ಭಾರತದ ಜಯಕ್ಕೆ ಅಡ್ಡಿಯಾದ ರವೀಂದ್ರ ಮತ್ತು ಮಂದಬೆಳಕು: ಕಾನ್ಪುರ ಟೆಸ್ಟ್ ಡ್ರಾನಲ್ಲಿ ಅಂತ್ಯ


Team Udayavani, Nov 29, 2021, 4:36 PM IST

ಭಾರತದ ಜಯಕ್ಕೆ ಅಡ್ಡಿಯಾದ ರವೀಂದ್ರ ಮತ್ತು ಮಂದಬೆಳಕು: ಕಾನ್ಪುರ ಟೆಸ್ಟ್ ಡ್ರಾನಲ್ಲಿ ಅಂತ್ಯ

ಕಾನ್ಪುರ: ಅಂತಿಮ ಎಸೆತದವರೆಗೂ ರೋಚಕತೆಯಿಂದ ಸಾಗಿದ ಕಾನ್ಪುರ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಜಯದ ಅತ್ಯಂತ ಸನಿಹದವರೆಗೆ ಸಾಗಿದ್ದ ಟೀಂ ಇಂಡಿಯಾ ಕೊನೆಗೆ ಡ್ರಾಗೆ ಸಮಾಧಾನಪಡಬೇಕಾಯಿತು. ಕೊನೆಯಲ್ಲಿ ಕ್ರೀಸ್ ಕಚ್ಚಿ ನಿಂತ ರಚಿನ್ ರವೀಂದ್ರ ಮತ್ತು ಮಂದ ಬೆಳಕಿನ ಕಾರಣ ಭಾರತ ಸರಣಿಯಲ್ಲಿ ಮುನ್ನಡೆ ಸಾಧಿಸಲು ವಿಫಲವಾಯಿತು.

ಗೆಲುವಿಗೆ 284 ರನ್ ಗುರಿ ಪಡೆದಿದ್ದ ಕಿವೀಸ್ ದಿನದ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 165 ರನ್ ಗಳಿಸಿತು.

ನಾಲ್ಕು ರನ್ ಗೆ ಒಂದು ವಿಕೆಟ್ ಕಳೆದುಕೊಂಡಲ್ಲಿಂದ ಐದನೇ ದಿನದಾಟ ಆರಂಭಿಸಿದ ಲ್ಯಾಥಂ ಮತ್ತು ಸೋಮರ್ವಿಲ್ಲೆ ಮೊದಲ ಸೆಶನ್ ಪೂರ್ತಿ ಆಡಿದರು. 36 ರನ್ ಗಳಿಸಿದ್ದ ನೈಟ್ ವಾಚ್ ಮನ್ ಸೋಮರ್ವಿಲ್ಲೆ ಉಮೇಶ್ ಯಾದವ್ ಬೌಲಿಂಗ್ ನಲ್ಲಿ ಔಟಾದರು. ಟಾಮ್ ಲ್ಯಾಥಂ ಅವರು 52 ರನ್ ಗಳಿಸಿದ್ದ ವೇಳೆ ಅಶ್ವಿನ್ ಎಸೆತದಲ್ಲಿ ಬೌಲ್ಡಾದರು.

ಇದನ್ನೂ ಓದಿ:418 ಟೆಸ್ಟ್ ವಿಕೆಟ್ ಗಳೊಂದಿಗೆ ಹರ್ಭಜನ್ ಸಿಂಗ್ ದಾಖಲೆ ಮುರಿದ ರವಿ ಅಶ್ವಿನ್

ನಂತರ ಸ್ಪಿನ್ನರ್ ಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ದಾಳಿಗೆ ನಲುಗಿದ ಕಿವೀಸ್ ಸತತ ವಿಕೆಟ್ ಕಳೆದುಕೊಂಡಿತು. ಒಂದು ಹಂತದಲ್ಲಿ ಕಿವೀಸ್ 89.2 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡಿತ್ತು. ಭಾರತದ ಗೆಲುವಿಗೆ ಕೇವಲ ಒಂದು ವಿಕೆಟ್ ಸಾಕಿತ್ತು. ಆದರೆ ಪಟ್ಟು ಹಿಡಿದು ನಿಂತ ರಚಿನ್ ರವೀಂದ್ರ ಭಾರತದ ಗೆಲುವಿನ ಆಸೆಗೆ ತಣ್ಣೀರೆರಚಿದರು. ಕೊನೆಯಲ್ಲಿ ಮಂದಬೆಳಕಿನ ಕಾರಣ 12 ನಿಮಿಷ ಬೇಗನೇ ಅಂತ್ಯ ಮಾಡಬೇಕಾಯಿತು.

ರಚಿನ್ ರವೀಂದ್ರ 91 ಎಸೆತಗಳಿಂದ 18 ರನ್ ಗಳಿಸಿದರು. ಭಾರತದ ಪರ ಜಡೇಜಾ ನಾಲ್ಕು ವಿಕೆಟ್ ಮತ್ತು ಅಶ್ವಿನ್ ಮೂರು ವಿಕೆಟ್ ಪಡೆದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.