![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ಭಾರತ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದ ಕೇನ್ ವಿಲಿಯಮ್ಸನ್
Team Udayavani, Nov 16, 2021, 11:40 AM IST
![kane williamson](https://www.udayavani.com/wp-content/uploads/2021/11/kane-620x342.jpg)
ಜೈಪುರ: ಟಿ20 ವಿಶ್ವಕಪ್ ಮುಗಿದು ಮೂರೇ ದಿನಕ್ಕೆ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮತ್ತೆ ಮುಖಾಮುಖಿಯಾಗುತ್ತಿದೆ. ನ.17ರಂದು ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಭಾರತ- ನ್ಯೂಜಿಲ್ಯಾಂಡ್ ನಡುವಿನ ಮೊದಲ ಟಿ20 ಪಂದ್ಯ ನಡೆಯಲಿದೆ.
ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಅವರು ಈ ಟಿ20 ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಸತತ ಕ್ರಿಕೆಟ್ ಮತ್ತು ಮುಂದಿನ ಟೆಸ್ಟ್ ಸರಣಿಗೆ ತಯಾರಾಗುವ ಉದ್ದೇಶದಿಂದ ಕೇನ್ ವಿಲಿಯಮ್ಸನ್ ಈ ನಿರ್ಧಾರ ಕೈಗೊಂಡಿದ್ದಾರೆ.
ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಹಿರಿಯ ವೇಗಿ ಟಿಮ್ ಸೌಥಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ.
ಇದನ್ನೂ ಓದಿ:2022 ಟಿ20 ವಿಶ್ವಕಪ್ ಫೈನಲ್ – ಸೆಮಿ ಫೈನಲ್ ನಡೆಯುವ ಮೈದಾನಗಳ ಪಟ್ಟಿ ಬಿಡುಗಡೆ ಮಾಡಿದ ಐಸಿಸಿ
ಎರಡನೇ ಟಿ20 ಪಂದ್ಯ ರಾಂಚಿಯಲ್ಲಿ ನವೆಂಬರ್ 19 ರಂದು ನಡೆಯಲಿದ್ದು, ಅಂತಿಮ ಪಂದ್ಯ ನವೆಂಬರ್ 21 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಎರಡು ಟೆಸ್ಟ್ ಪಂದ್ಯಗಳು ಕ್ರಮವಾಗಿ ನವೆಂಬರ್ 25-29 ಮತ್ತು ಡಿಸೆಂಬರ್ 3-7 ರವರೆಗೆ ಕಾನ್ಪುರ ಮತ್ತು ಮುಂಬೈನಲ್ಲಿ ನಡೆಯಲಿವೆ.
ತಂಡಗಳು
ಭಾರತ: ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಶ್ವಿನ್, ಅಕ್ಸರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
ನ್ಯೂಜಿಲ್ಯಾಂಡ್: ಟಿಮ್ ಸೌಥಿ (ನಾಯಕ), ಟಾಡ್ ಆಸ್ಟಲ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಲಾಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೇಮಿಸನ್, ಆಡಮ್ ಮಿಲ್ನೆ, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್, ಇಶ್ ಸೋಧಿ.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.