ಚೆನ್ನೈ-ರಾಜಸ್ಥಾನ್ ಮುಖಾಮುಖಿ : ಟಾಸ್ ಗೆದ್ದ ಧೋನಿ ಪಡೆ ಬ್ಯಾಟಿಂಗ್ ಆಯ್ಕೆ
Team Udayavani, Oct 19, 2020, 7:00 PM IST
ಅಬುಧಾಬಿ : ಐಪಿಎಲ್ ನ 37 ನೇ ಪಂದ್ಯದಲ್ಲಿ ಟಾಸ್ ಗೆದ್ದ ಧೋನಿ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ.
ಪ್ರತಿವರ್ಷ ಐಪಿಎಲ್ ನಲ್ಲಿ ಉತ್ತಮವಾಗಿ ಆರಂಭ ಪಡೆದುಕೊಳ್ಳುವ ಧೋನಿ ನೇತೃತ್ವದ ಚೆನ್ನೈ ತಂಡ ಈ ಬಾರಿ ಸತತ ಸೋಲಿನಿಂದ ಕೆಂಗೆಟ್ಟು ಹೋಗಿದೆ. ಉತ್ತಮವಾಗಿ ಬೌಲ್ ಮಾಡಿದ್ರೂ, ಬ್ಯಾಟಿಂಗ್ ನಲ್ಲಿ ವೈಫಲ್ಯ, ಉತ್ತಮವಾಗಿ ಬ್ಯಾಟ್ ಮಾಡಿದ್ರೆ ಬೌಲಿಂಗ್ ನಲ್ಲಿ ವೈಫಲ್ಯ. ಹೀಗೆ ಚೆನ್ನೈ ತಂಡಕ್ಕೆ ಸೋಲು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಸದ್ಯ ಚೆನ್ನೈ ತಂಡ 9 ಪಂದ್ಯಗಳನ್ನು ಆಡಿದ್ದು, 3 ಪಂದ್ಯದಲ್ಲಿ ಗೆಲುವು ಸಾಧಿಸಿದ್ದು, 6 ಪಂದ್ಯದಲ್ಲಿ ಸೋಲು ಅನುಭವಿಸಿ ಅಂಕ ಪಟ್ಟಿಯಲ್ಲಿ 6 ಅಂಕದೊಂದಿಗೆ 7 ನೇ ಸ್ಥಾನದಲ್ಲಿದೆ. ಇದರ ನಡುವೆ ಸ್ಟಾರ್ ಆಟಗಾರ ಡ್ವೇನ್ ಬ್ರಾವೊ ಗಾಯಾಳಾಗಿದ್ದು, ಚೆನ್ನೈ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಚೆನ್ನೈ ಉಳಿದ ಪಂದ್ಯದಲ್ಲಿ ಬಹುತೇಕ ಎಲ್ಲದರಲ್ಲಿ ಗೆಲುವು ಸಾಧಿಸಿದರೆ ಮಾತ್ರ ಮುಂದಿನ ಲೆಕ್ಕಚಾರ ಮಾಡಲು ಸಾಧ್ಯ.
ಇತ್ತ ರಾಜಸ್ಥಾನ್ ತಂಡವೂ ಸೋಲಿನ ಸುಳಿಯಿಂದ ಹೊರ ಬರುವ ಲಕ್ಷಣ ಕಾಣ್ತಾ ಇಲ್ಲ. ಸ್ಮಿತ್ ಪಡೆಯಲ್ಲಿ ಸ್ಟೋಕ್ಸ್ ನಂತಹ ಅಲ್ ರೌಂಡರ್ ಆಟಗಾರ ಮಿಂಚದೆ ಇರುವುದು ತಂಡಕ್ಕೆ ತಲೆನೋವಿನ ಅಂಶವಾಗಿ ಪರಿಣಮಿಸಿದೆ. ಆಡಿದ 9 ಪಂದ್ಯದಲ್ಲಿ 3 ಪಂದ್ಯಗಳನ್ನು ಗೆದ್ದು,6 ಪಂದ್ಯದಲ್ಲಿ ಸೋಲನ್ನು ಅನುಭವಿಸಿ, 6 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಕಡೆಯ ಸ್ಥಾನದಲ್ಲಿದೆ. ಸಂಜು ಸ್ಯಾಮ್ಸನ್ ಪ್ರಾರಂಭದಲ್ಲಿ ತೋರಿಸಿದ ಆಟ ಮುಂದುವರೆಸುವಲ್ಲಿ ವಿಫಲರಾಗುತ್ತಿದ್ದಾರೆ. ಸ್ಟಾರ್ ಆಟಗಾರರ ಮ್ಯಾಜಿಕ್ ರಾಜಸ್ಥಾನ್ ತಂಡದಲ್ಲಿ ನಡೆದ್ರೆ ಮಾತ್ರ ಮುಂದಿನ ಲೆಕ್ಕಚಾರ ಹಾಕಬಹುದು.
ಚೆನ್ನೈ ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಗ್ಗರಿಸಿದ್ದು, ರಾಜಸ್ಥಾನ್ ಆರ್ ಸಿಬಿ ವಿರುದ್ಧ ಸೋಲನ್ನು ಅನುಭವಿಸಿತ್ತು. ಎರಡು ತಂಡಗಳಿಗೂ ಗೆಲುವು ಅನಿವಾರ್ಯತೆ ಆಗಿರುವುದರಿಂದ ಇಂದಿನ ಪಂದ್ಯ ರೋಚಕತೆಯಿಂದ ಸಾಗುವ ನಿರೀಕ್ಷೆಯಿದೆ.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ ಇಲೆವೆನ್): ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್ (ಕೀಪರ್), ಸ್ಟೀವನ್ ಸ್ಮಿತ್ (ನಾಯಕ), ಜೋಸ್ ಬಟ್ಲರ್, ರಿಯಾನ್ ಪರಾಗ್, ರಾಹುಲ್ ತಿವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಅಂಕಿತ್ ರಾಜ್ಪೂತ್, ಕಾರ್ತಿಕ್ ತ್ಯಾಗಿ
ಚೆನ್ನೈ ಸೂಪರ್ ಕಿಂಗ್ಸ್ (ಇಲೆವೆನ್ ಪ್ಲೇಯಿಂಗ್): ಫಾಫ್ ಡು ಪ್ಲೆಸಿಸ್, ಅಫ್ ಡು ಪ್ಲೆಸಿಸ್, ಸ್ಯಾಮ್ ಕರನ್, ಶೇನ್ ವ್ಯಾಟ್ಸನ್, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ನಾಯಕ /ಕೀಪರ್), ರವೀಂದ್ರ ಜಡೇಜಾ, ಕೇದಾರ್ ಜಾಧವ್, ದೀಪಕ್ ಚಹರ್, ಪಿಯೂಷ್ ಚಾವ್ಲಾ, ಶಾರ್ದುಲ್ ಠಾಕೂರ್, ಜೋಶ್ ಹ್ಯಾಜಲ್ವುಡ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ