IPL Final ನಲ್ಲಿ ಮಳೆಯ ಆಟ; ನಾಳೆ ಗುಜರಾತ್ ಟೈಟಾನ್ಸ್ ಹಾದಿ ಸುಗಮ?
ಬಿಗ್ ಸ್ಕ್ರೀನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್!!!
Team Udayavani, May 28, 2023, 11:08 PM IST
ಅಹ್ಮದಾಬಾದ್: ಸರಾಗವಾಗಿ ಸಾಗಿ ಬಂದ 2023ನೇ ಸಾಲಿನ ಐಪಿಎಲ್ ಫೈನಲ್ ಪಂದ್ಯಕ್ಕೆ ಭಾರಿ ಮಳೆಯ ಕಾಟ ಎದುರಾಗಿದ್ದು ಪಂದ್ಯ ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲ್ಪಟ್ಟಿದೆ. ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ರವಿವಾರ ಇಲ್ಲಿನ “ನರೇಂದ್ರ ಮೋದಿ ಸ್ಟೇಡಿಯಂ’ನಲ್ಲಿ ನಡೆಯಬೇಕಿದ್ದ ಪ್ರಶಸ್ತಿ ಸಮರ ರಾತ್ರಿ 11 ಗಂಟೆಯ ತನಕ ಆರಂಭವಾಗಿಲ್ಲ. ಟಾಸ್ ಕೂಡ ಹಾಕಲು ಸಾಧ್ಯವಾಗಲಿಲ್ಲ.
ಆದರೆ ಹವಾಮಾನ ವರದಿಯಂತೆ ಸೋಮವಾರವೂ ಮಳೆಯ ಭೀತಿ ಇದೆ. ಒಂದು ವೇಳೆ ಮೀಸಲು ದಿನದಂದೂ ಪಂದ್ಯ ನಡೆಯದೇ ಹೋದರೆ ಆಗ ಲೀಗ್ ಹಂತದ ಅಗ್ರಸ್ಥಾನಿಯಾಗಿದ್ದ ಗುಜರಾತ್ ಟೈಟಾನ್ಸ್ ಚಾಂಪಿಯನ್ ಎನಿಸಲಿದೆ.
ಟಾಸ್ ಹಾರಿಸುವುದಕ್ಕೂ ಅರ್ಧ ಗಂಟೆ ಮೊದಲು ಆರಂಭಗೊಂಡ ಮಳೆ 9.15ರ ಹೊತ್ತಿಗೆ ಬಿಡುವು ಕೊಟ್ಟಿತು. ಅಂಗಳಕ್ಕೆ ಹಾಕಿದ್ದ ಹೊದಿಕೆಗಳನ್ನೆಲ್ಲ ತೆಗೆಯಲಾಯಿತು. ಆದರೆ ಅಷ್ಟರಲ್ಲಿ ಪುನಃ ಮಳೆ ಜೋರಾಗಿಯೇ ಸುರಿಯತೊಡಗಿತು.
ಪೂರ್ತಿ 20 ಓವರ್ಗಳ ಪಂದ್ಯಕ್ಕೆ ರಾತ್ರಿ 9.35ರ “ಡೆಡ್ ಲೈನ್’ ವಿಧಿಸಲಾಗಿತ್ತು. 9.45ಕ್ಕೆ ಆರಂಭಗೊಂಡರೆ 19 ಓವರ್ ಪಂದ್ಯ, 10 ಗಂಟೆಗೆ ಪ್ರಾರಂಭವಾದರೆ 17 ಓವರ್ ಪಂದ್ಯ, 10.15ಕ್ಕೆ ಮೊದಲ್ಗೊಂಡರೆ 15 ಓವರ್ಗಳ ಆಟವೆಂದು ತೀರ್ಮಾನಿಸಲಾಗಿತ್ತು. ತಲಾ 5 ಓವರ್ಗಳ ಪಂದ್ಯವಾದರೆ 12.06ರ ಅಂತಿಮ ಸಮಯವನ್ನು ನಿಗದಿಗೊಳಿಸಲಾಗಿದೆ.
ಬಿಗ್ ಸ್ಕ್ರೀನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್!
ಭಾರೀ ನಿರೀಕ್ಷೆ ಹುಟ್ಟಿಸಿದ ಗುಜರಾತ್-ಚೆನ್ನೈ ನಡುವಿನ ಫೈನಲ್ ಪಂದ್ಯಕ್ಕೆ ಮಳೆ ಎದುರಾಗಿದೆ. ಈ ಆತಂಕದ ನಡುವೆಯೇ ಅಹ್ಮದಾಬಾದ್ನ “ನರೇಂದ್ರ ಮೋದಿ ಸ್ಟೇಡಿಯಂ’ನಲ್ಲಿರುವ ಬಿಗ್ ಸ್ಕ್ರೀನ್ ಮೇಲೆ ಎಲ್ಲರೂ ಅಚ್ಚರಿಪಡುವಂಥ, ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ಎದುರಾಗುವಂತಹ ಬರಹವೊಂದು ಮೂಡಿಬಂದಿದೆ. “ರನ್ನರ್ ಅಪ್ ಚೆನ್ನೈ ಸೂಪರ್ ಕಿಂಗ್ಸ್’ ಎಂಬ 3 ಸಾಲು ದಿಢೀರನೇ ಪ್ರತ್ಯಕ್ಷವಾಗಿದ್ದು, ಇದರ ಚಿತ್ರವೀಗ ವೈರಲ್ ಆಗಿದೆ.
ಹಾಗಾದರೆ 2023ರ ಐಪಿಎಲ್ ಫಿಕ್ಸ್ ಆಗಿದೆಯೇ? ಇಲ್ಲವಾದರೆ ದೈತ್ಯ ಪರದೆಯಲ್ಲಿ ಇಂಥ ಸಾಲು ಏಕೆ ಕಾಣಿಸಿಕೊಂಡಿತು? ಇದಕ್ಕೇನು ಕಾರಣ? ಹಾಲಿ ಚಾಂಪಿಯನ್ ಗುಜರಾತ್ ತಂಡ ಪ್ರಶಸ್ತಿ ಉಳಿಸಿಕೊಳ್ಳುವುದೇ? ಚೆನ್ನೈ ಫೈನಲ್ನಲ್ಲಿ ಸೋಲುವುದೇ? ಇಂಥ ಹತ್ತಾರು ಪ್ರಶ್ನೆಗಳು ಕ್ರಿಕೆಟ್ ಅಭಿಮಾನಿಗಳನ್ನು ಕಾಡತೊಡಗಿವೆ.
ಬಿಗ್ ಫೈನಲ್ಗೂ ಮುನ್ನ “ಸ್ಕ್ರೀನ್ ಟೆಸ್ಟ್’ ನಡೆಸುವಾಗ ಈ ಬರಹ ಕಂಡುಬಂದಿತ್ತು. “ಸಿನೆಮಾದ ಟ್ರೇಲರ್ ಬದಲು ಕ್ಲೈಮ್ಯಾಕ್ಸನ್ನು ಅಲ್ಪೋಡ್ ಮಾಡಿದಂತಿದೆ’ ಎಂಬುದಾಗಿ ನೆಟ್ಟಿಗರು ಕಾಲೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ