ಕಿರಿಯರ ವಿಶ್ವಕಪ್‌ ಕ್ರಿಕೆಟ್‌; ಭಾರತವೂ ಫೇವರಿಟ್‌


Team Udayavani, Jan 17, 2020, 12:38 AM IST

kiriyara-world-cup

ಜೊಹಾನ್ಸ್‌ಬರ್ಗ್‌: ವರ್ಷಾರಂಭದಲ್ಲೇ ವಿಶ್ವಕಪ್‌ ಕ್ರಿಕೆಟ್‌ ಗಾಳಿ ಬೀಸತೊಡಗಿದೆ. ಆದರೆ ಇದು ಕಿರಿಯರ, ಅಂದರೆ ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿ. ಇದರ 13ನೇ ಆವೃತ್ತಿ ಶುಕ್ರವಾರದಿಂದ ಫೆ. 9ರ ತನಕ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ. 16 ತಂಡಗಳ ಈ ಕೂಟದಲ್ಲಿ ಹಾಲಿ ಚಾಂಪಿಯನ್‌ ಭಾರತ ಫೇವರಿಟ್‌ ತಂಡವಾಗಿಯೇ ಕಣಕ್ಕಿಳಿಯಲಿದ್ದು, ಪ್ರಶಸ್ತಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ದಿಟ್ಟ ಹೋರಾಟ ನಡೆಸುವ ಭರವಸೆ ಮೂಡಿಸಿದೆ.

ಈ ವರೆಗಿನ 12 ವಿಶ್ವಕಪ್‌ ಕೂಟಗಳಲ್ಲಿ ಅತ್ಯಧಿಕ 4 ಸಲ ಚಾಂಪಿಯನ್‌ ಆದ ಹೆಗ್ಗಳಿಕೆ ಭಾರತದ್ದು. 2000, 2008, 2012 ಮತ್ತು 2018ರಲ್ಲಿ ಭಾರತದ ಕಿರಿಯರ ಪಡೆ ಕಿರೀಟ ಏರಿಸಿಕೊಂಡು ಮೆರೆದಿತ್ತು. ಮೊಹಮ್ಮದ್‌ ಕೈಫ್, ವಿರಾಟ್‌ ಕೊಹ್ಲಿ, ಉನ್ಮುಕ್‌¤ ಚಂದ್‌ ಮತ್ತು ಪೃಥ್ವಿ ಶಾ ವಿಶ್ವವಿಜೇತ ಭಾರತದ ನಾಯಕರೆಂಬ ಹೆಗ್ಗಳಿಕೆ ಹೊಂದಿದ್ದಾರೆ.

ಪ್ರಿಯಂ ಗರ್ಗ್‌ ಸಾರಥ್ಯ
ಈ ಬಾರಿ ಉತ್ತರಪ್ರದೇಶದ ಬ್ಯಾಟ್ಸ್‌ಮನ್‌ ಪ್ರಿಯಂ ಗರ್ಗ್‌ ಸಾರಥ್ಯದಲ್ಲಿ ಭಾರತ ಅದೃಷ್ಟಪರೀಕ್ಷೆಗೆ ಇಳಿಯಲಿದೆ. ನ್ಯೂಜಿಲ್ಯಾಂಡ್‌, ಶ್ರೀಲಂಕಾ ಮತ್ತು ಜಪಾನ್‌ ತಂಡಗಳೊಂದಿಗೆ “ಎ’ ವಿಭಾಗದಲ್ಲಿರುವ ಭಾರತ, ಜ. 19ರಂದು ಶ್ರೀಲಂಕಾ ವಿರುದ್ಧ ತನ್ನ ಮೊದಲ ಲೀಗ್‌ ಪಂದ್ಯವಾಡಲಿದೆ.

ಸಾಕಷ್ಟು ಮುಂಚಿತವಾಗಿ ದಕ್ಷಿಣ ಆಫ್ರಿಕಾಕ್ಕೆ ತೆರಳಿರುವ ಭಾರತ, ಅಭ್ಯಾಸ ಪಂದ್ಯ ಹಾಗೂ ಚತುಷೊRàನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿತ್ತು. ಹೀಗಾಗಿ ಪ್ರಿಯಂ ಗರ್ಗ್‌ ಪಡೆಯ ಮೇಲೆ ಎಲ್ಲರೂ ಭಾರೀ ವಿಶ್ವಾಸ ಇರಿಸಿದ್ದಾರೆ.
ಬ್ಯಾಟಿಂಗ್‌ನಲ್ಲಿ ಯಶಸ್ವಿ ಜೈಸ್ವಾಲ್‌, ತಿಲಕ್‌ ವರ್ಮ, ಧ್ರುವ ಜುರೆಲ್‌, ದಿವ್ಯಾಂಶ್‌ ಸಕ್ಸೇನಾ ಅವರೆಲ್ಲ ತಂಡದ ಆಧಾರಸ್ತಂಭಗಳಾಗಿದ್ದಾರೆ.

ಉಡುಪಿ ಮೂಲದ ಶುಭಾಂಗ್‌
ಬೌಲಿಂಗ್‌ನಲ್ಲಿ ಭಾರತ ಘಾತಕವಾಗಿ ಪರಿಣಮಿಸುವ ಎಲ್ಲ ಸಾಧ್ಯತೆ ಇದೆ. ಉಡುಪಿ ಮೂಲದ ಎಡಗೈ ಸ್ಪಿನ್ನರ್‌ ಶುಭಾಂಗ್‌ ಹೆಗ್ಡೆ, ರಾಯಚೂರಿನ ಮಧ್ಯಮ ವೇಗಿ ವಿದ್ಯಾಧರ ಪಾಟೀಲ್‌, ಮುಂಬಯಿಯ ಲೆಗ್‌ಸ್ಪಿನ್ನರ್‌ ಅಥರ್ವ ಅಂಕೋಲೆಕರ್‌ ಅವರೆಲ್ಲ ಆಫ್ರಿಕಾ ಟ್ರ್ಯಾಕ್‌ಗಳಲ್ಲಿ ಮ್ಯಾಜಿಕ್‌ ಮಾಡುವ
ನಿರೀಕ್ಷೆ ಇದೆ.

ಕೂಟದ ಮಾದರಿ
ಇದು ಗ್ರೂಪ್‌ ಮಾದರಿಯ ಪಂದ್ಯಾವಳಿ. 16 ತಂಡಗಳನ್ನು 4 ಗುಂಪುಗಳಾಗಿ ವಿಭಜಿಸಲಾಗಿದೆ. ಪ್ರತೀ ಗುಂಪಿನಲ್ಲಿ ಅಗ್ರಸ್ಥಾನ ಪಡೆದ 2 ತಂಡಗಳು ಸೂಪರ್‌ ಲೀಗ್‌ನಲ್ಲಿ ಆಡುತ್ತವೆ. ಕೊನೆಯ ತಂಡಗಳೆರಡು ಪ್ಲೇಟ್‌ ವಿಭಾಗದಲ್ಲಿ ಸ್ಪರ್ಧಿಸುತ್ತವೆ. ಬಳಿಕ ಎರಡೂ ವಿಭಾಗಗಳಲ್ಲಿ ಕ್ವಾರ್ಟರ್‌ ಫೈನಲ್‌, ಸೆಮಿಫೈನಲ್‌ ಹಾಗೂ ಫೈನಲ್‌ ಹಣಾಹಣಿ ನಡೆಯಲಿದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.