

Team Udayavani, Aug 15, 2023, 10:54 AM IST
ಮುಂಬೈ: ವೆಸ್ಟ್ ಇಂಡೀಸ್ ಸರಣಿ ಅಂತ್ಯವಾಗಿದ್ದು, ಇನ್ನು ಭಾರತ ತಂಡವು ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ. ಮೂರು ಪಂದ್ಯಗಳ ಟಿ20 ಸರಣಿಗಾಗಿ ಜಸ್ಪ್ರೀತ್ ಬುಮ್ರಾ ಮತ್ತು ಸದಸ್ಯರು ಡಬ್ಲಿನ್ ಪ್ರಯಾಣ ಬೆಳೆಸಿದ್ದಾರೆ.
ವರ್ಷದ ನಂತರ ತಂಡಕ್ಕೆ ಮರಳಿರುವ ಜಸ್ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ದ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಅವರೊಂದಿಗೆ ಗಾಯದಿಂದ ಚೇತರಿಸಿರುವ ಕನ್ನಡಿಗ ಪ್ರಸಿಧ್ ಕೃಷ್ಣ ಕೂಡಾ ಐರ್ಲೆಂಡ್ ಪ್ರವಾಸಕ್ಕೆ ತೆರಳಿದ್ದಾರೆ.
ಬುಮ್ರಾ ಕಳೆದ ವರ್ಷ ಯುಎಇಯಲ್ಲಿ ನಡೆದ ಏಷ್ಯಾ ಕಪ್ 2022 ರ ಬಳಿಕ ಬೆನ್ನುನೋವಿನ ಕಾರಣದಿಂದ ತಂಡದಿಂದ ಹೊರಗುಳಿದಿದ್ದರು. ಶುಕ್ರವಾರ ಪ್ರಾರಂಭವಾಗುವ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೂಲಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳಲಿದ್ದಾರೆ.
ಇಂದು ಬುಮ್ರಾ ಮತ್ತು ತಂಡವು ಐರ್ಲೆಂಡ್ ಗೆ ಹಾರಿರುವ ಚಿತ್ರಗಳನ್ನು ಬಿಸಿಸಿಐ ಪೋಸ್ಟ್ ಮಾಡಿದ್ದಾರೆ. ನಾಯಕ ಜಸ್ಪ್ರೀತ್ ಬುಮ್ರಾ, ರುತುರಾಜ್ ಗಾಯಕ್ವಾಡ್, ಪ್ರಸಿಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಶಿವಂ ದುಬೆ ಅವರ ಚಿತ್ರಗಳನ್ನು ಕಾಣಬಹುದು.
ಇವರಲ್ಲಿ ರಿಂಕು ಸಿಂಗ್ ಅವರು ಮೊದಲ ರಾಷ್ಟ್ರೀಯ ಕರೆ ಪಡೆದಿದ್ದರೆ, ಹಲವು ಸಮಯದಿಂದ ತಂಡದಿಂದ ಹೊರಗಿದ್ದು ಈ ಬಾರಿಯ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಶಿವಂ ದುಬೆ ಮತ್ತೆ ತಂಡ ಸೇರಿದ್ದಾರೆ.
Ireland ??, here we come ✈️ #TeamIndia | #IREvIND pic.twitter.com/A4P66WZJzP
— BCCI (@BCCI) August 15, 2023
ತಂಡದ ಉಳಿದ ಸದಸ್ಯರಾದ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಅರ್ಶದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್ ಅವರು ವೆಸ್ಟ್ ಇಂಡೀಸ್ನಿಂದ ನೇರವಾಗಿ ಐರ್ಲೆಂಡ್ ನಲ್ಲಿ ಬುಮ್ರಾ ತಂಡವನ್ನು ಸೇರಿಕೊಳ್ಳಲಿದ್ದಾರೆ.
Ad
You seem to have an Ad Blocker on.
To continue reading, please turn it off or whitelist Udayavani.