ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದ ಕರ್ನಾಟಕ


Team Udayavani, Dec 20, 2019, 5:13 AM IST

karnataka

ಹುಬ್ಬಳ್ಳಿ: ಶ್ರೇಯಸ್‌ ಗೋಪಾಲ್‌ ಮತ್ತು ಅಭಿಮನ್ಯು ಮಿಥುನ್‌ ಕೆಳ ಕ್ರಮಾಂಕದಲ್ಲಿ ದಿಟ್ಟ ಬ್ಯಾಟಿಂಗ್‌ ಪ್ರದರ್ಶನ ನೀಡುವ ಮೂಲಕ ಉತ್ತರಪ್ರದೇಶ ವಿರುದ್ಧದ ರಣಜಿ ಪಂದ್ಯದಲ್ಲಿ ಕರ್ನಾಟಕಕ್ಕೆ ಮಹತ್ವದ ಇನ್ನಿಂಗ್ಸ್‌ ಮುನ್ನಡೆ ತಂದಿತ್ತಿದ್ದಾರೆ. ಯುಪಿಯ 281ಕ್ಕೆ ಉತ್ತರವಾಗಿ ಕರ್ನಾಟಕ 321 ರನ್‌ ಗಳಿಸಿತು.

ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿರುವ ಉತ್ತರಪ್ರದೇಶ 3ನೇ ದಿನದಾಟದ ಅಂತ್ಯಕ್ಕೆ ಒಂದು ವಿಕೆಟ್‌ ಕಳೆದುಕೊಂಡು 29 ರನ್‌ ಮಾಡಿದೆ. ಶುಕ್ರವಾರ ಅಂತಿಮ ದಿನವಾಗಿದ್ದು, ಪಂದ್ಯ ಸ್ಪಷ್ಟ ಫ‌ಲಿತಾಂಶ ಕಾಣುವ ಸಂಭವ ಕಡಿಮೆ ಎಂದೇ ಹೇಳಬಹುದು.

4ಕ್ಕೆ 168 ರನ್‌ ಮಾಡಿದಲ್ಲಿಂದ ಗುರುವಾರದ ಆಟ ಮುಂದುವರಿಸಿದ ಕರ್ನಾಟಕ, 222ಕ್ಕೆ ತಲಪುವಷ್ಟರಲ್ಲಿ 7 ವಿಕೆಟ್‌ ಕಳೆದುಕೊಂಡಿತು. ಅಭಿಷೇಕ್‌ ರೆಡ್ಡಿ (32), ಬಿ.ಆರ್‌. ಶರತ್‌ (16) ಮತ್ತು ಡೇವಿಡ್‌ ಮಥಾಯಿಸ್‌ (4) ಬೇಗನೇ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿಕೊಂಡಾಗ ಇನ್ನಿಂಗ್ಸ್‌ ಹಿನ್ನಡೆಯ ಭೀತಿ ಎದುರಾಯಿತು.

ಆದರೆ ಇನ್ನೊಂದು ತುದಿಯಲ್ಲಿ ಕ್ರೀಸ್‌ ಆಕ್ರಮಿಸಿಕೊಂಡಿದ್ದ ಶ್ರೇಯಸ್‌ ಗೋಪಾಲ್‌ ಮತ್ತು ಜಗದೀಶ್‌ ಸುಚಿತ್‌ ಸೇರಿಕೊಂಡು ಹೋರಾಟವೊಂದನ್ನು ಸಂಘಟಿಸಿದರು. 8ನೇ ವಿಕೆಟಿಗೆ 57 ರನ್‌ ಹರಿದು ಬಂತು. ಈ ಜೋಡಿ ಬೇರ್ಪಡುವಾಗ ಕರ್ನಾಟಕದ ಮುನ್ನಡೆಗೆ ಕೇವಲ 3 ರನ್‌ ಅಗತ್ಯವಿತ್ತು.

ಮಿಥುನ್‌ ಬಿರುಸಿನ ಆಟ
ಅನಂತರ ಕ್ರೀಸ್‌ ಇಳಿದ ಮಿಥುನ್‌ ಬಿರುಸಿನ ಆಟಕ್ಕೆ ಮುಂದಾದರು. 48 ಎಸೆತಗಳಿಂದ ಅಜೇಯ 34 ರನ್‌ (3 ಬೌಂಡರಿ, 1 ಸಿಕ್ಸರ್‌) ಮಾಡಿ ತಂಡದ ಮೊತ್ತವನ್ನು 320ರ ಗಡಿ ದಾಟಿಸಿದರು. ಬೌಲಿಂಗ್‌ನಲ್ಲೂ ಮಿಂಚಿದ ಮಿಥುನ್‌ 6 ವಿಕೆಟ್‌ ಉಡಾಯಿಸಿದ್ದರು.

ಶ್ರೇಯಸ್‌ ಗೋಪಾಲ್‌ ಕೊಡುಗೆ 58 ರನ್‌. 182 ಎಸೆತಗಳ ಈ ಜವಾಬ್ದಾರಿಯುತ ಆಟದಲ್ಲಿ 6 ಬೌಂಡರಿ ಒಳಗೊಂಡಿತ್ತು. ಸುಚಿತ್‌ ಅವರ 28 ರನ್‌ 120 ಎಸೆತಗಳಿಂದ ಬಂತು (2 ಬೌಂಡರಿ).

ಉತ್ತರಪ್ರದೇಶ 2ನೇ ಹೊಸ ಚೆಂಡನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ ವಿಫ‌ಲವಾಯಿತು. ಗಾಯಾಳು ಬೌಲರ್‌, ನಾಯಕ ಅಂಕಿತ್‌ ರಜಪೂತ್‌ ಶಾರ್ಟ್‌ ರನ್‌ಅಪ್‌ನಿಂದಾಗಿ ವೈಫ‌ಲ್ಯ ಕಂಡರು. ಸೌರಭ್‌ ಕುಮಾರ್‌ 6 ವಿಕೆಟ್‌ ಉಡಾಯಿಸಿದರೂ ಕರ್ನಾಟಕದ ಮುನ್ನಡೆಯನ್ನು ತಡೆಯಲು ವಿಫ‌ಲರಾದರು.

ಸಂಕ್ಷಿಪ್ತ ಸ್ಕೋರ್‌: ಉತ್ತರಪ್ರದೇಶ-281 ಮತ್ತು ಒಂದು ವಿಕೆಟಿಗೆ 29. ಕರ್ನಾಟಕ-321 (ಪಡಿಕ್ಕಲ್‌ 74, ಗೋಪಾಲ್‌ 58, ಮಿಥುನ್‌ ಔಟಾಗದೆ 34, ಸೌರಭ್‌ 116ಕ್ಕೆ 6).

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.