ನಾಲ್ಕನೇ ಏಕದಿನ: ರಾಹುಲ್, ಪಂತ್, ಭುವಿ, ಚಾಹಲ್ ಗೆ ಚಾನ್ಸ್
Team Udayavani, Mar 10, 2019, 7:53 AM IST
ಮೊಹಾಲಿ: ಆಸೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯಕ್ಕೆ ಭಾರತ ಮೇಜರ್ ಸರ್ಜರಿ ಮಾಡಿಕೊಂಡಿದೆ. ಕನ್ನಡಿಗ ಕೆ.ಎಲ್.ರಾಹುಲ್, ರಿಷಭ್ ಪಂತ್, ಭುವನೇಶ್ವರ್ ಕುಮಾರ್ ಮತ್ತು ಯುಜುವೇಂದ್ರ ಚಾಹಲ್ ಇಂದಿನ ಏಕದಿನ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದಾರೆ.
ಇಲ್ಲಿನ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ . ಮೂರನೇ ಏಕದಿನ ಪಂದ್ಯದ ಸೋಲನ್ನು ಮರೆತು ಈ ಪಂದ್ಯದಲ್ಲಿ ಜಯ ಸಾಧಿಸಲು ಭಾರತ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.
ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿಗೆ ಎರಡು ಪಂದ್ಯಗಳಿಗೆ ವಿಶ್ರಾಂತಿ ನೀಡಿರುವುದರಿಂದ ಅವರ ಸ್ಥಾನಕ್ಕೆ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ. ಉಳಿದಂತೆ ಸತತ ವೈಫಲ್ಯ ಅನುಭವಿಸುತ್ತಿರುವ ಅಂಬಾಟಿ ರಾಯುಡು ಬದಲು ಕೆ.ಎಲ್. ರಾಹುಲ್, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶಮಿ ಬದಲಿಗೆ ಭುವನೇಶ್ವರ್ ಕುಮಾರ್ ಮತ್ತು ರವೀಂದ್ರ ಜಡೇಜಾ ಬದಲು ಚಾಹಲ್ ಸ್ಪಿನ್ನರ್ ಸ್ಥಾನ ಪಡೆದಿದ್ದಾರೆ.