ಮತ್ತೂಂದು ಸೆಣಸಾಟಕ್ಕೆ ಸಿಂಧು ಸಿದ್ಧತೆ

ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌

Team Udayavani, Jul 23, 2019, 5:20 AM IST

pv-sindhu

ಹೊಸದಿಲ್ಲಿ: ಇಂಡೋನೇಶ್ಯ ಓಪನ್‌ನ ಫೈನಲ್‌ನಲ್ಲಿ ಮತ್ತೆ ಆಘಾತಕಾರಿ ಸೋಲನ್ನು ಕಂಡ ಭಾರತದ ಪ್ರಮುಖ ಶಟ್ಲರ್‌ ಪಿ.ವಿ. ಸಿಂಧು ಮತ್ತೂಂದು ಸೆಣ ಸಾಟಕ್ಕೆ ಸಿದ್ಧರಾಗಬೇಕಾಗಿದೆ.

ಜಪಾನ್‌ ಓಪನ್‌ ಬಿಡಬ್ಲ್ಯುಎಫ್ ವಿಶ್ವ ಟೂರ್‌ ಸೂಪರ್‌ 750 ಬ್ಯಾಡ್ಮಿಂಟನ್‌ ಕೂಟ ಮಂಗಳವಾರದಿಂದ ಆರಂಭವಾಗಲಿದ್ದು ಭಾರತದ ತಾರಾ ಆಟಗಾರ್ತಿಯರಾದ ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್‌ ಸ್ಪರ್ಧಾಕಣದಲ್ಲಿದ್ದಾರೆ. ಫಿಟ್‌ನೆಸ್‌ ಕಾರಣಕ್ಕೆ ಇಂಡೋನೇಶ್ಯ ಕೂಟದಿಂದ ಹಿಂದೆ ಸರಿದಿದ್ದ ಸೈನಾ ಇಲ್ಲಿ ತನ್ನ ಸಾಮರ್ಥ್ಯವನ್ನು ಪಣಕ್ಕಿಡಬೇಕಿದೆ.

ಇಂಡೋನೇಶ್ಯ ಓಪನ್‌ನ ಫೈನಲ್‌ನಲ್ಲಿ ಅಕಾನೆ ಯಮಾಗುಚಿ ವಿರುದ್ಧ ನೇರ ಸೆಟ್‌ಗಳಿಂದ ಸೋತ ಸಿಂಧು 7 ತಿಂಗಳ ಪ್ರಶಸ್ತಿ ಬರವನ್ನು ನೀಗಿಸುವಲ್ಲಿ ವಿಫ‌ಲರಾಗಿದ್ದಾರೆ. ಇದೀಗ “ಜಪಾನ್‌ ಓಪನ್‌’ ಕೂಟದಲ್ಲಾ ದರೂ ಪ್ರಶಸ್ತಿ ಒಲಿದೀತೆಂಬ ನಿರೀಕ್ಷೆ ಸಿಂಧು ಮತ್ತು ಭಾರತೀಯರದ್ದು.

ಚೀನದ ಹಾನ್‌ ಯುಯಿ ಅವರನ್ನು ಎದುರಿಸುವ ಮೂಲಕ ಸಿಂಧು ಜಪಾನ್‌ ಓಪನ್‌ನಲ್ಲಿ ತನ್ನ ಅಭಿಯಾನ ಆರಂಭಿಸಲಿದ್ದಾರೆ. ಮೊದಲ ಹರ್ಡಲ್‌ ದಾಟಿದರೆ ದ್ವಿತೀಯ ಸುತ್ತಿನಲ್ಲಿ ಸ್ಕಾಟ್ಲೆಂಡಿನ ಕಸ್ಟಿì ಗಿಲ್ಮೋರ್‌ ಅಥವಾ ಜಪಾನಿನ ಅಯಾ ಒಹೊರಿ ಅವರನ್ನು ಎದುರಿಸಲಿದ್ದಾರೆ.

ಸಿಂಧು ಗೆಲುವಿನ ಮೆಟ್ಟಿಲು ಏರುತ್ತ ಹೋದರೆ ಕ್ವಾ. ಫೈನಲ್‌ನಲ್ಲಿ ಮತ್ತೆ ಅಕನೆ ಯಮಾಗುಚಿ ಎದುರಾಗುವ ಸಾಧ್ಯತೆಯಿದೆ. ಆಗ 5ನೇ ಶ್ರೇಯಾಂಕದ ಸಿಂಧು ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಬಹುದು.

ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ ಭಾರತೀಯ ಶಟ್ಲರ್‌ಗಳಾದ ಎಚ್‌.ಎಸ್‌. ಪ್ರಣಯ್‌ ಮತ್ತು ಕಿಡಂಬಿ ಶ್ರೀಕಾಂತ್‌ ಮುಖಾಮುಖೀಯಾಗಲಿದ್ದಾರೆ. ಇವರಿಬ್ಬರು 4 ಬಾರಿ ಪರಸ್ಪರ ಮುಖಾಮುಖೀಯಾಗಿದ್ದು, ಶ್ರೀಕಾಂತ್‌ 4 ಬಾರಿ ಗೆದ್ದಿದ್ದಾರೆ.

ಭಾರತದ ಇನ್ನೋರ್ವ ಶಟ್ಲರ್‌ ಬಿ. ಸಾಯಿ ಪ್ರಣೀತ್‌ ಮೊದಲ ಸುತ್ತಿನಲ್ಲಿ ಜಪಾನಿನ ಕೆಂಟ ನಿಶಿಮೊಟೊ ಅವರ ಸವಾಲನ್ನು ಎದುರಿಸಲಿದ್ದಾರೆ. ಪ್ರಣೀತ್‌ ಸ್ವಿಸ್‌ ಓಪನ್‌ ಕೂಟದಲ್ಲಿ ಫೈನಲ್‌ ತನಕ ತಲುಪಿದ್ದರು.

ಭುಜದ ಸಮಸ್ಯೆಯಿಂದಾಗಿ ಇಂಡೋನೇಶ್ಯ ಓಪನ್‌ನಿಂದ ಹಿಂದೆ ಸರಿದಿದ್ದ ಸಮೀರ್‌ ವರ್ಮ ಡೆನ್ಮಾರ್ಕ್‌ನ ಆ್ಯಂಡೆರ್ ಆಂಟೊನ್ಸೆನ್‌ ಅವರನ್ನು ಎದುರಿಸಲಿದ್ದಾರೆ. ಆಂಟೊನ್ಸೆನ್‌ ಇಂಡೋನೇಶ್ಯ ಓಪನ್‌ನ ಫೈನಲ್‌ನಲ್ಲಿ ಸುದೀರ್ಘ‌ ಹೋರಾಟ ನಡೆಸಿ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು.

ಆತ್ಮವಿಶ್ವಾಸದೊಂದಿಗೆ ಹೋರಾಟ
“ನನ್ನ ಪಾಲಿಗೆ ಇದೊಂದು ಭಾರೀ ನಿರೀಕ್ಷೆಯ ಕೂಟವಾಗಿದೆ. ಇಂಡೋನೇಶ್ಯ ಫೈನಲ್‌ನಲ್ಲಿ ಸೋತಿರಬಹುದು. ಆದರೆ ಪ್ರಬಲ ಹೋರಾಟ ನೀಡಿದ್ದೆ. ಅದೇ ಆತ್ಮವಿಶ್ವಾಸದೊಂದಿಗೆ ಜಪಾನ್‌ ಕೂಟದಲ್ಲೂ ಹೋರಾಡುವೆ’ ಎಂದು ಸಿಂಧು ಹೇಳಿದ್ದಾರೆ.

8ನೇ ಶ್ರೇಯಾಂಕದ ಸೈನಾ ನೆಹ್ವಾಲ್‌ ಈ ಋತುವಿನಲ್ಲಿ ಪ್ರಶಸ್ತಿ ಗೆದ್ದ ಭಾರತದ ಏಕೈಕ ಆಟಗಾರ್ತಿಯಾಗಿದ್ದಾರೆ. ಅವರು ಥಾಯ್ಲೆಂಡಿನ ಬುಸಾನನ್‌ ಆಂಗ್ಬಾಮುರುಂಗನ್‌ ಅವರನ್ನು ಎದುರಿಸುವ ಮೂಲಕ ತನ್ನ ಹೋರಾಟ ಆರಂಭಿಸಲಿದ್ದಾರೆ. ಅವರೆದುರು ಸೈನಾ 3-1 ಜಯ-ಸೋಲಿನ ದಾಖಲೆ ಹೊಂದಿದ್ದಾರೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.