ಕೇನ್‌ ದಾಖಲೆ ದ್ವಿಶತಕ; ಕಿವೀಸ್‌ ಮೇಲುಗೈ


Team Udayavani, Jan 5, 2021, 10:44 PM IST

ಕೇನ್‌ ದಾಖಲೆ ದ್ವಿಶತಕ; ಕಿವೀಸ್‌ ಮೇಲುಗೈ

ಕ್ರೈಸ್ಟ್‌ಚರ್ಚ್: ಕೇನ್‌ ವಿಲಿಯಮ್ಸನ್‌ ಅವರ ದಾಖಲೆ ದ್ವಿಶತಕ, ಹೆನ್ರಿ ನಿಕೋಲ್ಸ್‌ ಮತ್ತು ಡ್ಯಾರಿಲ್‌ ಮಿಚೆಲ್‌ ಅವರ ಶತಕ ಸಾಹಸದಿಂದ ಕ್ರೈಸ್ಟ್‌ ಚರ್ಚ್‌ ಟೆಸ್ಟ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ಅಮೋಘ ಮೇಲುಗೈ ಸಾಧಿಸಿದೆ. ಪಾಕಿಸ್ಥಾನ ವೈಟ್‌ವಾಶ್‌ ಮುಖಭಂಗ ಅನುಭವಿಸುವುದು ಖಾತ್ರಿಯಾಗಿದೆ.

ನ್ಯೂಜಿಲ್ಯಾಂಡ್‌ 6 ವಿಕೆಟಿಗೆ 659 ರನ್‌ ಪೇರಿಸಿ ಮೊದಲ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿತು. ಇದರಲ್ಲಿ ವಿಲಿಯಮ್ಸನ್‌ ಪಾಲು 238 ರನ್‌ (364 ಎಸೆತ, 28 ಬೌಂಡರಿ). ಇದರೊಂದಿಗೆ ಅವರು ಟೆಸ್ಟ್‌ ನಲ್ಲಿ 4 ದ್ವಿಶತಕ ಬಾರಿಸಿದ ನ್ಯೂಜಿಲ್ಯಾಂಡಿನ ದ್ವಿತೀಯ ಕ್ರಿಕೆಟಿಗನೆನಿಸಿದರು. ಬ್ರೆಂಡನ್‌ ಮೆಕಲಮ್‌ ಮೊದಲಿಗ.

ಈ ಮ್ಯಾರಥಾನ್‌ ಇನ್ನಿಂಗ್ಸ್‌ ವೇಳೆ ವಿಲಿಯಮ್ಸನ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ 7 ಸಾವಿರ ರನ್‌ ಪೂರೈಸಿದರು. ಹಾಗೆಯೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ಸಹಸ್ರ ರನ್‌ ಪೂರ್ತಿಗೊಳಿಸಿದ ನ್ಯೂಜಿಲ್ಯಾಂಡಿನ 3ನೇ ಆಟಗಾರನೆನಿಸಿದರು.

ವಿಲಿಯಮ್ಸನ್‌-ನಿಕೋಲ್ಸ್‌ 4ನೇ ವಿಕೆಟಿಗೆ 369 ರನ್‌ ಜತೆಯಾಟದ ಮೂಲಕ ಪಾಕ್‌ ಬೌಲರ್‌ಗಳನ್ನು ಸುಸ್ತು ಹೊಡೆಸಿದರು. ಇದು ಎಲ್ಲ ವಿಕೆಟ್‌ಗಳಿಗೆ ಅನ್ವಯಿಸುವಂತೆ ನ್ಯೂಜಿಲ್ಯಾಂಡಿನ 3ನೇ ಅತ್ಯಧಿಕ ಮೊತ್ತದ ಜತೆಯಾಟವಾಗಿದೆ.

ಹೆನ್ರಿ ನಿಕೋಲ್ಸ್‌ 291 ಎಸೆತಗಳಿಂದ 157 ರನ್‌ ಬಾರಿಸಿದರು (18 ಬೌಂಡರಿ, ಒಂದು ಸಿಕ್ಸರ್‌). ಡ್ಯಾರಿಲ್‌ ಮಿಚೆಲ್‌ ಮೊದಲ ಶತಕ ಪೂರೈಸಿದ ಕೂಡಲೇ ವಿಲಿಯಮ್ಸನ್‌ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿದರು. ಮಿಚೆಲ್‌ ಗಳಿಕೆ ಅಜೇಯ 102 ರನ್‌ (112 ಎಸೆತ, 8 ಬೌಂಡರಿ, 2 ಸಿಕ್ಸರ್‌).

ಪಾಕಿಸ್ಥಾನ 64 “ಇತರ ರನ್‌’ ಬಿಟ್ಟುಕೊಟ್ಟಿತು. ಇದು ಇನ್ನಿಂಗ್ಸ್‌ ಒಂದರಲ್ಲಿ ಪಾಕಿಸ್ಥಾನ ನೀಡಿದ ಗರಿಷ್ಠ ಎಕ್ಸ್‌ಟ್ರಾ ರನ್ನುಗಳ ಜಂಟಿ ದಾಖಲೆ.

3ನೇ ದಿನದಾಟದ ಅಂತ್ಯಕ್ಕೆ ಪಾಕಿಸ್ಥಾನ ಒಂದು ವಿಕೆಟಿಗೆ 8 ರನ್‌ ಮಾಡಿದ್ದು, ಇನ್ನೂ 354 ರನ್ನುಗಳ ಹಿನ್ನಡೆಯಲ್ಲಿದೆ.

ಸಂಕ್ಷಿಪ್ತ ಸ್ಕೋರ್‌: ಪಾಕಿಸ್ಥಾನ-297 ಮತ್ತು ಒಂದು ವಿಕೆಟಿಗೆ 8. ನ್ಯೂಜಿಲ್ಯಾಂಡ್‌-6 ವಿಕೆಟಿಗೆ 659 ಡಿಕ್ಲೇರ್‌.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.