ಜಸ್ಪ್ರೀತ್ ಬುಮ್ರಾ ಅವಿರೋಧ ಆಯ್ಕೆ: ಅಧ್ಯಕ್ಷ ಪ್ರಸಾದ್ ಹೇಳಿಕೆ
Team Udayavani, Dec 6, 2017, 11:13 AM IST
ಹೊಸದಿಲ್ಲಿ: ಮುಂಬರುವ ಭಾರೀ ಸವಾಲಿನ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಪ್ರಕಟಗೊಂಡ ಭಾರತದ ಟೆಸ್ಟ್ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಹೆಸರು ಗೋಚರಿಸಿದಾಗ ಇಬ್ಬಗೆಯ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಮೊದಲನೆ ಯದು ಅಚ್ಚರಿ, ಮತ್ತೂಂದು ಸ್ವಾಗತ!
ಗುಜರಾತ್ನ 23ರ ಹರೆಯದ ಜಸ್ಪ್ರೀತ್ ಜಸ್ಬಿರ್ಸಿಂಗ್ ಬುಮ್ರಾ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲು. ಬಲಗೈ ಮಧ್ಯಮ ವೇಗಿ ಆಗಿರುವ ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್ ಶೈಲಿ ತುಸು ಭಿನ್ನ. ಹಾಗೆಯೇ ಅವರ ಸ್ವಿಂಗ್ ಹಾಗೂ ಸೀಮ್ ಎಸೆತಗಳು ಅತ್ಯಂತ ಅಪಾಯಕಾರಿ ಕೂಡ ಹೌದು. ಭಾರತದ “ಡೇಂಜರಸ್ ಡೆತ್ ಓವರ್ ಬೌಲರ್’ ಎಂಬ ಖ್ಯಾತಿಯನ್ನು ಅಲ್ಪಾವಧಿ ಯಲ್ಲೇ ಗಳಿಸಿದ ಹೆಗ್ಗಳಿಕೆ ಬುಮ್ರಾ ಅವರದು. ಇದಕ್ಕೂ ಮಿಗಿಲಾಗಿ ದಕ್ಷಿಣ ಆಫ್ರಿಕಾ ಟ್ರ್ಯಾಕ್ಗಳು ಬುಮ್ರಾಗೆ ಹೆಚ್ಚು “ಸೂಟ್’ ಆಗುವ ಸಾಧ್ಯತೆ ಹೆಚ್ಚು.
ಪ್ರಸಾದ್ ಸಮರ್ಥನೆ: ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.ಕೆ. ಪ್ರಸಾದ್ ಕೂಡ ಜಸ್ಪ್ರೀತ್ ಬುಮ್ರಾ ಆಯ್ಕೆಯನ್ನು ಎಲ್ಲ ರೀತಿಯಲ್ಲೂ ಸಮರ್ಥಿಸಿಕೊಂಡಿದ್ದಾರೆ. “ನಾವು ಕಳೆದ 18 ತಿಂಗಳಿಂದ ಬುಮ್ರಾ ಸಾಧನೆಯನ್ನು ಸತತವಾಗಿ ಗಮನಿಸುತ್ತ ಬಂದಿದ್ದೇವೆ. ಇದೊಂದು ಪ್ರಭಾವಶಾಲಿ ನಿರ್ವಹಣೆ. ಏಕದಿನ ಹಾಗೂ ಟಿ20 ಪಂದ್ಯಗಳೆರಡರಲ್ಲೂ ಅಸಾಮಾನ್ಯ ಬೌಲಿಂಗ್ ಪ್ರದರ್ಶನ ಕಾಯ್ದುಕೊಂಡು ಬಂದಿ ದ್ದಾರೆ. ಇವೆಲ್ಲಕ್ಕಿಂತ ಮುಖ್ಯವಾಗಿ ದಕ್ಷಿಣ ಆಫ್ರಿಕಾದ ಪಿಚ್ ಬುಮ್ರಾ ಬೌಲಿಂಗಿಗೆ ಹೆಚ್ಚು ಹೊಂದಿಕೊಳ್ಳುತ್ತದೆ. ಹೀಗಾಗಿ ಇದೊಂದು ಅವಿರೋಧ ಆಯ್ಕೆಯಾಗಿತ್ತು. ಇದರಿಂದ ಭಾರತದ ಬೌಲಿಂಗಿನಲ್ಲಿ ಹೆಚ್ಚಿನ ವೈವಿಧ್ಯವನ್ನು ಕಾಣಬಹುದು’ ಎಂದು ಪ್ರಸಾದ್ ಹೇಳಿದರು.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಚೈನಾಮನ್ ಬೌಲರ್ ಕುಲದೀಪ್ ಯಾದವ್ ಮತ್ತು ಸೀಮರ್ ಜಸ್ಪ್ರೀತ್ ಬುಮ್ರಾ ನಡುವೆ ತೀವ್ರ ಸ್ಪರ್ಧೆ ಇತ್ತು. ಇದರಲ್ಲಿ ಬುಮ್ರಾ ಗೆದ್ದರು.
ಭಾರತ ಟೆಸ್ಟ್ ತಂಡ:
ವಿರಾಟ್ ಕೊಹ್ಲಿ (ನಾಯಕ), ಮುರಳಿ ವಿಜಯ್, ಶಿಖರ್ ಧವನ್, ಕೆ.ಎಲ್. ರಾಹುಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮ, ವೃದ್ಧಿಮಾನ್ ಸಾಹಾ, ಪಾರ್ಥಿವ್ ಪಟೇಲ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ರವೀಂದ್ರ ಜಡೇಜ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ.
ಭಾರತ ಟಿ20 ತಂಡ:
ರೋಹಿತ್ ಶರ್ಮ (ನಾಯಕ), ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ದಿನೇಶ್ ಕಾರ್ತಿಕ್, ಮಹೇಂದ್ರ ಸಿಂಗ್ ಧೋನಿ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಹೂಡಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಬಾಸಿಲ್ ಥಂಪಿ, ಜೈದೇವ್ ಉನಾದ್ಕತ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ