ಜಿಮ್‌ ಬದಲು ಯೋಗ: ಇದು ಗೇಲ್ ಮಂತ್ರ


Team Udayavani, May 16, 2019, 6:00 AM IST

World-Cup,-Chris-Gayle

ಹೊಸದಿಲ್ಲಿ: ಐದನೇ ಹಾಗೂ ಕೊನೆಯ ವಿಶ್ವಕಪ್‌ ಆಡಲಿರುವ ಜಮೈಕನ್‌ ದೈತ್ಯ ಕ್ರಿಸ್‌ ಗೇಲ್ 39ರ ಹರೆಯದಲ್ಲೂ ಫಿಟ್‌ನೆಸ್‌ ಬಗ್ಗೆ ಭಾರೀ ಕಾಳಜಿ ವಹಿಸುತ್ತಿದ್ದಾರೆ. ಇದಕ್ಕಾಗಿ ಅವರು ಜಿಮ್‌ಗೆ ತೆರಳುವುದಿಲ್ಲ, ಬದಲು ಕಳೆದೆರಡು ತಿಂಗಳಿಂದ ಯೋಗದ ಮೊರೆಹೋಗಿದ್ದಾರೆ!

ಫಿಟ್‌ನೆಸ್‌ ಫಾರ್ಮುಲಾ ಕುರಿತು ಮಾತಾಡಿದ ‘ಯುನಿವರ್ಸ್‌ ಬಾಸ್‌’ ಖ್ಯಾತಿಯ ಕ್ರಿಸ್‌ ಗೇಲ್, ‘ಯೋಗ ಮತ್ತು ಮಸಾಜ್‌ ಮಾಡುವುದರಿಂದ ಸಹಜ ಸಾಮರ್ಥ್ಯ ಲಭಿಸುತ್ತದೆ. ಇದರಿಂದ ದಿನವಿಡೀ ಅಂಗಳದಲ್ಲಿ ಕಳೆಯಲು ಸಾಧ್ಯವಾಗುತ್ತದೆ. ಹಾಗೆಯೇ ಸುದೀರ್ಘ‌ ವಿಶ್ರಾಂತಿ ಕೂಡ ಲಭಿಸುತ್ತದೆ’ ಎಂದರು.

ವಿಶ್ವಕಪ್‌ಗೆ ಭರ್ಜರಿ ತಯಾರಿ
ಕಳೆದ ಐಪಿಎಲ್ನಲ್ಲಿ 40.83ರ ಸರಾಸರಿಯಲ್ಲಿ 490 ರನ್‌ ಪೇರಿಸಿದ ಕ್ರಿಸ್‌ ಗೇಲ್ ವಿಶ್ವಕಪ್‌ಗೆ ಭರ್ಜರಿ ತಯಾರಿ ನಡೆಸಿದ್ದಾರೆ. ‘ಇದೊಂದು ಫ‌ನ್ನಿ ಗೇಮ್‌. ವಿಶ್ವಕಪ್‌ ಸಮೀಪಿಸುತ್ತಿರುವಾಗಲೇ ನನ್ನ ಬ್ಯಾಟಿನಿಂದ ರನ್‌ ಹರಿದು ಬರುತ್ತಿದೆ. ನನ್ನ ಈಗಿನ ಬ್ಯಾಟಿಂಗ್‌ ತೃಪ್ತಿ ಹಾಗೂ ಸಂತಸ ಕೊಟ್ಟಿದೆ’ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕ್ರಿಸ್‌ ಗೇಲ್ ಹೇಳಿದರು.

‘ವಯಸ್ಸು ಹೆಚ್ಚುತ್ತಲೇ ಹೋಗುತ್ತದೆ. ನಾವಿನ್ನು ಎಳೆಯರಾ ಗುವುದಿಲ್ಲ. ಆದರೆ ಮಾನಸಿಕವಾಗಿ ಗಟ್ಟಿಯಾಗಿರುವುದು ಮುಖ್ಯ. ಕಳೆದೆರಡು ತಿಂಗಳಿಂದ ನಾನು ಜಿಮ್‌ಗೆ ತೆರಳಿ ದೇಹ ದಂಡಿಸಿಕೊಂಡಿಲ್ಲ. ಇದರ ಬದಲು ಯೋಗ ನಡೆಸುತ್ತಿದ್ದೇನೆ. ಇದರಿಂದ ಪ್ರತಿಯೊಂದು ಪಂದ್ಯಕ್ಕೂ ಫ್ರೆಶ್‌ ಆಗಿ ಕಣಕ್ಕಿಳಿಯಲು ಸಾಧ್ಯವಾ ಗುತ್ತದೆ’ ಎಂದು ಏಕದಿನದಲ್ಲಿ 10,151 ರನ್‌ ರಾಶಿ ಹಾಕಿದ ಗೇಲ್ ಹೇಳಿದರು.

ಒಂದು ಕಾಲದ ಕ್ರಿಕೆಟ್ ದೈತ್ಯ ನೆನಿಸಿಕೊಂಡು ಏಕದಿನ ವಿಶ್ವವನ್ನು ಆಳಿದ ವೆಸ್ಟ್‌ ಇಂಡೀಸ್‌, ಕ್ರಿಸ್‌ ಗೇಲ್ ಕಾಲದಲ್ಲಿ ವಿಶ್ವ ಚಾಂಪಿಯನ್‌ ಆಗಿಲ್ಲ. ಇದೊಂದು ಕೊರತೆ ಅವರನ್ನು ಕಾಡುತ್ತಿದೆ. ತಂಡದ ಯುವ ಆಟಗಾ ರರು ತನಗಾಗಿ ವಿಶ್ವಕಪ್‌ ಗೆದ್ದು ಕೊಡಲಿ, ಇದರಲ್ಲಿ ತನ್ನದೂ ಪಾಲಿರಲಿ ಎಂಬುದು ಗೇಲ್ ಆಶಯ.

ಬೆಂಗಳೂರು, ಮೇ 15: ಭಾರತದ ವಿಶ್ವಕಪ್‌ ತಂಡದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಅಜಿಂಕ್ಯ ರಹಾನೆ ಇರಬೇಕಿತ್ತು ಎಂಬುದಾಗಿ ಮಾಜಿ ಕ್ರಿಕೆಟಿಗ, 1983ರ ವಿಶ್ವಕಪ್‌ ವಿಜೇತ ತಂಡದ ಸದಸ್ಯ ಸಯ್ಯದ್‌ ಕಿರ್ಮಾನಿ ಹೇಳಿದ್ದಾರೆ.

ಭಾರತದ ಮಧ್ಯಮ ಕ್ರಮಾಂಕ ಹೆಚ್ಚು ಗಟ್ಟಿಯಾಗಿಲ್ಲ ಎಂದು ಅಭಿಪ್ರಾಯಪಟ್ಟ ಕಿರ್ಮಾನಿ, ‘ವಿಜಯ್‌ ಶಂಕರ್‌ ಬದಲು ಕೇದಾರ್‌ ಜಾಧವ್‌ ಅವರನ್ನು 4ನೇ ಕ್ರಮಾಂಕದಲ್ಲಿ ಆಡಿಸುವುದು ಸೂಕ್ತ. ಅಕಸ್ಮಾತ್‌ ಗಾಯಾಳು ಜಾಧವ್‌ ಲಭ್ಯರಾಗದೇ ಹೋದಲ್ಲಿ ಈ ಅವಕಾಶವನ್ನು ಅಂಬಾಟಿ ರಾಯುಡು ಅವರಿಗೆ ನೀಡಬೇಕು. ಅಜಿಂಕ್ಯ ರಹಾನೆ ಕೂಡ ಸೂಕ್ತ ಆಯ್ಕೆಯಾಗಲಿದೆ’ ಎಂದರು.’ಭಾರತ ತಂಡದ ಮೇಲೆ ನನಗೆ ನಂಬಿಕೆ ಇದೆ. ವಿಶ್ವಕಪ್‌ಗ್ೂ ಮುನ್ನ ಉಳಿದ ತಂಡಗಳೆಲ್ಲ ಸಾಕಷ್ಟು ಏಕದಿನ ಪಂದ್ಯಗಳನ್ನಾಡಿ ತಯಾರಿ ನಡೆಸಿವೆ. ಈ ನಿಟ್ಟಿನಲ್ಲಿ ಭಾರತವೇ ಹಿಂದಿದೆ. ಇದರಿಂದ ಕೊಹ್ಲಿ ಪಡೆಗೇನೂ ಅಡ್ಡಿಯಾಗದು’ ಎಂದರು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

1-paris-11

Paris Olympics; ಸೀನ್ ನದಿಯ ಉದ್ದಕ್ಕೂ ನಡೆದ ಅತ್ಯಾಕರ್ಷಕ ಉದ್ಘಾಟನಾ ಸಮಾರಂಭ

Suryakumar Yadav

Leadership ನಾನು ಸಂಭ್ರಮಿಸುತ್ತೇನೆ, ಕೆಲವು ನಾಯಕರಿಂದ ಹಲವು ಕಲಿತಿದ್ದೇನೆ: ಸೂರ್ಯ ಕುಮಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.