ಇರಾನಿ ಕಪ್‌: 800 ರನ್‌ ಪೇರಿಸಿದ ವಿದರ್ಭ


Team Udayavani, Mar 18, 2018, 6:35 AM IST

Vidarbha-bowler-RN-Gurbani.jpg

ನಾಗ್ಪುರ: ರಣಜಿ ಚಾಂಪಿಯನ್‌ ವಿದರ್ಭ ಹೊಸ ದಾಖಲೆ ನಿರ್ಮಿಸಿದೆ. ಇರಾನಿ ಕಪ್‌ ಇತಿಹಾಸದಲ್ಲಿ 800 ರನ್‌ ಪೇರಿಸಿದ ಮೊದಲ ತಂಡವೆಂಬ ಹಿರಿಮೆಗೆ ಪಾತ್ರವಾಗಿದೆ. ಶೇಷ ಭಾರತ ವಿರುದ್ಧ ನಡೆಯುತ್ತಿರುವ ಪಂದ್ಯದ 4ನೇ ದಿನವಾದ ಶನಿವಾರ ವಿದರ್ಭ ಈ ದಾಖಲೆ ಬರೆಯಿತು. ಒಟ್ಟು 226.3 ಓವರ್‌ಗಳ ಬ್ಯಾಟಿಂಗ್‌ ನಡೆಸಿ 7 ವಿಕೆಟಿಗೆ ಭರ್ತಿ 800 ರನ್‌ ಪೇರಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿತು.

ಜವಾಬಿತ್ತ ಶೇಷ ಭಾರತ 6 ವಿಕೆಟಿಗೆ 236 ರನ್‌ ಗಳಿಸಿ ತೀವ್ರ ಸಂಕಟಕ್ಕೆ ಸಿಲುಕಿದೆ. ರಣಜಿ ಹೀರೋ ರಜನೀಶ್‌ ಗುರ್ಬಾನಿ 4 ವಿಕೆಟ್‌ ಉರುಳಿಸಿ ಕರುಣ್‌ ನಾಯರ್‌ ಪಡೆಯನ್ನು ಕಾಡಿದ್ದಾರೆ. ಆರಂಭಕಾರ ಪೃಥ್ವಿ ಶಾ (51), ಹನುಮ ವಿಹಾರಿ (ಬ್ಯಾಟಿಂಗ್‌ 81) ಮತ್ತು ಜಯಂತ್‌ ಯಾದವ್‌ (ಬ್ಯಾಟಿಂಗ್‌ 62) ಹೊರತುಪಡಿಸಿ ಉಳಿದವರ್ಯಾರೂ ಬ್ಯಾಟಿಂಗ್‌ನಲ್ಲಿ ಕ್ಲಿಕ್‌ ಆಗಲಿಲ್ಲ. ಅದರಲ್ಲೂ ಕರ್ನಾಟಕದ ಕ್ರಿಕೆಟಿಗರು ತೀವ್ರ ವೈಫ‌ಲ್ಯ ಅನುಭವಿಸಿದರು. ಆರ್‌. ಸಮರ್ಥ್ ಖಾತೆಯನ್ನೇ ತೆರೆಯಲಿಲ್ಲ. ಮಾಯಾಂಕ್‌ ಅಗರ್ವಾಲ್‌ ಕೇವಲ 11 ರನ್‌ ಮಾಡಿದರೆ, ನಾಯಕ ಕರುಣ್‌ ನಾಯರ್‌ 21 ರನ್‌ ಗಳಿಸಿ ನಿರ್ಗಮಿಸಿದರು.

ಶೇಷ ಭಾರತದ 6 ವಿಕೆಟ್‌ 98 ರನ್‌ ಆಗುವಷ್ಟರಲ್ಲಿ ಉರುಳಿತ್ತು. ಆಗ ಜತೆಗೂಡಿದ ಹನುಮ ವಿಹಾರಿ-ಜಯಂತ್‌ ಯಾದವ್‌ ಮುರಿಯದ 7ನೇ ವಿಕೆಟಿಗೆ 138 ರನ್‌ ಪೇರಿಸಿದರು.ವಿದರ್ಭ 5ಕ್ಕೆ 702 ರನ್‌ ಮಾಡಿದಲ್ಲಿಂದ 4ನೇ ದಿನದಾಟ ಮುಂದುವರಿಸಿತ್ತು. 99 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದ ಗಣೇಶ್‌ ಸತೀಶ್‌ 157ರ ತನಕ ಬ್ಯಾಟಿಂಗ್‌ ವಿಸ್ತರಿಸಿದರು (221 ಎಸೆತ, 16 ಬೌಂಡರಿ).

ಶೇಷ ಭಾರತ ಪರ 8 ಮಂದಿ ಬೌಲಿಂಗ್‌ ದಾಳಿಗಿಳಿದರು. ಸಿದ್ಧಾರ್ಥ್ ಕೌಲ್‌ 91 ರನ್ನಿಗೆ 2 ವಿಕೆಟ್‌ ಕಿತ್ತು ಹೆಚ್ಚಿನ ಯಶಸ್ಸು ಕಂಡರು.

ರವಿವಾರ ಪಂದ್ಯದ ಅಂತಿಮ ದಿನವಾಗಿದ್ದು, ಮೊದಲ ಸಲ ರಣಜಿ ಟ್ರೋಫಿ ಗೆದ್ದ ವಿದರ್ಭ ಮೊದಲ ಬಾರಿಗೆ ಇರಾನಿ ಕಪ್‌ ಗೆಲ್ಲುವುದು ಖಾತ್ರಿಯಾಗಿದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.