IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


Team Udayavani, Mar 29, 2024, 7:10 AM IST

Kohli IPL 2024

ಬೆಂಗಳೂರು: ಶುಕ್ರವಾರ ಆತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಕೋಲ್ಕತಾ ನೈಟ್‌ ರೈಡರ್ಸ್‌ ನಡುವೆ ಮಹತ್ವದ ಐಪಿಎಲ್‌ ಮುಖಾಮುಖೀ ನಡೆಯಲಿದೆ. ಎರಡು ಪಂದ್ಯಗಳನ್ನಾಡಿ ಒಂದು ಪಂದ್ಯ ಗೆದ್ದಿರುವ ಬೆಂಗಳೂರು ಮತ್ತು ಮೊದಲನೇ ಪಂದ್ಯದಲ್ಲೇ ಜಯ ಸಾಧಿಸಿರುವ ಕೆಕೆಆರ್‌ಗೆ ತಮ್ಮದೇ ಆದ ಸಮಸ್ಯೆಗಳು ಮತ್ತು ಸಂತೋಷಗಳಿವೆ. ಹಾಗಾಗಿ ಇತ್ತಂಡಗಳಿಗೆ ತಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ತಿಳಿದುಕೊಳ್ಳಲು ಇದು ಸರಿಯಾದ ಅವಕಾಶ.

ಬೆಂಗಳೂರು ತಂಡದ ತಾರೆ ವಿರಾಟ್‌ ಕೊಹ್ಲಿ ತಮ್ಮ ಎಂದಿನ ಶೈಲಿಯ ಬ್ಯಾಟಿಂಗ್‌ಗೆ ಮರಳಿದ್ದಾರೆ. ಚಿನ್ನಸ್ವಾಮಿಯಲ್ಲಿ ನಡೆದ ಹಿಂದಿನ ಪಂದ್ಯದಲ್ಲಿ ಪಂಜಾಬ್‌ ವಿರುದ್ಧ ಸ್ಫೋಟಕ 77 ರನ್‌ ಗಳಿಸಿದ್ದಾರೆ. ಇದು ಆರ್‌ಸಿಬಿಗೆ ಸಂತಸ ತರಿಸಿರಬಹುದು. ಆದರೆ ತಂಡದ ಮುಂದಿರುವ ಸವಾಲುಗಳು ದೊಡ್ಡದೇ ಇವೆ. ಮುಖ್ಯವಾಗಿ ನಾಯಕ ಫಾ ಡು ಪ್ಲೆಸಿಸ್‌, ಪ್ರಮುಖ ಬ್ಯಾಟ್ಸ್‌ಮನ್‌ಗಳಾದ ರಜತ್‌ ಪಾಟಿದಾರ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ ಮಿನುಗಿಲ್ಲ. ಇದು ಹೀಗೆಯೇ ಮುಂದುವರಿದರೆ ಅಪಾಯ ಕಟ್ಟಿಟ್ಟಿದ್ದು.

ಬೌಲಿಂಗ್‌ನಲ್ಲಿ ಅಲ್ಜಾರಿ ಜೋಸೆಫ್ ನಿರೀಕ್ಷಿತ ಪರಿಣಾಮ ಬೀರಿಲ್ಲ. ಅವರ ಜಾಗದಲ್ಲಿ ಇಂಗ್ಲೆಂಡಿನ ರೀಸ್‌ ಟಾಪ್ಲೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಮೊಹಮ್ಮದ್‌ ಸಿರಾಜ್‌, ಯಶ್‌ ದಯಾಳ್‌ ಉತ್ತಮ ಬೌಲಿಂಗ್‌ ಮಾಡಿರುವುದರಿಂದ ಸ್ವಲ್ಪ ಸಮಾಧಾನವಿದೆ.

ಕೋಲ್ಕತಾ ಮೊದಲ ಪಂದ್ಯದಲ್ಲಿ ಹೈದರಾಬಾದ್‌ ತಂಡವನ್ನು 4 ರನ್ನುಗಳಿಂದ ರೋಚಕವಾಗಿ ಸೋಲಿಸಿದೆ. ಇಲ್ಲಿ ತಂಡ ಗೆದ್ದಿದ್ದರೂ ಕೆಕೆಆರ್‌ನ ಹಲವು ದೌರ್ಬಲ್ಯಗಳು ಹೊರಬಿದ್ದಿವೆ. ಮುಖ್ಯವಾಗಿ ತಂಡದ ನಾಯಕ ಶ್ರೇಯಸ್‌ ಅಯ್ಯರ್‌, ವೆಂಕಟೇಶ್‌ ಅಯ್ಯರ್‌, ನಿತೀಶ್‌ ರಾಣಾ ಬ್ಯಾಟಿಂಗ್‌ನಲ್ಲಿ ಸಿಡಿಯಬೇಕಿದೆ. ಶ್ರೇಯಸ್‌ಗೆ ಬೆಂಗಳೂರು ಮೆಚ್ಚಿನ ತಾಣವಾಗಿರುವುದರಿಂದ ಲಯಕ್ಕೆ ಮರಳಲು ಉತ್ತಮ ಅವಕಾಶವಾಗಿದೆ. ಬೌಲಿಂಗ್‌ನಲ್ಲಿ ವರುಣ್‌ ಚಕ್ರವರ್ತಿ, ಐಪಿಎಲ್‌ ಇತಿಹಾಸದ ದುಬಾರಿ ಆಟಗಾರ ಮಿಚೆಲ್‌ ಸ್ಟಾರ್ಕ್‌ ಹಿಂದಿನ ಪಂದ್ಯದಲ್ಲಿ ವೈಫ‌ಲ್ಯ ಕಂಡಿದ್ದಾರೆ. ಈ ಬಾರಿ ಮಿನುಗಬೇಕಿದೆ. ಸುನೀಲ್‌ ನಾರಾಯಣ್‌, ಆ್ಯಂಡ್ರೆ ರಸೆಲ್‌ ತಮ್ಮ ಕೈಚಳಕ ತೋರಬೇಕಿದೆ.

ಅಂಕಣ ಗುಟ್ಟು
ಚಿನ್ನಸ್ವಾಮಿ ಮೈದಾನ ಚಿಕ್ಕದಾಗಿರುವು ದರಿಂದ ಭಾರೀ ಪ್ರಮಾಣದ ರನ್‌ ಹರಿದು ಬರುವುದು ಸಾಮಾನ್ಯ. ಮೊದಲು ಬ್ಯಾಟಿಂಗ್‌ ಮಾಡುವ ತಂಡಕ್ಕೆ ದೊಡ್ಡ ಮೊತ್ತ ಪೇರಿಸುವ ಸವಾಲಿರುತ್ತದೆ. ಸಾಮಾನ್ಯವಾಗಿ ಚಿನ್ನಸ್ವಾಮಿ ಸ್ನೇಹಿ ಪಿಚ್‌. ಕಳೆದ ಪಂದ್ಯದಲ್ಲಿ ಸ್ಪಿನ್ನರ್‌ಗಳು ಹೆಚ್ಚಿನ ಯಶಸ್ಸು ಸಾಧಿಸಿದ್ದರು. ರನ್‌ ಬೆನ್ನತ್ತಿದ ಆರ್‌ಸಿಬಿ ಗೆಲುವು ಸಾಧಿಸಿತ್ತು.

ಸಂಭಾವ್ಯ ತಂಡಗಳು

ಬೆಂಗಳೂರು: ಪ್ಲೆಸಿಸ್‌ (ನಾಯಕ), ಕೊಹ್ಲಿ, ಪಾಟಿದಾರ್‌, ಮ್ಯಾಕ್ಸ್‌ವೆಲ್‌, ಗ್ರೀನ್‌, ಕಾರ್ತಿಕ್‌, ರಾವತ್‌, ಡಾಗರ್‌, ಜೋಸೆಫ್/ಟಾಪ್ಲೆ, ಸಿರಾಜ್‌, ದಯಾಳ್‌.
ಕೆಕೆಆರ್‌: ಸಾಲ್ಟ್, ಎಸ್‌.ನಾರಾಯಣ್‌, ವಿ.ಅಯ್ಯರ್‌, ಶ್ರೇಯಸ್‌ (ನಾಯಕ), ನಿತೀಶ್‌, ರಮಣ್‌ದೀಪ್‌, ರಿಂಕು, ರಸೆಲ್‌, ಸ್ಟಾರ್ಕ್‌, ಹರ್ಷಿತ್‌, ಚಕ್ರವರ್ತಿ.

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.