Gujarat-Chennai ಕ್ವಾಲಿಫೈಯರ್‌ ಕಾದಾಟ:  ಇಂದು ಚೆನ್ನೈ ಅಂಗಳದಲ್ಲಿ ಮೇಲಾಟ

ನಾಳೆ ಲಕ್ನೋ-ಮುಂಬೈ ಎಲಿಮಿನೇಟರ್‌ ಪಂದ್ಯ

Team Udayavani, May 23, 2023, 7:43 AM IST

Gujarat-Chennai ಕ್ವಾಲಿಫೈಯರ್‌ ಕಾದಾಟ:  ಇಂದು ಚೆನ್ನೈ ಅಂಗಳದಲ್ಲಿ ಮೇಲಾಟ

ಚೆನ್ನೈ: ಆರ್‌ಸಿಬಿ ನಿರ್ಗಮನದೊಂದಿಗೆ ಈ ಬಾರಿಯ ಐಪಿಎಲ್‌ ಲೀಗ್‌ ಸ್ಪರ್ಧೆಗೆ ತೆರೆ ಬಿದ್ದಿದೆ. 70 ಪಂದ್ಯಗಳು ರೋಚಕವಾಗಿಯೇ ನಡೆದಿವೆ. ಕ್ರಿಕೆಟ್‌ ಪ್ರೇಮಿಗಳಿಗೆ ಧಾರಾಳ ರಂಜನೆ ಲಭಿಸಿದೆ. ಸೋಮವಾರದ ವಿರಾಮದ ಬಳಿಕ ಪ್ಲೇ ಆಫ್ ಸ್ಪರ್ಧೆ ಗಳು ಕಾವೇರಿಸಿಕೊಳ್ಳಲಿವೆ.

ಲೀಗ್‌ ಹಂತದಲ್ಲಿ ಮೊದಲೆರಡು ಸ್ಥಾನ ಅಲಂಕರಿಸಿದ ಗುಜರಾತ್‌ ಟೈಟಾನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಮಂಗಳವಾರ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಸೆಣಸಲಿವೆ. ಗೆದ್ದವರು ನೇರವಾಗಿ ಫೈನಲ್‌ ಪ್ರವೇಶಿಸಲಿದ್ದಾರೆ. ಸೋತವರಿಗೆ ಎಂದಿನಂತೆ ಇನ್ನೊಂದು ಅವಕಾಶವಿದೆ.

ಬುಧವಾರ ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ನಡುವೆ ಎಲಿಮಿನೇಟರ್‌ ಪಂದ್ಯ ಏರ್ಪಡಲಿದೆ. ಇಲ್ಲಿ ಸೋತ ತಂಡ ಕೂಟದಿಂದ ನಿರ್ಗಮಿಸಲಿದೆ. ಈ ಎರಡೂ ಪಂದ್ಯಗಳ ತಾಣ ಚೆನ್ನೈ.

ಗುಜರಾತ್‌ 3-0 ಮುನ್ನಡೆ
ಗುಜರಾತ್‌ ಟೈಟಾನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಈ ಸೀಸನ್‌ನ ಉದ್ಘಾಟನ ಪಂದ್ಯದಲ್ಲಿ ಎದು ರಾಗಿದ್ದವು. ಅಹ್ಮದಾಬಾದ್‌ನಲ್ಲಿ ನಡೆದ ಈಮುಖಾಮುಖಿಯಲ್ಲಿ ಗುಜರಾತ್‌ 5 ವಿಕೆಟ್‌ಗಳಿಂದ ಧೋನಿ ಪಡೆಯನ್ನು ಮಗುಚಿತ್ತು. ಇದರೊಂದಿಗೆ ಚೆನ್ನೈ ವಿರುದ್ಧ ಆಡಿದ ಎಲ್ಲ 3 ಪಂದ್ಯ ಗಳಲ್ಲೂ ಜಯ ಸಾಧಿಸಿದ ಹಿರಿಮೆ ಗುಜರಾತ್‌ ತಂಡದ್ದಾಯಿತು. ಇದೀಗ ಪಾಂಡ್ಯ ಪಡೆಯ ವಿರುದ್ಧ ಸೇಡು ತೀರಿಸಿಕೊಳ್ಳಲು ಧೋನಿ ಬಳಗಕ್ಕೆ ಉತ್ತಮ ಅವಕಾಶವೊಂದ ಲಭಿಸಿದೆ. ಪಂದ್ಯ ಚೆನ್ನೈಯಲ್ಲಿ ನಡೆಯುವುದರಿಂದ ಧೋನಿಟೀಮ್‌ಗೆ ಲಾಭವಾದೀತು ಎಂಬು ದೊಂದು ಲೆಕ್ಕಾಚಾರ.

ಚೆನ್ನೈ 14 ಪಂದ್ಯಗಳಲ್ಲಿ ಎಂಟನ್ನು ಗೆದ್ದು ದ್ವಿತೀಯ ಸ್ಥಾನಿಯಾಗಿತ್ತು. ಆದರೆ “ಎಂ.ಎ. ಚಿದಂಬರಂ ಸ್ಟೇಡಿಯಂ’ನಲ್ಲಿ ಮಿಶ್ರ ಫ‌ಲ ಅನುಭವಿಸಿತ್ತು. ಆಡಿದ 7 ಪಂದ್ಯಗಳಲ್ಲಿ ಐದನ್ನು ಗೆದ್ದು ಮೂರರಲ್ಲಿ ಸೋಲನುಭವಿಸಿತ್ತು. ಸತತ 2 ಗೆಲುವು ಸಾಧಿಸಿದ್ದು ಒಮ್ಮೆ ಮಾತ್ರ. ಕೋಲ್ಕತಾ ವಿರುದ್ಧ ಇಲ್ಲಿ ಆಡಿದ ಕೊನೆಯ ಪಂದ್ಯವನ್ನು 6 ವಿಕೆಟ್‌ಗಳಿಂದ ಕಳೆದುಕೊಂಡಿತ್ತು.

ಗುಜರಾತ್‌ ತಂಡ ಚೆನ್ನೈಯಲ್ಲಿ ಆಡುತ್ತಿರುವುದು ಇದೇ ಮೊದಲು. ಹೀಗಾಗಿ “ಎಲ್ಲೋ ಆರ್ಮಿ’ ಫ್ಯಾನ್ಸ್‌ ಸಮ್ಮುಖದಲ್ಲಿ ಪಾಂಡ್ಯ ಪಡೆ ಎಂಥ ಪ್ರದರ್ಶನ ನೀಡಬಹುದು ಎಂಬ ಕುತೂಹಲ ಇದ್ದೇ ಇದೆ.

ಸಮಬಲದ ತಂಡಗಳು
ಮೇಲ್ನೋಟಕ್ಕೆ ಚೆನ್ನೈ ಮತ್ತು ಗುಜರಾತ್‌ ಸಮಬಲದ ತಂಡಗಳಾಗಿ ಗೋಚರಿಸುತ್ತಿವೆ. ಎರಡೂ ತಂಡಗಳ ನಾಯಕತ್ವ ಬಲಿಷ್ಠವಾಗಿದೆ. ಆಯ್ಕೆ ಪ್ರಕ್ರಿಯೆ ಸಮತೋಲನದಿಂದ ಕೂಡಿದೆ. ಕೊನೆಯ ನಿಮಿಷದ ತನಕ ಹೋರಾಡುವ ಕೆಚ್ಚು ಎರಡೂ ತಂಡಗಳ ವೈಶಿಷ್ಟé. ಹೀಗಾಗಿ ಸ್ಪರ್ಧೆ ಅತ್ಯಂತ ರೋಚಕವಾಗಿ ಸಾಗುವುದರಲ್ಲಿ ಅನುಮಾನವಿಲ್ಲ.

ಚೆನ್ನೈ ಆರಂಭಿಕರಾದ ಕಾನ್ವೇ- ಗಾಯಕ್ವಾಡ್‌ ಉತ್ತಮ ಫಾರ್ಮ್ ನಲ್ಲಿದ್ದಾರೆ. ರಹಾನೆ, ದುಬೆ ಮತ್ತಿಬ್ಬರು ಅಪಾಯಕಾರಿ ಆಟಗಾರರು. ದುಬೆ ಈಗಾಗಲೇ 33 ಸಿಕ್ಸರ್‌ ಸಿಡಿಸಿ ಪ್ರಚಂಡ ಫಾರ್ಮ್ ತೆರೆದಿರಿಸಿದ್ದಾರೆ. ಆದರೆ ತಂಡದ ಕೆಳ ಕ್ರಮಾಂಕದ ಬ್ಯಾಟಿಂಗ್‌ ನಿರೀಕ್ಷಿತ ಯಶಸ್ಸು ಕಾಣುತ್ತಿಲ್ಲ. ಅಲಿ, ರಾಯುಡು, ಜಡೇಜ ಮತ್ತು ಧೋನಿ ಸಿಡಿದು ನಿಲ್ಲಬೇಕಾದ ಅಗತ್ಯ ಎಂದಿಗಿಂತ ಹೆಚ್ಚಿದೆ.

ಚೆನ್ನೈ ಬೌಲಿಂಗ್‌ ವೈವಿಧ್ಯಮಯ. ಲಂಕೆಯ ತೀಕ್ಷಣ ಮತ್ತು ಪತಿರಣ ಸೇರಿಕೊಂಡು ಎದುರಾಳಿಯನ್ನು ಕೆಡವಲು ರಣವ್ಯೂಹ ಹೆಣೆಯುವಲ್ಲಿ ನಿಷ್ಣಾತರು. ದೀಪಕ್‌ ಚಹರ್‌, ತುಷಾರ್‌ ದೇಶಪಾಂಡೆ, ಜಡೇಜ ಕೂಡ ಅಪಾಯಕಾರಿ ಆಗಬಲ್ಲರು ಗಿಲ್‌ ಫ್ಯಾಕ್ಟರ್‌ ಸತತ ಎರಡು ಶತಕ ಬಾರಿಸಿ ಪ್ರಚಂಡ ಫಾರ್ಮ್ ಪ್ರದರ್ಶಿಸಿರುವ ಶುಭಮನ್‌ ಗಿಲ್‌ ಗುಜರಾತ್‌ ಪಾಲಿನ ದೊಡ್ಡ ಬ್ಯಾಟಿಂಗ್‌ ಅಸ್ತ್ರವಾಗಿದ್ದಾರೆ. ಆದರೆ ಸಾಹಾ ಇವರಿಗೆ ಅಷ್ಟು ಸೂಕ್ತ ಜತೆಗಾರನಾಗಿಲ್ಲ. ಕಳೆದ ಪಂದ್ಯದಲ್ಲಿ ಆರ್‌ಸಿಬಿಯನ್ನು ಕಾಡಿದ ವಿಜಯ್‌ ಶಂಕರ್‌, ಹಾರ್ದಿಕ್‌ ಪಾಂಡ್ಯ, ಡೇವಿಡ್‌ ಮಿಲ್ಲರ್‌, ಅಭಿನವ್‌ ಮನೋಹಾರ್‌, ಸಾಯಿ ಸುದರ್ಶನ್‌, ರಾಹುಲ್‌ ತೆವಾಟಿಯ, ರಶೀದ್‌ ಖಾನ್‌ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ವೈವಿಧ್ಯಮಯ.

ಬೌಲಿಂಗ್‌ ವಿಭಾಗ ಶಮಿ, ರಶೀದ್‌ ಖಾನ್‌ ಮತ್ತು ನೂರ್‌ ಅಹ್ಮದ್‌ ಅವರನ್ನು ನೆಚ್ಚಿಕೊಂಡಿದೆ. ಶಮಿ ಮತ್ತು ರಶೀದ್‌ ಈಗಾಗಲೇ ತಲಾ 24 ವಿಕೆಟ್‌ ಬೇಟೆಯಾಡಿದ್ದಾರೆ. ಮೋಹಿತ್‌ ಶರ್ಮ ಬದಲು ಶಿವಂ ಮಾವಿ, ದಸುನ್‌ ಶಣಕ ಬದಲು ಜೋಶುವ ಲಿಟ್ಲ ಆಡಲಿಳಿಯಬಹುದು.

ಆದರೆ ಚೆನ್ನೈ ಟ್ರ್ಯಾಕ್‌ ಈವರೆಗೆ ಅನಿಶ್ಚಿತವಾಗಿ ವರ್ತಿಸುತ್ತ ಬಂದಿದೆ. ಕೆಲವೊಮ್ಮೆ ಬೌಲರ್‌ಗಳಿಗೆ, ಕೆಲವು ಸಲ ಬ್ಯಾಟರ್‌ಗಳಿಗೆ ನೆರವು ನೀಡಿದೆ. ಕ್ವಾಲಿಫೈಯರ್‌ ಪಂದ್ಯದ ಪಿಚ್‌ ಹೇಗಿ ದ್ದೀತು ಎಂಬ ಕುತೂಹಲ ಸಹಜ.

ಪ್ಲೇ ಆಫ್ ತಂಡಗಳ ಸ್ವಾರಸ್ಯ!
– ಕ್ವಾಲಿಫೈಯರ್‌ನಲ್ಲಿ ಸೆಣಸಲಿರುವ ಚೆನ್ನೈ ತಂಡ ಗುಜರಾತ್‌ ವಿರುದ್ಧ ಆಡಿದ ಎಲ್ಲ ಮೂರು ಪಂದ್ಯಗಳಲ್ಲಿ ಸೋತಿದೆ.
– ಎಲಿಮಿನೇಟರ್‌ನಲ್ಲಿ ಆಡಲಿರುವ ಮುಂಬೈ ತಂಡ ಲಕ್ನೋ ವಿರುದ್ಧ ಎಲ್ಲ ಮೂರು ಪಂದ್ಯಗಳಲ್ಲೂ ಮುಗ್ಗರಿಸಿದೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.