ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್?
Team Udayavani, Nov 30, 2021, 1:12 PM IST
ಮುಂಬೈ: ಎರಡು ಹೊಸ ತಂಡಗಳೊಂದಿಗೆ 2022ರ ಸೀಸನ್ ನ ಐಪಿಎಲ್ ಗೆ ತಯಾರಿ ನಡೆಯುತ್ತಿದೆ. ಹಾಲಿ ಇರುವ 8 ತಂಡಗಳು ತಮ್ಮಲ್ಲಿ ಉಳಿಸಿಕೊಳ್ಳುವ ಆಟಗಾರರ ಪಟ್ಟಿ ನೀಡಲು ಇಂದು (ನ.30) ಕೊನೆಯ ದಿನವಾಗಿದೆ. ಹೀಗಾಗಿ ಫ್ರಾಂಚೈಸಿಗಳು ಕೊನೆಯ ಹಂತದ ತಾಲೀಮಿನಲ್ಲಿ ತೊಡಗಿದೆ.
ಆದರೆ ಈ ಮಧ್ಯೆ ಸ್ಟಾರ್ ಆಟಗಾರರಾದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ರನ್ನು ಐಪಿಎಲ್ ನಿಂದ ಒಂದು ವರ್ಷ ನಿಷೇಧ ಮಾಡಲು ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ.
ನೂತನ ತಂಡಗಳಾದ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ಹರಾಜಿಗಿಂತ ಮೊದಲು ಮೂವರು ಆಟಗಾರರನ್ನು ಆಯ್ಕೆ ಮಾಡುವ ಅವಕಾಶವಿದೆ. ಲಕ್ನೋ ತಂಡವು ಪಂಜಾಬ್ ಕಿಂಗ್ಸ್ ನ ಕೆ.ಎಲ್.ರಾಹುಲ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನ ರಶೀದ್ ಖಾನ್ ರನ್ನು ತನ್ನತ್ತ ಸೆಳೆಯಲು ಯತ್ನ ಮಾಡುತ್ತಿದೆ ಎಂದು ಪಂಜಾಬ್ ಮತ್ತು ಹೈದರಾಬಾದ್ ಫ್ರಾಂಚೈಸಿಗಳು ಬಿಸಿಸಿಐಗೆ ದೂರು ನೀಡಿದೆ.
ಇದನ್ನೂ ಓದಿ:ಮೈದಾನದ ಸಿಬಂದಿಗೆ ದ್ರಾವಿಡ್ ಇನಾಮು
ಈ ಬಗ್ಗೆ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, “ನಾವು ಯಾವುದೇ ಲಿಖಿತ ದೂರನ್ನು ಸ್ವೀಕರಿಸಿಲ್ಲ. ಆದರೆ ಲಕ್ನೋ ತಂಡವು ಆಟಗಾರರನ್ನು ಸೆಳೆಯಲು ಯತ್ನಿಸುತ್ತಿರುವ ಬಗ್ಗೆ ಎರಡು ಫ್ರಾಂಚೈಸಿಗಳಿಂದ ಮೌಖಿಕ ದೂರು ಸ್ವೀಕರಿಸಿದ್ದೇವೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ಅದು ನಿಜವೆಂದು ಸಾಬೀತಾದರೆ ನಾವು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಸಮತೋಲನವನ್ನು ತೊಂದರೆಗೊಳಿಸಲು ನಾವು ಬಯಸುವುದಿಲ್ಲ. ತೀವ್ರ ಪೈಪೋಟಿ ಇರುವಾಗ ನೀವು ಅಂತಹ ವಿಷಯಗಳನ್ನು ತಪ್ಪಿಸಲು ಸಾಧ್ಯವಿಲ್ಲ. ಆದರೆ ಅಸ್ತಿತ್ವದಲ್ಲಿರುವ ತಂಡಗಳು ಎಲ್ಲವನ್ನೂ ಸಮತೋಲನಗೊಳಿಸಲು ಪ್ರಯತ್ನಿಸುತ್ತಿರುವಾಗ ಅದು ನ್ಯಾಯೋಚಿತವಲ್ಲ ಎಂದು ತಿಳಿಸಿದ್ದಾರೆ.
ಇನ್ನೂ ರಿಟೆನ್ಶನ್ ಪ್ರಕ್ರಿಯೆ ಅಂತ್ಯವಾಗದೆ ಈ ಇಬ್ಬರು ಆಟಗಾರರು ಬೇರೆ ಫ್ರಾಂಚೈಸಿ ಜೊತೆ ಸಂಪರ್ಕ ಬೆಳೆಸಿರುವ ಕಾರಣ ಇಬ್ಬರಿಗೂ ಒಂದು ವರ್ಷ ಬ್ಯಾನ್ ಮಾಡಲಾಗುತ್ತದೆ ಎಂದು ವರದಿ ತಿಳಿಸಿದೆ. ಆದರೆ ಬಿಸಿಸಿಐ ಈ ಬಗ್ಗೆ ಖಚಿತ ಪಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ
Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್ ರಾಯಲ್ಸ್ ಸವಾಲು
CSK; ಬಸ್ ಕಂಡಕ್ಟರ್ಗಳಿಗೆ ಚೆನ್ನೈ ಕಿಂಗ್ಸ್ನಿಂದ 8 ಸಾವಿರ ಅಗತ್ಯ ಗಿಫ್ಟ್ !
Central government ಒಪ್ಪಿದರೆ ಪಾಕ್ಗೆ ಭಾರತ ಕ್ರಿಕೆಟ್ ತಂಡ: ರಾಜೀವ್ ಶುಕ್ಲ
T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್ ಗೆಲುವು: 4-0 ಮುನ್ನಡೆ
MUST WATCH
ಹೊಸ ಸೇರ್ಪಡೆ
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ
Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ