ಕರಾಚಿ ಏಕದಿನ: ಪಾಕ್‌ ಗೆಲುವು


Team Udayavani, Oct 2, 2019, 5:53 AM IST

karachi

ಕರಾಚಿ: ಒಂದು ದಶಕದ ಬಳಿಕ ಏಕದಿನ ಅಂತಾರಾಷ್ಟ್ರೀಯ ಪಂದ್ಯವನ್ನು ಕಂಡ ಕರಾಚಿಯಲ್ಲಿ ಆತಿಥೇಯ ಪಾಕಿಸ್ಥಾನ ಜಯ ಸಾಧಿಸಿದೆ. ಸೋಮವಾರ ನಡೆದ ಹಗಲು-ರಾತ್ರಿ ಪಂದ್ಯದಲ್ಲಿ ಅದು ಶ್ರೀಲಂಕಾವನ್ನು 67 ರನ್ನುಗಳಿಂದ ಮಣಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಪಾಕಿಸ್ಥಾನ, ಬಾಬರ್‌ ಆಜಂ ಅವರ ಶತಕ ಸಾಹಸದಿಂದ 7 ವಿಕೆಟಿಗೆ 305 ರನ್‌ ಪೇರಿಸಿತು. ಜವಾಬಿತ್ತ ಶ್ರೀಲಂಕಾ 46.5 ಓವರ್‌ಗಳಲ್ಲಿ 238ಕ್ಕೆ ಆಲೌಟ್‌ ಆಯಿತು.

ಇದು ಸರಣಿಯ 2ನೇ ಪಂದ್ಯವಾಗಿದ್ದು, ಇಲ್ಲೇ ನಡೆಯಬೇಕಿದ್ದ ಮೊದಲ ಮುಖಾಮುಖೀ ಮಳೆಯಿಂದ ರದ್ದುಗೊಂಡಿತ್ತು. ಪ್ರತಿಕೂಲ ಹವಾಮಾನದ ಭೀತಿಯಿಂದ ರವಿವಾರದ ದ್ವಿತೀಯ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿತ್ತು. 3ನೇ ಹಾಗೂ ಅಂತಿಮ ಮುಖಾಮುಖೀ ಇದೇ ಅಂಗಳದಲ್ಲಿ ಬುಧವಾರ ನಡೆಯಲಿದೆ.

ಶಿನ್ವಾರಿ 5 ವಿಕೆಟ್‌ ಸಾಧನೆ
ಎಡಗೈ ಮಧ್ಯಮ ವೇಗಿ ಉಸ್ಮಾನ್‌ ಶಿನ್ವಾರಿ 5 ವಿಕೆಟ್‌ ಉರುಳಿಸಿ ಲಂಕೆಯನ್ನು ಹಾದಿ ತಪ್ಪಿಸಿದರು. ಇದು ಶಿನ್ವಾರಿ ಅವರ 2ನೇ 5 ವಿಕೆಟ್‌ ಸಾಧನೆಯಾಗಿದೆ. ಈ ಸಾಹಸಕ್ಕಾಗಿ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು. ಶಾದಾಬ್‌ ಖಾನ್‌ 2 ವಿಕೆಟ್‌ ಉರುಳಿಸಿದರು.

28 ರನ್‌ ಆಗುವಷ್ಟರಲ್ಲಿ 5 ವಿಕೆಟ್‌ ಕಳೆದುಕೊಂಡ ಶ್ರೀಲಂಕಾ ಇನ್ನೂರರ ಗಡಿ ದಾಟಿದ್ದೇ ಒಂದು ಸಾಹಸವೆನಿಸಿತು. ಕೆಳ ಕ್ರಮಾಂಕದ ಆಟಗಾರರಾದ ಶೆಹಾನ್‌ ಜಯಸೂರ್ಯ 96, ದಸುನ್‌ ಶಣಕ 68 ರನ್‌ ಬಾರಿಸಿ ಹೋರಾಟ ಜಾರಿಯಲ್ಲಿರಿಸಿದರು. ಇವರು ಮೊತ್ತವನ್ನು 205ರ ತನಕ ಕೊಂಡೊಯ್ದರು. ಈ ಹಂತದಲ್ಲಿ ಫ್ಲಡ್‌ಲೈಟ್‌ ಕೈಕೊಟ್ಟ ಘಟನೆಯೂ ಸಂಭವಿಸಿತು. ಇದು ಸರಿಗೊಂಡ ಬೆನ್ನಲ್ಲೇ ಜಯಸೂರ್ಯ ಮತ್ತು ಶಣಕ ಅವರ ವಿಕೆಟ್‌ ಬೆನ್ನು ಬೆನ್ನಿಗೆ ಉರುಳಿತು.

ಸಂಕ್ಷಿಪ್ತ ಸ್ಕೋರ್‌
ಪಾಕಿಸ್ಥಾನ-50 ಓವರ್‌ಗಳಲ್ಲಿ 7 ವಿಕೆಟಿಗೆ 305 (ಬಾಬರ್‌ ಆಜಂ 115, ಫ‌ಕಾರ್‌ ಜಮಾನ್‌ 54, ಹ್ಯಾರಿಸ್‌ ಸೊಹೈಲ್‌ ಔಟಾಗದೆ 40, ಹಸರಂಗ 63ಕ್ಕೆ 2). ಶ್ರೀಲಂಕಾ-46.5 ಓವರ್‌ಗಳಲ್ಲಿ 238 (ಜಯಸೂರ್ಯ 96, ಶಣಕ 68, ಹಸರಂಗ 30, ಶಿನ್ವಾರಿ 51ಕ್ಕೆ 5, ಶಾದಾಬ್‌ ಖಾನ್‌ 76ಕ್ಕೆ 2). ಪಂದ್ಯಶ್ರೇಷ್ಠ: ಉಸ್ಮಾನ್‌ ಶಿನ್ವಾರಿ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.