ವಿಜಯ್ ಹಜಾರೆ: ಜಾರ್ಖಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಕ್ವಾರ್ಟರ್ ಫೈನಲ್ ಗೇರಿದ ಕರ್ನಾಟಕ
Team Udayavani, Nov 26, 2022, 5:47 PM IST
ಅಹಮದಾಬಾದ್: ವಿಜಯ್ ಹಜಾರೆ ಕೂಟದಲ್ಲಿ ತನ್ನ ಉತ್ತಮ ಪ್ರದರ್ಶನವನ್ನು ಮುಂದುವರಿಸಿರುವ ಕರ್ನಾಟಕ ತಂಡವು ಕ್ವಾರ್ಟರ್ ಫೈನಲ್ ಗೇರಿದೆ. ಇಂದು ನಡೆದ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ವಿರುದ್ಧ ಐದು ವಿಕೆಟ್ ಅಂತರದ ಗೆಲುವು ಸಾಧಿಸಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಾರ್ಖಂಡ್ 47.1 ಓವರ್ ಗಳಲ್ಲಿ 187 ರನ್ ಗಳಿಸಿದರೆ, ಕರ್ನಾಟಕ ತಂಡವು ಐದು ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಟಾಸ್ ಸೋತರೂ ಬ್ಯಾಟಿಂಗ್ ಅವಕಾಶ ಪಡೆದ ಜಾರ್ಖಂಡ್ ಒಂದು ರನ್ ಆಗುವಷ್ಟರಲ್ಲಿ ಎರಡು ರನ್ ಕಳೆದುಕೊಂಡಿತ್ತು. ಬಳಿಕ ವಿಕೆಟ್ ಕೀಪರ್ ಕುಶಗಾರ 74 ರನ್, ಅನುಕುಲ್ ರಾಯ್ 57 ರನ್ ಗಳಿಸಿದರು. ಕರ್ನಾಟಕದ ಪರ ವಿದ್ವತ್ ಕಾವೇರಪ್ಪ, ರೋನಿತ್ ಮೋರೆ, ಎಂ.ವೆಂಕಟೇಶ್ ತಲಾ ಮೂರು ವಿಕೆಟ್ ಕಿತ್ತರು.
ಚೇಸಿಂಗ್ ಆರಂಭಿಸಿದ ಕರ್ನಾಟಕ ತಂಡಕ್ಕೆ ರವಿಕುಮಾರ್ ಸಮರ್ಥ್ ಮತ್ತು ನಿಕಿನ್ ಜೋಸ್ ಅರ್ಧಶತಕದ ನೆರವು ನೀಡಿದರು. ಸಮರ್ಥ್ 53 ರನ್, ಜೋಸ್ 63 ರನ್ ಗಳಿಸಿದರು. ಕರ್ನಾಟಕ ತಂಡವು 40.5 ಓವರ್ ಗಳಲ್ಲಿ ಗುರಿ ತಲುಪಿತು.
ಸೋಮವಾರ ಕ್ವಾರ್ಟರ್ ಫೈನಲ್ ಪಂದ್ಯ ನಡೆಯಲಿದ್ದು, ಕರ್ನಾಟಕ ತಂಡವು ಪಂಜಾಬ್ ವಿರುದ್ಧ ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮಹಿಳಾ ಅಧಿಕಾರಿಯಿಂದ ಡಾಕ್ಟರ್ ಗೆ ಮಸಾಜ್! ಫೋಟೊ- ವಿಡಿಯೋ ವೈರಲ್
ದುರಂತ ಅಂತ್ಯ:ನ್ಯೂಮೋನಿಯಾಕ್ಕೆ ಕಾದ ರಾಡ್ ನಿಂದ 3ತಿಂಗಳ ಹಸುಳೆಗೆ 51 ಬಾರಿ ಚುಚ್ಚಿ ಚಿಕಿತ್ಸೆ
ಬೆಂಗಳೂರಲ್ಲಿ ಮಲಯಾಳಂನ “ಕೋಲ್ಡ್ ಕೇಸ್” ಸಿನೆಮಾ ಹೋಲುವ ಪ್ರಕರಣ
ಹಿಟ್ & ರನ್’ಗೆ ಇಬ್ಬರ ಬಲಿ ಪ್ರಕರಣ! ‘ಮ್ಯಾಡ್ ಇನ್ ಕುಡ್ಲ’ ಕಾಮಿಡಿಯನ್ ಅರ್ಪಿತ್ ಬಂಧನ
ನಾದಿನಿಗೆ ದೈಹಿಕ, ವರದಕ್ಷಿಣೆ ಕಿರುಕುಳ: ಡ್ಯಾನ್ಸರ್ ಸ್ವಪ್ನ ಚೌಧರಿ, ಕುಟುಂಬದ ವಿರುದ್ಧ FIR