IPL Final ನಲ್ಲಿ ಮಳೆಯ ಆಟ; ನಾಳೆ ಗುಜರಾತ್‌ ಟೈಟಾನ್ಸ್‌ ಹಾದಿ ಸುಗಮ?

ಬಿಗ್‌ ಸ್ಕ್ರೀನ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌  ರನ್ನರ್‌ ಅಪ್‌!!!

Team Udayavani, May 28, 2023, 11:08 PM IST

1-wqewq

ಅಹ್ಮದಾಬಾದ್‌: ಸರಾಗವಾಗಿ ಸಾಗಿ ಬಂದ 2023ನೇ ಸಾಲಿನ ಐಪಿಎಲ್‌ ಫೈನಲ್ ಪಂದ್ಯಕ್ಕೆ ಭಾರಿ ಮಳೆಯ ಕಾಟ ಎದುರಾಗಿದ್ದು ಪಂದ್ಯ ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲ್ಪಟ್ಟಿದೆ. ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳ ನಡುವೆ ರವಿವಾರ ಇಲ್ಲಿನ “ನರೇಂದ್ರ ಮೋದಿ ಸ್ಟೇಡಿಯಂ’ನಲ್ಲಿ ನಡೆಯಬೇಕಿದ್ದ ಪ್ರಶಸ್ತಿ ಸಮರ ರಾತ್ರಿ 11 ಗಂಟೆಯ ತನಕ ಆರಂಭವಾಗಿಲ್ಲ. ಟಾಸ್‌ ಕೂಡ ಹಾಕಲು ಸಾಧ್ಯವಾಗಲಿಲ್ಲ.

ಆದರೆ ಹವಾಮಾನ ವರದಿಯಂತೆ ಸೋಮವಾರವೂ ಮಳೆಯ ಭೀತಿ ಇದೆ. ಒಂದು ವೇಳೆ ಮೀಸಲು ದಿನದಂದೂ ಪಂದ್ಯ ನಡೆಯದೇ ಹೋದರೆ ಆಗ ಲೀಗ್‌ ಹಂತದ ಅಗ್ರಸ್ಥಾನಿಯಾಗಿದ್ದ ಗುಜರಾತ್‌ ಟೈಟಾನ್ಸ್‌ ಚಾಂಪಿಯನ್‌ ಎನಿಸಲಿದೆ.

ಟಾಸ್‌ ಹಾರಿಸುವುದಕ್ಕೂ ಅರ್ಧ ಗಂಟೆ ಮೊದಲು ಆರಂಭಗೊಂಡ ಮಳೆ 9.15ರ ಹೊತ್ತಿಗೆ ಬಿಡುವು ಕೊಟ್ಟಿತು. ಅಂಗಳಕ್ಕೆ ಹಾಕಿದ್ದ ಹೊದಿಕೆಗಳನ್ನೆಲ್ಲ ತೆಗೆಯಲಾಯಿತು. ಆದರೆ ಅಷ್ಟರಲ್ಲಿ ಪುನಃ ಮಳೆ ಜೋರಾಗಿಯೇ ಸುರಿಯತೊಡಗಿತು.

ಪೂರ್ತಿ 20 ಓವರ್‌ಗಳ ಪಂದ್ಯಕ್ಕೆ ರಾತ್ರಿ 9.35ರ “ಡೆಡ್‌ ಲೈನ್‌’ ವಿಧಿಸಲಾಗಿತ್ತು. 9.45ಕ್ಕೆ ಆರಂಭಗೊಂಡರೆ 19 ಓವರ್‌ ಪಂದ್ಯ, 10 ಗಂಟೆಗೆ ಪ್ರಾರಂಭವಾದರೆ 17 ಓವರ್‌ ಪಂದ್ಯ, 10.15ಕ್ಕೆ ಮೊದಲ್ಗೊಂಡರೆ 15 ಓವರ್‌ಗಳ ಆಟವೆಂದು ತೀರ್ಮಾನಿಸಲಾಗಿತ್ತು. ತಲಾ 5 ಓವರ್‌ಗಳ ಪಂದ್ಯವಾದರೆ 12.06ರ ಅಂತಿಮ ಸಮಯವನ್ನು ನಿಗದಿಗೊಳಿಸಲಾಗಿದೆ.

ಬಿಗ್‌ ಸ್ಕ್ರೀನ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌  ರನ್ನರ್‌ ಅಪ್‌!

ಭಾರೀ ನಿರೀಕ್ಷೆ ಹುಟ್ಟಿಸಿದ ಗುಜರಾತ್‌-ಚೆನ್ನೈ ನಡುವಿನ ಫೈನಲ್‌ ಪಂದ್ಯಕ್ಕೆ ಮಳೆ ಎದುರಾಗಿದೆ. ಈ ಆತಂಕದ ನಡುವೆಯೇ ಅಹ್ಮದಾಬಾದ್‌ನ “ನರೇಂದ್ರ ಮೋದಿ ಸ್ಟೇಡಿಯಂ’ನಲ್ಲಿರುವ ಬಿಗ್‌ ಸ್ಕ್ರೀನ್‌ ಮೇಲೆ ಎಲ್ಲರೂ ಅಚ್ಚರಿಪಡುವಂಥ, ಕ್ರಿಕೆಟ್‌ ಅಭಿಮಾನಿಗಳಿಗೆ ಆಘಾತ ಎದುರಾಗುವಂತಹ ಬರಹವೊಂದು ಮೂಡಿಬಂದಿದೆ. “ರನ್ನರ್‌ ಅಪ್‌ ಚೆನ್ನೈ ಸೂಪರ್‌ ಕಿಂಗ್ಸ್‌’ ಎಂಬ 3 ಸಾಲು ದಿಢೀರನೇ ಪ್ರತ್ಯಕ್ಷವಾಗಿದ್ದು, ಇದರ ಚಿತ್ರವೀಗ ವೈರಲ್‌ ಆಗಿದೆ.

ಹಾಗಾದರೆ 2023ರ ಐಪಿಎಲ್‌ ಫಿಕ್ಸ್‌ ಆಗಿದೆಯೇ? ಇಲ್ಲವಾದರೆ ದೈತ್ಯ ಪರದೆಯಲ್ಲಿ ಇಂಥ ಸಾಲು ಏಕೆ ಕಾಣಿಸಿಕೊಂಡಿತು? ಇದಕ್ಕೇನು ಕಾರಣ? ಹಾಲಿ ಚಾಂಪಿಯನ್‌ ಗುಜರಾತ್‌ ತಂಡ ಪ್ರಶಸ್ತಿ ಉಳಿಸಿಕೊಳ್ಳುವುದೇ? ಚೆನ್ನೈ ಫೈನಲ್‌ನಲ್ಲಿ ಸೋಲುವುದೇ? ಇಂಥ ಹತ್ತಾರು ಪ್ರಶ್ನೆಗಳು ಕ್ರಿಕೆಟ್‌ ಅಭಿಮಾನಿಗಳನ್ನು ಕಾಡತೊಡಗಿವೆ.

ಬಿಗ್‌ ಫೈನಲ್‌ಗೂ ಮುನ್ನ “ಸ್ಕ್ರೀನ್‌ ಟೆಸ್ಟ್‌’ ನಡೆಸುವಾಗ ಈ ಬರಹ ಕಂಡುಬಂದಿತ್ತು. “ಸಿನೆಮಾದ ಟ್ರೇಲರ್‌ ಬದಲು ಕ್ಲೈಮ್ಯಾಕ್ಸನ್ನು ಅಲ್‌ಪೋಡ್‌ ಮಾಡಿದಂತಿದೆ’ ಎಂಬುದಾಗಿ ನೆಟ್ಟಿಗರು ಕಾಲೆಳೆದಿದ್ದಾರೆ.

ಟಾಪ್ ನ್ಯೂಸ್

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

1-wdsa

Asian Games ವೈಯಕ್ತಿಕ ಡ್ರೆಸ್ಸೇಜ್‌: ಅನುಷ್‌ಗೆ ಕಂಚು

1-qwqwqwe

Asian Games ಟೆನಿಸ್‌: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್‌-ಮೈನೆನಿ ಫೈನಲಿಗೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.