ರಾಹುಲ್‌ ಚೌಧರಿ ಎಂಬ ಕಬಡ್ಡಿ ಹುಲಿ!


Team Udayavani, Aug 16, 2017, 10:57 AM IST

11-SPORTS-4.jpg

ರಾಹುಲ್‌ ಚೌಧರಿ!
ಕಬಡ್ಡಿ ಪ್ರೇಮಿಗಳ ಪರಿಚಿತ ಮುಖ. ಕಬಡ್ಡಿ ಕಲಿಯುತ್ತಿರುವ ಎಷ್ಟೋ ಕ್ರೀಡಾಪಟುಗಳಿಗೆ ಸ್ಫೂರ್ತಿಯ ಸೆಲೆ. ಉತ್ತರ ಪ್ರದೇಶದ ಜಾಟ್‌ ಸಮುದಾಯದಲ್ಲಿ ಜನನ. 24ರ ಯುವಕ…

ರಾಹುಲ್‌ ಮೊದಲ ಬಾರಿಗೆ ಕಬಡ್ಡಿ ಆಡಲು ಆರಂಭಿಸಿದ್ದು ಪ್ರಾಥಮಿಕ ಶಾಲಾ ದಿನಗಳಲ್ಲಿ. ರಾಹುಲ್‌ನ ಅಣ್ಣ ಕೂಡ ಕಬಡ್ಡಿ ಆಟಗಾರನಾಗಿದ್ದ. ಹೀಗಾಗಿ ರಾಜ್ಯದ ವಿವಿಧೆಡೆ ನಡೆಯುವ ಕಬಡ್ಡಿ ಟೂರ್ನಿಗಳಿಗೆ ಅಣ್ಣನ ಜತೆ ರಾಹುಲ್‌ ತೆರಳುತ್ತಿದ್ದ. ಅಣ್ಣ ಆಡುವ ತಂಡದಲ್ಲಿ ಯಾರಾದರೂ ಗಾಯಗೊಂಡರೆ ತನಗೂ ಅವಕಾಶ ಸಿಗುತ್ತದೆ ಎನ್ನುವ ಆಶಾಮನೋಭಾವ ರಾಹುಲ್‌ನದ್ದಾಗಿತ್ತು. ಅಂತೂ ಕೆಲವು ಬಾರಿ ತನ್ನ ಅಣ್ಣ ಆಡುವ ತಂಡದಲ್ಲಿ ಅವಕಾಶ ಪಡೆದೇ ಬಿಟ್ಟ. ಇದು ಚೌಧರಿಯ ಜೀವನದ ದಿಕ್ಕನ್ನೇ ಬದಲಿಸಿತು.

ಮಗ ಹಾಳಾಗುತ್ತಾನೆ ಎಂಬ ಭಯ
ರಾಹುಲ್‌ ಚೌಧರಿ ಕಬಡ್ಡಿ ಆಡುವುದು ಅವರ ಕುಟುಂಬದಲ್ಲಿ ಯಾರಿಗೂ ಇಷ್ಟವಿರಲಿಲ್ಲ. ಮಗ ಕಬಡ್ಡಿ ಆಡುತ್ತ ಸಮಯ ಕಳೆಯುತ್ತಾನೆ, ವಿದ್ಯಾಭ್ಯಾಸದ ಕಡೆ ದೃಷ್ಟಿ ಹರಿಸುವುದಿಲ್ಲ, ಇದರಿಂದ ಹಾಳಾಗಿ ಹೋಗುತ್ತಾನೆ ಅನ್ನುವ ಆತಂಕ ರಾಹುಲ್‌ ಅವರ ಅಪ್ಪ, ಅಮ್ಮನದ್ದಾಗಿತ್ತು. ಹೀಗಾಗಿ ತಂದೆ, ತಾಯಿ ಕಣ್ಣು ತಪ್ಪಿಸಿ ಕಬಡ್ಡಿ ಪಂದ್ಯಗಲ್ಲಿ ಆಡಲು ತೆರಳಿದ ದೃಷ್ಟಾಂತವಿದೆ. ಚಿಕ್ಕಪುಟ್ಟ ಗಾಯ ಮಾಡಿಕೊಂಡರೂ ಅದು ಮನೆಯವರಿಗೆ ತಿಳಿಯದಂತೆ ನಿಭಾಯಿಸಿದ ಘಟನೆಗಳೂ ನಡೆದಿವೆ. ಆದರೂ ಚೌಧರಿಗೆ ಕಬಡ್ಡಿ ಮೇಲಿನ ಪ್ರೀತಿ ಬಿಡಲಿಲ್ಲ. ಇಂಥದೊಂದು ಪ್ರೀತಿ, ಛಲವೇ ಇಂದು ಚೌಧರಿಯನ್ನು ಕಬಡ್ಡಿಯಲ್ಲಿ ಘರ್ಜಿಸುವ ಹುಲಿಯಾಗಿ ರೂಪಿಸಿದೆ. ಇಂದು ಅವರ ತಂದೆ, ತಾಯಿ ಮಗನ ಸಾಧನೆಗೆ ಖುಷಿ ಪಡುತ್ತಿದ್ದಾರೆ. ಮಗ ಆಡುತ್ತಿರುವ ಪ್ರೊ  . ಕಬಡ್ಡಿ ಪಂದ್ಯವನ್ನು ತಪ್ಪದೇ ನೋಡುತ್ತಾರೆ!

ಪ್ರೊ ಕಬಡ್ಡಿಯಲ್ಲಿ  ಘರ್ಜನೆ
ಕಬಡ್ಡಿಯ ಎಷ್ಟೋ ಪ್ರತಿಭೆಗಳು ಹೊರ ಬಂದಿರುವುದೇ ಪ್ರೊ ಕಬಡ್ಡಿಯಲ್ಲಿ. ಅದೇ ರೀತಿ ರಾಹುಲ್‌ ಚೌಧರಿ ಎಂಬ ಪ್ರತಿಭೆಯನ್ನು ಪರಿಚಯಿಸಿದ್ದು ಕೂಡ ಪ್ರೊ ಕಬಡ್ಡಿ ಕೂಟ. ಚೌಧರಿ ಎದುರಾಳಿ ಅಂಕಣಕ್ಕೆ ನುಗ್ಗಿ ಹುಲಿಯಂತೆ ಘರ್ಜಿಸುತ್ತಾನೆ. ರಕ್ಷಣಾ ಬಲೆಯಿಂದ ತಪ್ಪಿಸಿಕೊಳ್ಳಲು ಜಿಂಕೆ ಮರಿಯಂತೆ ಜಿಗಿಯುತ್ತಾನೆ. ಎದುರಾಳಿಯನ್ನು ಟಚ್‌ ಮಾಡಿ ಚಿರತೆಯ ವೇಗದಲ್ಲಿ ಪುನಃ ತನ್ನ ಕೋರ್ಟ್‌ಗೆ ಮರಳುತ್ತಾನೆ. ಹೀಗಾಗಿ ಯಾವುದೇ ತಂಡದ ಅಭಿಮಾನಿಯಾಗಿದ್ದರೂ ಚೌಧರಿ ರೈಡಿಂಗ್‌ ಎಂದರೆ ಹಬ್ಬ ಮಾಡುತ್ತಾರೆ. ಪ್ರೇಕ್ಷಕರ ಗ್ಯಾಲರಿಯಲ್ಲಿಯೇ ಕುಣಿದು ಕುಪ್ಪಳಿಸುತ್ತಾರೆ. ಆತ ರೈಡಿಂಗ್‌ಗೆ ಹೋದ ಎಂದರೆ ಎದುರಾಳಿಯಿಂದ ಅಂಕ ಬಂತು ಎಂದೇ ತೀರ್ಮಾನ. ಎಲ್ಲಿಯೂ ಅಪರೂಪಕ್ಕೊಮ್ಮೆ ಮಾತ್ರ ಕ್ಷೇತ್ರ ರಕ್ಷಣೆಯ ಬಲೆಯಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ.  ಅಂದಹಾಗೆ ಚೌಧರಿ ಈ ಬಾರಿ ತೆಲುಗು ಟೈಟಾನ್ಸ್‌ ತಂಡದ ಸಾರಥಿ. ತಂಡ ತವರಿನಲ್ಲಿ ತೀರಾ ಕಳಪೆ ಪ್ರದರ್ಶನ ನೀಡಿದೆ. ಈ ಆತಂಕವನ್ನು ಹೋಗಲಾಡಿಸಿ ತಂಡವನ್ನು ಮೇಲೆತ್ತಿ ಮುನ್ನಡೆಸುವ ಮಹತ್ವದ ಜವಾಬ್ದಾರಿ ರಾಹುಲ್‌ ಮೇಲಿದೆ.

ರೈಡಿಂಗ್‌ನಲ್ಲಿ  500 ಅಂಕ
ರಾಹುಲ್‌ ಚೌಧರಿ ಕಬಡ್ಡಿಯಲ್ಲಿ ಮೊದಲ ಬಾರಿಗೆ ವೃತ್ತಿ ಜೀವನ ಆರಂಭಿಸಿದ್ದು ರಕ್ಷಣಾ ಆಟಗಾರನಾಗಿ. ಆದರೆ ಅನಂತರ ರೈಡರ್‌ ಆಗಿ ಬದಲಾದರು. ಇದು ಚೌಧರಿಯ ಕೈ ಹಿಡಿದಿದೆ. ಪ್ರೊ ಕಬಡ್ಡಿಯ ಪಂದ್ಯಗಳಲ್ಲಿ ರೈಡಿಂಗ್‌ನಲ್ಲಿ 500 ಅಂಕಗಳ ಗಡಿ ದಾಟಿದ್ದಾರೆ. ಈ ಸಾಧನೆ ಮಾಡಿದ ಮೊದಲ ಮತ್ತು ಏಕೈಕ ಆಟಗಾರ ಎಂಬ ಇತಿಹಾಸ ನಿರ್ಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರದೀಪ್‌ ನರ್ವಾಲ್‌, ಅನೂಪ್‌ ಕುಮಾರ್‌, ದೀಪಕ್‌ ಹೂಡಾ, ಅಜಯ್‌ ಠಾಕೂರ್‌, ಜಸ್ವೀರ್‌ ಸಿಂಗ್‌… ಇವರೆಲ್ಲರಿಗಿಂತ ಚೌಧರಿಯೇ ಒಂದು ಕೈ ಮೇಲಾಗಿ ಕಾಣುತ್ತಾರೆ.

 ಮಂಜು ಮಳಗುಳಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.