ರಾಜಸ್ಥಾನ – ಕೊಲ್ಕತ್ತಾ ಮುಖಾಮುಖಿ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ರಾಯಲ್ಸ್
Team Udayavani, Sep 30, 2020, 7:02 PM IST
ದುಬಾಯಿ: ಈ ಬಾರಿಯ IPL T20 ಕೂಟದ 12ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ.
ರಾಜಸ್ಥಾನ ರಾಯಲ್ಸ್ ಹಾಗೂ ಕೊಲ್ಕೊತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಇಂದಿನ ಪಂದ್ಯ ನಡೆಯಲಿದೆ.
ಟಾಸ್ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಕಪ್ತಾನ ದಿನೇಶ್ ಕಾರ್ತಿಕ್ ಅವರು ರಾಜಸ್ಥಾನ ತಂಡವನ್ನು ಬ್ಯಾಟಿಂಗ್ ಗೆ ಇಳಿಸಿದ್ದಾರೆ.
ಇದು ಸಣ್ಣ ಅಂಗಳವಲ್ಲ!
ಆದರೆ ಇಲ್ಲೊಂದು ಸಂಗತಿ ಇದೆ. ರಾಜಸ್ಥಾನ್ ತನ್ನ ಎರಡೂ ಪಂದ್ಯಗಳನ್ನು ಆಡಿದ್ದು ಶಾರ್ಜಾದಲ್ಲಿ. ಇದು ಯುಎಇಯ ಅತೀ ಸಣ್ಣ ಅಂಗಳ. ಬೌಂಡರಿ ಅಂತರವೂ ಚಿಕ್ಕದು. ಹೀಗಾಗಿ ಬಾರಿಸಿದ್ದೆಲ್ಲ ಬೌಂಡರಿ, ಸಿಕ್ಸರ್ ಆಗಿ ಪರಿವರ್ತನೆಗೊಳ್ಳುತ್ತದೆ. ಅಲ್ಲಿನದೇ ರೀತಿಯಲ್ಲಿ ತಮಾಷೆಯಾಗಿ ಹೇಳಬೇಕೆಂದರೆ, ಶಾರ್ಜಾದಲ್ಲಿ ಬಾರಿಸಿದ ಚೆಂಡು ದುಬಾಯಿಗೋ, ಅಬುಧಾಬಿಗೋ ಹೋಗಿ ಬೀಳುತ್ತದೆ! ಆದರೆ ರಾಜಸ್ಥಾನ್ ಮೊದಲ ಸಲ ಶಾರ್ಜಾದ ಆಚೆ ಆಡಲಿಳಿ ಯುತ್ತದೆ. ಹೀಗಾಗಿ ದುಬಾೖ ಅಂಗಳ ಸ್ಮಿತ್ ಪಡೆಗೆ ನಿಜವಾದ ಅಗ್ನಿಪರೀಕ್ಷೆ. ಇಲ್ಲಿಯೂ ಸ್ಫೋಟಕ ಆಟವಾಡಿದರೆ ರಾಜಸ್ಥಾನ್ ನಿಜಕ್ಕೂ ಗ್ರೇಟ್ ಎನಿಸಲಿದೆ.
ಇದನ್ನೂ ಓದಿ: ಕಾರ್ತಿಕ್ ಬಳಗಕ್ಕೆ ಕಾದಿದೆ ರಾಜಸ್ಥಾನ್ ಟೆಸ್ಟ್
ರಕ್ಷಣಾತ್ಮಕ ಆಟ ನಡೆಯದು
ಕೋಲ್ಕತಾ ಕೂಡ ಬಿಗ್ ಹಿಟ್ಟರ್ಗಳನ್ನು ಹೊಂದಿದೆ. ಶುಭಮನ್ ಗಿಲ್, ಆ್ಯಂಡ್ರೆ ರಸೆಲ್, ಸುನೀಲ್ ನಾರಾಯಣ್, ಮಾರ್ಗನ್ ಬಲವನ್ನು ಹೊಂದಿದೆ. ಆದರೆ ಇವರು ರಕ್ಷಣಾತ್ಮಕ ಆಟವನ್ನು ಬದಲಿಸಿ ಮುನ್ನುಗ್ಗಿ ಬಾರಿಸ ಬೇಕಾದುದು ಅನಿವಾರ್ಯ. ಇವರಲ್ಲಿ ಇಬ್ಬರಾದರೂ ಸಿಡಿದು ನಿಲ್ಲುವುದು ಮುಖ್ಯ. ಹಾಗೆಯೇ ಕಾರ್ತಿಕ್ ಕಪ್ತಾನನ ಆಟ ಆಡುವುದೂ ಅಗತ್ಯ. ರಾಜಸ್ಥಾನ್ನಂತೆ ಕೆಕೆಆರ್ ಕೂಡ ಇದೇ ಮೊದಲ ಸಲ ದುಬಾೖಯಲ್ಲಿ ಆಡುತ್ತಿದೆ. ಈ ಸಾಲಿನ ಎರಡೂ ಸೂಪರ್ ಓವರ್ ಪಂದ್ಯಗಳಿಗೆ ಸಾಕ್ಷಿಯಾದ ಸ್ಟೇಡಿಯಂ ಇದಾಗಿದೆ. ಇಲ್ಲಿ 5 ಪಂದ್ಯಗಳು ನಡೆದಿದ್ದು, ಎಲ್ಲದರಲ್ಲೂ ಮೊದಲು ಬ್ಯಾಟಿಂಗ್ ನಡೆಸಿದ ತಂಡಗಳೇ ಗೆಲುವು ಕಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ