ಕೃಷ್ಣಪ್ಪ ಪ್ರೀಮಿಯರ್ ಲೀಗ್ : ಒಂದೇ ಪಂದ್ಯದಲ್ಲಿ ಗೌತಮ್ ಬರೆದ ದಾಖಲೆಗಳೆಷ್ಟು?


Team Udayavani, Aug 24, 2019, 12:34 PM IST

gout

ಬೆಂಗಳೂರು: ಶುಕ್ರವಾರ ರಾತ್ರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಬಳ್ಳಾರಿ ಟಸ್ಕರ್ಸ್ ಮತ್ತು ಶಿವಮೊಗ್ಗ ಲಯನ್ಸ್ ನಡುವಿನ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಯಿತು. ಒಂಟಿ ಸಲಗದಂತೆ ಹೋರಾಡಿದ ಬಳ್ಳಾರಿ ಟಸ್ಕರ್ಸ್ ನ ಕೃಷ್ಣಪ್ಪ ಗೌತಮ್ ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಪುಡಿಗಟ್ಟಿದರು.

ಬ್ಯಾಟಿಂಗ್ ವೇಳೆ ಕೇವಲ 39 ಎಸೆತಗಳಲ್ಲಿ ಶತಕ ಸಿಡಿಸಿದ ಗೌತಮ್ ಕೆಪಿಎಲ್ ಇತಿಹಾಸದ ಅತೀ ವೇಗದ ಶತಕದ ದಾಖಲೆ ಬರೆದರು. ತನ್ನ ಅಜೇಯ ಇನ್ನಿಂಗ್ಸ್ ನಲ್ಲಿ 134 ರನ್ ಬಾರಿಸಿದ ಕೆ. ಗೌತಮ್ 134 ರನ್ ಚಚ್ಚಿ ಬಿಸಾಕಿದರು. ಇದೂ ಕೂಡಾ ಕೆಪಿಎಲ್ ದಾಖಲೆಯೇ.

ಶಿವಮೊಗ್ಗ ಲಯನ್ಸ್ ಬೌಲರ್ಸ್ ಗಳನ್ನು ಬೆವರಿಳಿಸಿದ ಕೃಷ್ಣಪ್ಪ ಕೇವಲ ಬೌಂಡರಿ ಸಿಕ್ಸರ್ ಗಳಿಂದಲೇ ತನ್ನ ಇನ್ನಿಂಗ್ಸ್ ಕಟ್ಟಿದ್ದರು. ಬರೋಬ್ಬರಿ 13 ಸಿಕ್ಸರ್ ಬಾರಿಸಿದ ಗೌತಮ್ ಇದುವರೆಗೆ ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ಯಾರೂ ಮಾಡದ ದಾಖಲೆ ಬರೆದರು. ಇದರೊಂದಿಗೆ ತನ್ನ 134 ರನ್ ಗಳ ಇನ್ನಿಂಗ್ಸ್ ನಲ್ಲಿ ಕೇವಲ ಬೌಂಡರಿ ಸಿಕ್ಸರ್ ಗಳಿಂದಲೇ 106 ರನ್ ಬಾರಿಸಿ ಕೆಪಿಎಲ್ ನಲ್ಲಿ ಮತ್ತೊಂದು ದಾಖಲೆಯಲ್ಲಿ ತನ್ನ ಹೆಸರನ್ನು ಅಚ್ಚೊತ್ತಿದ್ದಾರೆ.

ಬೌಲಿಂಗ್ ನಲ್ಲೂ ಮಿಂಚಿದ ಕೃಷ್ಣಪ್ಪ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶೋ ಮ್ಯಾನ್ ಆಗಿ ಮೂಡಿಬಂದರು. ತನ್ನ ನಾಲ್ಕು ಓವರ್ ಕೋಟಾದಲ್ಲಿ ಬರೋಬ್ಬರಿ ಎಂಟು ವಿಕೆಟ್ ಪಡೆದು ಮಿಂಚಿದ ಗೌತಮ್ ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಸಾರ್ವಕಾಲಿಕ ವಿಶ್ವದಾಖಲೆ ಬರೆದರು. ಇದೇ ತಿಂಗಳ ಆರಂಭದಲ್ಲಿ ಇಂಗ್ಲೀಶ್ ಕೌಂಟಿಯಲ್ಲಿ ಏಳು ವಿಕೆಟ್ ಪಡೆದಿದ್ದ ಕಾಲಿನ್ ಆಕರ್ಮನ್ ದಾಖಲೆಯನ್ನು ಕನ್ನಡಿಗ ಕೃಷ್ಣಪ್ಪ ಗೌತಮ್ ತಿಂಗಳೊಳಗೆ ಪುಡಿಗಟ್ಟಿದರು.

ಒಟ್ಟಿನಲ್ಲಿ ಗೌತಮ್ ಪ್ರಚಂಡ ಆಟಕ್ಕೆ ತಲೆಬಾಗಿದ ಶಿವಮೊಗ್ಗ ಲಯನ್ಸ್ 70 ರನ್ ಗಳ ಅಂತರದಿಂದ ಸೋತು ಶರಣಾಯಿತು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.