ವಿಹಾರಿ ಶತಕ, ಮಾಯಾಂಕ್‌ ಅರ್ಧಶತಕ


Team Udayavani, Feb 13, 2019, 12:30 AM IST

b-14.jpg

ನಾಗ್ಪುರ: ಕನ್ನಡಿಗ ಮಾಯಾಂಕ್‌ ಅಗರ್ವಾಲ್‌ (95 ರನ್‌) ಹಾಗೂ ಹನುಮ ವಿಹಾರಿ (114 ರನ್‌) ಅವರ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಹಾಲಿ ರಣಜಿ ಚಾಂಪಿಯನ್‌ ವಿದರ್ಭ ವಿರುದ್ಧದ ಇರಾನಿ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಶೇಷ ಭಾರತ ಮೊದಲ ದಿನ ಪ್ರಥಮ ಇನ್ನಿಂಗ್ಸ್‌ನಲ್ಲಿ 330 ರನ್‌ ಪೇರಿಸಿ ಆಲೌಟಾಗಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಶೇಷ ಭಾರತಕ್ಕೆ ಮಾಯಾಂಕ್‌ ಅಗರ್ವಾಲ್‌ ಹಾಗೂ ಅನ್ಮೋಲ್‌ಪ್ರೀತ್‌ ಸಿಂಗ್‌ (15 ರನ್‌) ನೆರವಾದರು. ಇವರಿಬ್ಬರು ಮೊದಲ ವಿಕೆಟಿಗೆ 46 ರನ್‌ ಜತೆಯಾಟ ನಿರ್ವಹಿಸಿ ಉತ್ತಮ ಆರಂಭ ನೀಡಿದರು. ಎರಡನೇ ವಿಕೆಟಿಗೆ ಒಂದಾದ ಮಾಯಾಂಕ್‌ ಹಾಗೂ ಹನುಮ ವಿಹಾರಿ 125 ರನ್‌ ಜತೆಯಾಟ ನಡೆಸಿ ತಂಡ ಭಾರೀ ಮೊತ್ತ ಪೇರಿಸುವ ಸೂಚನೆ ನೀಡಿದರು. ಆದರೆ ಈ ಹಂತದಲ್ಲಿ ಮಾಯಾಂಕ್‌ ಔಟಾದರು. ಕೇವಲ 5 ರನ್‌ ಅಂತರದಿಂದ ಅವರು ಶತಕ ತಪ್ಪಿಸಿಕೊಂಡರು. 134 ಎಸೆತ ಎದುರಿಸಿದ ಮಾಯಾಂಕ್‌ 10 ಬೌಂಡರಿ, 3 ಸಿಕ್ಸರ್‌ ಮೂಲಕ ಗುಡುಗಿದರು. 

ಅಗರ್ವಾಲ್‌ ಪತನದ ಬಳಿಕ ಶೇಷ ಭಾರತ ದಿಢೀರ್‌ ಕುಸಿತ ಅನುಭವಿಸಿತು. ಅಗ್ರ ಕ್ರಮಾಂಕದಲ್ಲಿ ನಾಯಕ ಅಜಿಂಕ್ಯ ರಹಾನೆ (13 ರನ್‌) ಶ್ರೇಯಸ್‌ ಅಯ್ಯರ್‌ (19 ರನ್‌), ಇಶಾನ್‌ ಕಿಶನ್‌ (2 ರನ್‌), ಕೆ.ಗೌತಮ್‌ (7 ರನ್‌) ಪೆವಿಲಿಯನ್‌ಗೆ ಪರೇಡ್‌ ನಡೆಸಿದರು. ಇದರಿಂದಾಗಿ ತಂಡ ದೊಡ್ಡ ಮೊತ್ತವನ್ನು ಒಟ್ಟುಗೂಡಿಸುವಲ್ಲಿ ಹಿನ್ನಡೆ ಅನುಭವಿಸಿತು.  ಹನುಮ ವಿಹಾರಿ ಒಟ್ಟು 211 ಎಸೆತ ಎದುರಿಸಿ 11 ಬೌಂಡರಿ ಮತ್ತು 2 ಸಿಕ್ಸರ್‌ ಮೂಲಕ ಶತಕ ಬಾರಿಸಿದ್ದರಿಂದ ಶೇಷ ಭಾರತ ಸಾಧಾರಣ ಮೊತ್ತ ಪೇರಿಸುವಂತಾಯಿತು. 

ವಿದರ್ಭ ಬಿಗು ದಾಳಿ
ವಿದರ್ಭ ಬೌಲರ್‌ಗಳಾದ ಆದಿತ್ಯ ಸರ್ವಟೆ (99ಕ್ಕೆ 3), ಅಕ್ಷಯ್‌ ವಖಾರೆ (62ಕ್ಕೆ 3) ಹಾಗೂ ರಜನೀಶ್‌ ಗುರ್ಬಾನಿ (58ಕ್ಕೆ 2) ಬಿಗು ಬೌಲಿಂಗ್‌ ನಡೆಸಿ ಶೇಷ ಭಾರತಕ್ಕೆ ಆಘಾತ ನೀಡಿದರು. ಪರಿಣಾಮ ಶೇಷ ಭಾರತದ ಮಧ್ಯಮ ಕ್ರಮಾಂಕ ಕುಸಿಯಿತು.

ಸಂಕ್ಷಿಪ್ತ ಸ್ಕೋರು: ಶೇಷಭಾರತ ಪ್ರಥಮ ಇನ್ನಿಂಗ್ಸ್‌ 330 ಆಲೌಟ್‌ (ಮಾಯಾಂಕ್‌ ಅಗರ್ವಾಲ್‌ 95, ಹನುಮ ವಿಹಾರಿ 114, ರಾಹುಲ್‌ ಚಾಹರ್‌ 22, ರಜಪೂತ್‌ 25, ಆದಿತ್ಯ ಸರ್ವಟೆ 99ಕ್ಕೆ 3, ಅಕ್ಷಯ್‌ ವಖಾರೆ 62ಕ್ಕೆ 3, ರಜನೀಶ್‌ ಗುರ್ಬಾನಿ 58ಕ್ಕೆ 2).

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.