ಮ. ಇವರಲ್ಲಿ ಸಂದೀಪ್‌ ಡೆತ್‌ ಓವರ್‌ಗಳಲ್ಲಿ ಉತ್ತಮ ನಿಯಂತ್ರಣ ಸಾಧಿಸಿದ್ದರು.

ಪಿಚ್‌ ರಿಪೋರ್ಟ್‌
ಜೈಪುರ ಪಿಚ್‌ ಬ್ಯಾಟಿಂಗ್‌ ಸ್ನೇಹಿ. ಮೊದಲು ಬ್ಯಾಟಿಂಗ್‌ ನಡೆಸುವ ತಂಡಕ್ಕೆ ಇನ್ನೂರರ ಗಡಿ ತಲುಪುವುದು ಕಷ್ಟವೇನಲ್ಲ. ಹೀಗಾಗಿ ಚೇಸಿಂಗ್‌ ತಂಡಕ್ಕೆ ಸವಾಲು, ಆದರೆ ಚೇಸ್‌ ಮಾಡಿ ಗೆಲ್ಲುವುದು ಅಸಾಧ್ಯವೇನಲ್ಲ. ಬೌಲಿಂಗ್‌ನಲ್ಲಿ ಸ್ಪಿನ್ನರ್ ಮಿಂಚುವ ಸಾಧ್ಯತೆ ಹೆಚ್ಚು. ಮಳೆ ಸಾಧ್ಯತೆ ಇಲ್ಲ. 34ರಿಂದ 30 ಡಿಗ್ರಿ ವಾತಾವರಣದಲ್ಲಿ ಪಂದ್ಯ ಸಾಗಲಿದೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.