ಹಳೆ ಮಾದರಿಗೆ ಮರಳಿದ ಐಪಿಎಲ್‌


Team Udayavani, Sep 23, 2022, 8:00 AM IST

ಹಳೆ ಮಾದರಿಗೆ ಮರಳಿದ ಐಪಿಎಲ್‌

ಹೊಸದಿಲ್ಲಿ: ಐಪಿಎಲ್‌ ಪ್ರಿಯರಿ ಗೊಂದು ಸಿಹಿ ಸುದ್ದಿ. 2023ರ ಐಪಿಎಲ್‌ ಪಂದ್ಯಾವಳಿ ಕೊರೊನಾ ಪೂರ್ವದಲ್ಲಿದ್ದಂತೆ ಹಳೆಯ ಮಾದರಿಗೆ ಮರಳಲಿದೆ. ತವರಿನ ಅಂಗಳ ಹಾಗೂ ಎದುರಾಳಿ ತಂಡದ ತಾಣಗಳೆರಡರಲ್ಲೂ (ಹೋಮ್‌ ಆ್ಯಂಡ್‌ ಎವೇ ಫಾರ್ಮೇಟ್‌) ಪಂದ್ಯಗಳು ನಡೆಯಲಿವೆ ಎಂಬುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ತಿಳಿಸಿದ್ದಾರೆ. ಇದನ್ನು ಆಯಾ ರಾಜ್ಯ ಕ್ರಿಕೆಟ್‌ ಮಂಡಳಿಗಳಿಗೂ ಸೂಚಿಸಿದ್ದಾರೆ.

2020ರಲ್ಲಿ ಕೋವಿಡ್‌-19 ತೀವ್ರಗೊಂಡ ಬಳಿಕ ಐಪಿಎಲ್‌ ಪಂದ್ಯಗಳನ್ನು ಸೀಮಿತ ಕೇಂದ್ರಗಳಲ್ಲಷ್ಟೇ ನಡೆಸಲಾಗುತ್ತಿತ್ತು.

ಈ ಮಾದರಿಯಿಂದಾಗಿ ಕೆಲವು ತಂಡಗಳಿಗೆ ಧಾರಾಳವಾಗಿ ತವರಲ್ಲಿ ಆಡುವ ಅವಕಾಶ ಲಭಿಸುತ್ತಿತ್ತು. ಇನ್ನು ಕೆಲವು ತಂಡಗಳಿಗೆ ಹೋಮ್‌ ಗ್ರೌಂಡ್‌ನ‌ಲ್ಲಿ ಒಂದೂ ಪಂದ್ಯ ಆಡಲಾಗುತ್ತಿರಲಿಲ್ಲ. 2023ರಿಂದ ಈ ವಿಧಾನಕ್ಕೆ ತೆರೆ ಬೀಳಲಿದೆ. ಕೊರೊನಾ ನಿಯಂತ್ರಣದಲ್ಲಿರುವುದರಿಂದ ಇನ್ನು ಪ್ರತೀ ತಂಡಕ್ಕೂ ತವರಿನಂಗಳದಲ್ಲಿ ಹಾಗೂ ಎದುರಾಳಿ ಅಂಗಳದಲ್ಲಿ ಆಡುವ ಅವಕಾಶ ಕಲ್ಪಿಸಲಾಗುವುದು. ಉದಾಹರಣೆಗೆ, ಆರ್‌ಸಿಬಿ-ಕೆಕೆಆರ್‌ ನಡುವಿನ ಮುಖಾಮುಖೀಯ ಒಂದು ಪಂದ್ಯವನ್ನು ಬೆಂಗಳೂರಿನಲ್ಲಿ, ಇನ್ನೊಂದು ಪಂದ್ಯವನ್ನು ಕೋಲ್ಕತಾದಲ್ಲಿ ಆಡಲಾಗುತ್ತದೆ.

ವನಿತಾ ಐಪಿಎಲ್‌ಗೆ ತಯಾರಿ:

ಬಹು ನಿರೀಕ್ಷೆಯ ವನಿತಾ ಐಪಿಎಲ್‌ ಪಂದ್ಯಾವಳಿಯನ್ನು 2023ರಲ್ಲಿ ಆರಂಭಿಸುವ ಉದ್ದೇಶ ಬಿಸಿಸಿಐನದ್ದು. ಇದನ್ನು ಪುರುಷರ ಐಪಿಎಲ್‌ಗ‌ೂ ಮೊದಲೇ ನಡೆಸುವ ಯೋಜನೆ ಹಾಕಿಕೊಳ್ಳಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ವನಿತಾ ಟಿ20 ವಿಶ್ವಕಪ್‌ ಮುಗಿದ ಕೂಡಲೇ, ಮಾರ್ಚ್‌ ತಿಂಗಳಲ್ಲಿ ವನಿತಾ ಐಪಿಎಲ್‌ ಟೂರ್ನಿಯನ್ನು ಆರಂಭಿಸುವ ಬಗ್ಗೆ ಸೌರವ್‌ ಗಂಗೂಲಿ ಸುಳಿವು ನೀಡಿದ್ದಾರೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.