ಜಪಾನ್ ಓಪನ್: ಕೆ. ಶ್ರೀಕಾಂತ್ಗೆ ಸೋಲು
Team Udayavani, Sep 15, 2018, 6:00 AM IST
ಟೋಕಿಯೊ: ಭಾರತದ ಶಟ್ಲರ್ಗಳು “ಜಪಾನ್ ಓಪನ್ ಬ್ಯಾಡ್ಮಿಂಟನ್’ ಪಂದ್ಯಾವಳಿಯಿಂದ ಬರಿಗೈಯಲ್ಲಿ ಮರಳುವ ಸಂಕಟಕ್ಕೆ ಸಿಲುಕಿದ್ದಾರೆ. ಅಂತಿಮ ಭರವಸೆಯಾಗಿದ್ದ ಕೆ. ಶ್ರೀಕಾಂತ್ ಶುಕ್ರವಾರದ ಮ್ಯಾರಥಾನ್ ಕ್ವಾರ್ಟರ್ ಫೈನಲ್ನಲ್ಲಿ ಕೊರಿಯಾದ ಲೀ ಡಾಂಗ್ ಕೆಯುನ್ಗೆ ಸೋಲುವ ಮೂಲಕ ಭಾರತದ ಹೋರಾಟ ಅಂತ್ಯ ಕಂಡಿತು.
ವಿಶ್ವದ ಮಾಜಿ ನಂ.1 ಆಟಗಾರ ಶ್ರೀಕಾಂತ್ಗೆ ಕೊರಿಯಾದ ಡಾಂಗ್ ಕೆಯುನ್ ವಿರುದ್ಧ ಮೊದಲ ಗೇಮ್ ಗೆದ್ದರೂ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಒಂದು ಗಂಟೆ, 19 ನಿಮಿಷಗಳ ಈ ಹೋರಾಟದಲ್ಲಿ ಡಾಂಗ್ ಕೆಯುನ್ 19-21, 21-16, 21-18 ಅಂತರದಿಂದ ವಶಪಡಿಸಿಕೊಂಡರು. ಈ ಮೂರೂ ಗೇಮ್ಗಳ ಅಂಕಗಳ ಅಂತರವನ್ನು ಗಮನಿಸಿದಾಗ ಪಂದ್ಯದ ತೀವ್ರತೆ ಅರಿವಾಗುತ್ತದೆ. ಕಳೆದ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ಶ್ರೀಕಾಂತ್, ಇದಕ್ಕೂ ಹಿಂದಿನ ಸುತ್ತಿನಲ್ಲಿ ಹಾಂಕಾಂಗ್ನ ವೋಂಗ್ ವಿಂಗ್ ಕಿ ವಿನ್ಸೆಂಟ್ ವಿರುದ್ಧ ಏಶ್ಯನ್ ಗೇಮ್ಸ್ನಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಅಂತರ 21-15, 21-14.
ಏಶ್ಯಾಡ್ ಪದಕ ಗೆದ್ದ ಪಿ.ವಿ. ಸಿಂಧು, ಎಚ್.ಎಸ್. ಪ್ರಣಯ್ ಗುರುವಾರದ ದ್ವಿತೀಯ ಸುತ್ತಿನ ಸ್ಪರ್ಧೆಯಲ್ಲಿ ಸೋಲನುಭವಿಸಿದ್ದರು. ಸಿಂಧು ಚೀನದ ಗಾವೊ ಫ್ಯಾಂಜಿ ಅವರಿಗೆ 18-21, 21-19 ಅಂಕಗಳಿಂದ ಶರಣಾದರು. ಪುರುಷರ ಡಬಲ್ಸ್ನಲ್ಲಿ ಮನು ಅತ್ರಿ-ಬಿ.ಸುಮೀತ್ ರೆಡ್ಡಿ ಗುರುವಾರದ ಪ್ರಿ-ಕ್ವಾರ್ಟರ್ ಫೈನಲ್ನಲ್ಲೇ ಎಡವಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ