ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡ ಪ್ರಕಟ; ಪೂಜಾರಗಿಲ್ಲ ಜಾಗ, ಯಶಸ್ವಿ ಜೈಸ್ವಾಲ್ ಗೆ ಸ್ಥಾನ
Team Udayavani, Jun 23, 2023, 3:26 PM IST
ಮುಂಬೈ: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಸೋಲಿನ ಬಳಿಕ ಭಾರತ ಟೆಸ್ಟ್ ತಂಡದಲ್ಲಿ ನಿರೀಕ್ಷಿತ ಬದಲಾವಣೆಯಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಟೆಸ್ಟ್ ತಂಡದಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಅವರನ್ನು ಕೈ ಬಿಡಲಾಗಿದ್ದು, ಯಶಸ್ವಿ ಜೈಸ್ವಾಲ್ ಮೊದಲ ರಾಷ್ಟ್ರೀಯ ತಂಡದ ಕರೆ ಪಡೆದಿದ್ದಾರೆ.
ರೋಹಿತ್ ಶರ್ಮಾ ಅವರು ನಾಯಕರಾಗಿ ಮುಂದುವರಿದಿದ್ದು, ಪ್ರಮುಖ ತಂಡವನ್ನು ವಿಂಡೀಸ್ ಗೆ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ. ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿದ್ದ ಅಜಿಂಕ್ಯ ರಹಾನೆ ಟೆಸ್ಟ್ ತಂಡದ ಉಪ ನಾಯಕರಾಗಿದ್ದಾರೆ.
ಎರಡೂ ತಂಡದಲ್ಲಿ ವೇಗಿಗಳಾದ ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಮುಖೇಶ್ ಕುಮಾರ್ ಅವರು ಎರಡೂ ತಂಡದಲ್ಲಿದ್ದು, ಟೆಸ್ಟ್ ತಂಡಕ್ಕೆ ನವದೀಪ್ ಸೈನಿ ಮರಳಿದ್ದಾರೆ.
ಇದನ್ನೂ ಓದಿ:ಅಕ್ಕಿ ಕೊಡುವುದು ಒಂದೆರಡು ತಿಂಗಳು ತಡವಾದರೆ ಆಂತದೇನ್ ಆಗಲ್ಲ: ಸತೀಶ್ ಜಾರಕಿಹೊಳಿ
ಭಾರತದ ಕೆರಿಬಿಯನ್ ಪ್ರವಾಸವು ಡೊಮಿನಿಕಾದಲ್ಲಿ ಜುಲೈ 12 ರಿಂದ ಪ್ರಾರಂಭವಾಗುವ ಟೆಸ್ಟ್ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಈ ಸರಣಿಯೊಂದಿಗೆ ಮೂರನೇ ಡಬ್ಲ್ಯುಟಿಸಿ ಸೈಕಲ್ ನಲ್ಲಿ ಭಾರತದ ಅಭಿಯಾನದ ಆರಂಭವಾಗುತ್ತದೆ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಹಾರ್ದಿಕ್ ಪಾಂಡ್ಯ (ಉ.ನಾ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉ.ನಾ), ಕೆಎಸ್ ಭರತ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಆರ್ ಅಶ್ವಿನ್, ಆರ್ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.