BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ


Team Udayavani, May 10, 2024, 5:31 PM IST

Jay Shah said that canceling the contract of Ishaan and Iyer was not his decision

ಮುಂಬೈ: ಬಿಸಿಸಿಐ ಎಚ್ಚರಿಕೆಯ ಹೊರತಾಗಿಯೂ ರಣಜಿ ಪಂದ್ಯಗಳನ್ನು ತಪ್ಪಿಸಿಕೊಂಡು ಬಳಿಕ ಕೇಂದ್ರೀಯ ಗುತ್ತಿಗೆ ಆಟಗಾರರ ಪಟ್ಟಿಯಿಂದ ಹೊರಬಿದ್ದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಹತ್ವದ ಮಾಹಿತಿ ನೀಡಿದ್ದಾರೆ.

ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಪಟ್ಟಿಯಿಂದ ಹೊರಗಿಡುವುದು ಆಯ್ಕೆಗಾರರ ​​ಅಧ್ಯಕ್ಷ ಅಜಿತ್ ಅಗರ್ಕರ್ ಅವರು ಮಾತ್ರ ತೆಗೆದುಕೊಂಡ ನಿರ್ಧಾರ ಎಂದು ಜಯ್ ಶಾ ಬಹಿರಂಗಪಡಿಸಿದ್ದಾರೆ. ಅಲ್ಲದೆ “ಯಾರೂ ಅನಿವಾರ್ಯವಲ್ಲ” ಎಂದೂ ಪ್ರತಿಪಾದಿಸಿದ್ದಾರೆ.

ಬಿಸಿಸಿಐನ ನಿರ್ದೇಶನದ ಹೊರತಾಗಿಯೂ ದೇಶೀಯ ಪಂದ್ಯಗಳಿಗೆ ಹಾಜರಾಗಲು ವಿಫಲರಾದ ನಂತರ ಕಿಶನ್ ಮತ್ತು ಅಯ್ಯರ್ ಅವರನ್ನು ಹೊರಗಿಡಲಾಗಿದೆ. ಕಳೆದ ವರ್ಷ ಏಕದಿನ ವಿಶ್ವಕಪ್ ಮುಗಿದ ನಂತರ ಕಿಶನ್ ದೀರ್ಘ ವಿರಾಮಕ್ಕೆ ಹೋದರು ಮತ್ತು ಐಪಿಎಲ್ ವರೆಗೆ ಅಲಭ್ಯರಾಗಿದ್ದರು. ಬೆನ್ನು ನೋವಿನ ಕಾರಣದಿಂದ ಟೀಂ ಇಂಡಿಯಾ ಆಟ ತಪ್ಪಿಸಿಕೊಂಡಿದ್ದ ಅಯ್ಯರ್ ಅಂತಿಮವಾಗಿ ಮುಂಬೈಗಾಗಿ ರಣಜಿ ಟ್ರೋಫಿಯಲ್ಲಿ ಸೆಮಿಫೈನಲ್ ಮತ್ತು ಫೈನಲ್ ಸೇರಿದಂತೆ ಕೆಲವು ಪಂದ್ಯಗಳಲ್ಲಿ ಕಾಣಿಸಿಕೊಂಡರು.

ಗುರುವಾರ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, “ನೀವು ಸಂವಿಧಾನವನ್ನು ಪರಿಶೀಲಿಸಬಹುದು. ನಾನು ಆಯ್ಕೆ ಸಭೆಯ ಸಂಚಾಲಕ. ಆ ನಿರ್ಧಾರವು ಅಜಿತ್ ಅಗರ್ಕರ್ ಅವರದ್ದಾಗಿದೆ, ಈ ಇಬ್ಬರು ಆಟಗಾರರು (ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್) ದೇಶೀಯ ಕ್ರಿಕೆಟ್ ಆಡದಿದ್ದರೂ, ಅವರನ್ನು ಕೇಂದ್ರ ಒಪ್ಪಂದಗಳ ಪಟ್ಟಿಯಿಂದ ಕೈಬಿಡುವ ನಿರ್ಧಾರ ಅವರದ್ದಾಗಿತ್ತು” ಎಂದರು.

“ನನ್ನ ಪಾತ್ರವನ್ನು ಕಾರ್ಯಗತಗೊಳಿಸುವುದು. ನಾವು ಸಂಜು ಸ್ಯಾಮ್ಸನ್ ನಂತಹ ಹೊಸ ಆಟಗಾರರನ್ನು ಗುತ್ತಿಗೆಗೆ ಸೇರಿಸಿದ್ದೇವೆ. ಯಾರೂ ಅನಿವಾರ್ಯವಲ್ಲ” ಎಂದು ಶಾ ಹೇಳಿದರು.

ಭಾರತೀಯ ಆಟಗಾರರು ದೇಶೀಯ ಕ್ರಿಕೆಟ್‌ಗೆ ಆದ್ಯತೆ ನೀಡಬೇಕು ಎಂಬ ಮಂಡಳಿಯ ನಿಲುವನ್ನು ಶಾ ಪುನರುಚ್ಚರಿಸಿದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

1-wewqe

Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.