ಜೈಪುರ್ ತಂಡಕ್ಕೆ ಅಪರೂಪದ ಜಯ
Team Udayavani, Dec 10, 2018, 9:33 AM IST
ವಿಶಾಖಪಟ್ಟಣ: ಪ್ರೊ ಕಬಡ್ಡಿ ಆರನೇ ಆವೃತ್ತಿ ಅಂತರ್ ವಲಯ “ಚಾಲೆಂಜ್ ವೀಕ್’ನ ಪಂದ್ಯದಲ್ಲಿ ತಮಿಳ್ ತಲೈವಾಸ್ ವಿರುದ್ಧ 24-37 ಅಂತರದಿಂದ ಜೈಪುರ ಪಿಂಕ್ ಪ್ಯಾಂಥರ್ ಗೆಲುವು ಗಳಿಸಿತು. ಸತತ ವೈಫಲ್ಯಗಳ ಬಳಿಕ ಜೈಪುರ್ ಈ ಜಯ ಸಾಧಿಸಿ ಸಮಾಧಾನಪಟ್ಟಿತು.
ರವಿವಾರ ವಿಶಾಖಪಟ್ಟಣದ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದೀಪಕ್ ಹೂಡಾ ಜೈಪುರದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ದೀಪಕ್ ಒಟ್ಟು 9 ಅಂಕಗಳನ್ನು ರೈಡಿಂಗ್ನಿಂದ ತಂಡಕ್ಕೆ ತಂದುಕೊಟ್ಟರು. ಇವರಿಗೆ ಆನಂದ್ ಪಾಟೀಲ್ (5 ಅಂಕ) ಹಾಗೂ ಅಜಿಂಕ್ಯ ಪವಾರ್ (4 ಅಂಕ) ರೈಡಿಂಗ್ ಮೂಲಕ ಸಾಥ್ ನೀಡಿದರು. ಸುನಿಲ್ ಸಿದ್ಧಗಾವಲಿ ಪ್ರಚಂಡ ಟ್ಯಾಕಲ್ ನಡೆಸಿದರು. ಒಟ್ಟು 6 ಅಂಕ ಕಲೆ ಹಾಕಿ ತಂಡದ ಗೆಲುವನ್ನು ಸಾರಿದರು.
ತಲೈವಾಸ್ ಪರ ತಾರಾ ಆಟಗಾ ರರಾದ ಅಜಯ್ ಕುಮಾರ್ (2 ಅಂಕ), ಜಸ್ವೀರ್ ಸಿಂಗ್ (3 ಅಂಕ) ಹಾಗೂ ಮಂಜಿತ್ ಚಿಲ್ಲರ್ (0 ) ಕಳಪೆ ಆಟ ನಿರ್ವಹಿಸಿದ್ದು ತಂಡಕ್ಕೆ ಕುತ್ತಾಗಿ ಪರಿಣಮಿಸಿತು. ಇದರಿಂದ ತಮಿಳ್ ಪಡೆ ಭಾರೀ ಹಿನ್ನಡೆ ಕಾಣುವಂತಾಯಿತು. ಕರ್ನಾಟಕದ ರೈಡರ್ ಸುಕೇಶ್ ಹೆಗ್ಡೆ (6 ಅಂಕ) ರೈಡಿಂಗ್ ಮೂಲಕ ಸ್ವಲ್ಪ ಮಿಂಚಿದರು. ಒಟ್ಟಾರೆ ಒಂದು ತಂಡವಾಗಿ ಆಡದೆ ತಲೈವಾಸ್ ಸೋಲು ಅನುಭವಿಸಿತು.
ಆತಿಥೇಯರಿಗೆ ಗೆಲುವು
ದಿನದ ದ್ವಿತೀಯ ಪಂದ್ಯದಲ್ಲಿ ಆತಿಥೇಯ ತೆಲುಗು ಟೈಟಾನ್ಸ್ 35-31 ಅಂತರದಿಂದ ಹರ್ಯಾಣ ಸ್ಟೀಲರ್ ತಂಡವನ್ನು ಮಣಿಸಿ ತವರಿನಲ್ಲಿ ಸತತ 2ನೇ ಗೆಲುವು ಸಾಧಿಸಿತು.
ಸೋಮವಾರ ಪ್ರೊ ಕಬಡ್ಡಿ ಪಂದ್ಯಗಳಿಗೆ ವಿರಾಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…