ಭಾರತ‌ ಸೆಮಿ ಪ್ರವೇಶ ಖಚಿತ: ಕಪಿಲ್‌ ವಿಶ್ವಾಸ


Team Udayavani, May 9, 2019, 6:00 AM IST

KAPIL

ಹೊಸದಿಲ್ಲಿ: 1983ರ ತೃತೀಯ ಆವೃತ್ತಿಯ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾರತವನ್ನು ಚಾಂಪಿಯನ್‌ ಪಟ್ಟವೇರಿಸಿ ಇತಿಹಾಸ ನಿರ್ಮಿಸಿದ ಕಪಿಲ್‌ದೇವ್‌, ಭಾರತದ ಈ ಬಾರಿಯ ಓಟದ ಬಗ್ಗೆ ಭರವಸೆಯ ಮಾತಾಡಿದ್ದಾರೆ. ಕೊಹ್ಲಿ ಪಡೆ ಟಾಪ್‌-4ರಲ್ಲಿ ಒಂದಾಗಿ ಸೆಮಿಫೈನಲ್‌ ಪ್ರವೇಶಿಸುವುದರಲ್ಲಿ ಅನುಮಾನವಿಲ್ಲ, ಆದರೆ ಮುಂದಿನ ಹಾದಿ ಸುಲಭವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಭಾರತ ತಂಡ ಅನುಭವಿ ಹಾಗೂ ಯುವ ಆಟಗಾರರಿಂದ ಸಂತುಲಿತವಾಗಿದೆ. ಇಲ್ಲಿ ಧೋನಿಯೂ ಇದ್ದಾರೆ, ಕೊಹ್ಲಿಯೂ ಇದ್ದಾರೆ. ಭಾರತ ಖಂಡಿತವಾಗಿಯೂ ಅಗ್ರ ನಾಲ್ಕರಲ್ಲಿ ಸ್ಥಾನ ಸಂಪಾದಿಸಲಿದೆ. ಆದರೆ ಮುಂದಿನ ಹಾದಿ ಕಠಿನವಾಗಲಿದೆ. ಇದು ಎಲ್ಲ ತಂಡಗಳಿಗೂ ಅನ್ವಯಿ ಸುವ ಮಾತು’ ಎಂದು ಕಪಿಲ್‌ ಹೇಳಿದರು.

“ಭಾರತ ಅತ್ಯುತ್ತಮ ತಂಡವನ್ನು ಹೊಂದಿದೆ. ಆದರೆ ಆತ್ಮವಿಶ್ವಾಸ, ನಂಬಿಕೆ ಮತ್ತು ಸಾಧನೆ ಎನ್ನುವುದು ತಂಡದ ಮುನ್ನಡೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ’ ಎಂದರು.

4ನೇ ತಂಡಕ್ಕೆ ಪೈಪೋಟಿ
ಸೆಮಿಫೈನಲ್‌ ಪ್ರವೇಶಿಸುವ 3 ತಂಡಗಳನ್ನು ಹೆಸರಿಸಬಹುದು, ಆದರೆ 4ನೇ ತಂಡವನ್ನು ಗುರುತಿಸುವುದು ಬಹಳ ಕಷ್ಟ ಎಂಬುದು ಕಪಿಲ್‌ ಅಭಿಪ್ರಾಯ.

“ಲೀಗ್‌ ಹಂತದಲ್ಲಿ ಟಾಪ್‌-3 ತಂಡ ಗಳಾಗಿ ಭಾರತ, ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯವನ್ನು ಹೆಸರಿಸಬಹುದು. ಆದರೆ 4ನೇ ತಂಡದ ಆಯ್ಕೆ ಅತ್ಯಂತ ಜಟಿಲ. ಇದಕ್ಕೆ ತೀವ್ರ ಪೈಪೋಟಿ ಇದೆ. ನ್ಯೂಜಿಲ್ಯಾಂಡ್‌, ಪಾಕಿಸ್ಥಾನ, ದಕ್ಷಿಣ ಆಫ್ರಿಕಾ ನಡುವೆ ಸ್ಪರ್ಧೆ ಏರ್ಪಡಬಹುದು’ ಎಂದು ಕಪಿಲ್‌ ಹೇಳಿದರು.

ಕೂಟದ “ಅಚ್ಚರಿಯ ಪ್ಯಾಕೇಜ್‌’ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಪಿಲ್‌ದೇವ್‌, ನ್ಯೂಜಿಲ್ಯಾಂಡ್‌ , ವೆಸ್ಟ್‌ ಇಂಡೀಸ್‌ ತಂಡಗಳನ್ನು ಹೆಸರಿಸಿದರು.

ಪಾಂಡ್ಯ ಆಸ್ತಿಯಾಗಬಲ್ಲರು…
ಹಾರ್ದಿಕ್‌ ಪಾಂಡ್ಯ ಭಾರತ ತಂಡದ ಆಸ್ತಿಯಾಗಬಲ್ಲರು. ಆದರೆ ಅವರ ಮೇಲೆ ವಿಪರೀತ ಒತ್ತಡ ಹೇರಬಾರದು. ಪಾಂಡ್ಯ ಸಹಜ ಆಟವಾಡುತ್ತ ಹೋದರೆ ಸಾಕು. ಇಂಗ್ಲಿಷ್‌ ವಾತಾವರಣ ಪೇಸ್‌ ಬೌಲರ್‌ಗಳಿಗೆ ಭಾರೀ ನೆರವು ನೀಡುತ್ತದೆ. ಬುಮ್ರಾ, ಶಮಿ ಈಗ ಅಮೋಘ ಬೌಲಿಂಗ್‌ ನಡೆಸುತ್ತಿದ್ದು, ವಿಶ್ವಕಪ್‌ನಲ್ಲಿ ಭಾರತದ ಬೌಲಿಂಗ್‌ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಕ್ರಿಕೆಟ್‌ ಲೆಜೆಂಡ್‌ ಕಪಿಲ್‌ ಹೇಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.