ಅಂಧರ ಮೊದಲ ಮಹಿಳಾ ರಾಷ್ಟ್ರೀಯ ಕ್ರಿಕೆಟಿಗೆ ಕರ್ನಾಟಕ ಸಜ್ಜು


Team Udayavani, Dec 13, 2019, 11:21 PM IST

BINNY

ಬೆಂಗಳೂರು: “ಹೊಸದಿಲ್ಲಿಯಲ್ಲಿ ನಡೆ ಯಲಿರುವ ಅಂಧರ ಮೊದಲ ಮಹಿಳಾ ರಾಷ್ಟ್ರೀಯ ಕ್ರಿಕೆಟ್‌ ಕೂಟಕ್ಕೆ ಕರ್ನಾಟಕ ತಂಡ ಸಂಪೂರ್ಣ ತಯಾರಿ ನಡೆಸಿದೆ’ ಎಂದು ಭಾರತ ಅಂಧರ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷ ಮಹಾಂತೇಶ್‌ ಹೇಳಿದ್ದಾರೆ.

“ಈ ಕೂಟವನ್ನು ಕರ್ನಾಟಕ ಅಂಧರ ಕ್ರಿಕೆಟ್‌ ಸಂಸ್ಥೆ (ಕೆಸಿಎಬಿ) ಆಯೋಜಿಸುತ್ತಿದೆ. ಡಿ. 16ರಿಂದ 19ರ ತನಕ ಪಂದ್ಯಾವಳಿ ನಡೆಯಲಿದೆ. ಡಿಡಿಎ ನ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಫೈನಲ್‌ ನಡೆಯಲಿದೆ. ಕೂಟದಲ್ಲಿ ರಾಜ್ಯ ತಂಡ ಸೇರಿದಂತೆ ಆತಿಥೇಯ ದಿಲ್ಲಿ, ಒಡಿಶಾ, ಜಾರ್ಖಂಡ್‌, ಮಹಾರಾಷ್ಟ್ರ, ಕೇರಳ ಮತ್ತು ಬಂಗಾಲ ತಂಡಗಳು ಪಾಲ್ಗೊಳ್ಳುತ್ತಿವೆ’ ಎಂದು ಮಹಾಂತೇಶ್‌ ಶುಕ್ರವಾರದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷ ರೋಜರ್‌ ಬಿನ್ನಿ, ಭಾರತ ಮಹಿಳಾ ಕ್ರಿಕೆಟ್‌ ತಂಡದ ಮಾಜಿ ಆಟಗಾರ್ತಿ ಮಮತಾ ಉಪಸ್ಥಿತರಿದ್ದರು.

ಶಿಬಿರಗಳ ಮೂಲಕ ಆಯ್ಕೆ
“ರಾಜ್ಯ ತಂಡದ ಆಯ್ಕೆಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ. ಒಟ್ಟಾರೆ 6 ಶಿಬಿರಗಳನ್ನು ನಡೆಸಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 85 ಅಂಧ ಆಟಗಾರ್ತಿಯರು ಭಾಗವ ಹಿಸಿದ್ದರು. ಸಂಭಾವ್ಯ 28 ಆಟಗಾರ್ತಿಯರನ್ನು ಆರಿಸಿದ ಬಳಿಕ 14 ಮಂದಿಯನ್ನು ಅಂತಿಮ ಗೊಳಿಸ ಲಾಯಿತು’ ಎಂದು ಮಹಾಂತೇಶ್‌ ವಿವರಿಸಿದರು.

ಕರ್ನಾಟಕ ತಂಡ
ಸುನಿತಾ ಡಿ. (ನಾಯಕಿ), ಬಿ. ಜಯಲಕ್ಷ್ಮೀ, ಎನ್‌.ಆರ್‌. ಕಾವ್ಯಾ, ದೀಪಿಕಾ, ವಿ. ನೇತ್ರಾವತಿ, ರೇಣುಕಾ ರಜಪೂತ್‌, ಅನಿತಾ, ಜಿ.ಪಿ. ಶಿಲ್ಪಾ, ಭೂಮಿಕಾ ಎಸ್‌. ವಾಲ್ಮೀಕಿ, ರಾಜೇಶ್ವರಿ ಸರ್ದಾರ್‌, ಆಶಾ ದಹಾಲ್‌, ಯು. ವರ್ಷ, ವಿಜಯಲಕ್ಷ್ಮೀ, ಸಿ. ಕನಿತಾ.

ಫೈನಲ್‌ ಪಂದ್ಯ ವೀಕ್ಷಿಸುವೆ: ಬಿನ್ನಿ
“ಟೀವಿಯಲ್ಲಿ ನಾನು ಅಂಧರ ಕ್ರಿಕೆಟ್‌ ಪಂದ್ಯಗಳನ್ನು ನೋಡಿದ್ದೆ. ಪ್ರತ್ಯಕ್ಷವಾಗಿ ನೋಡಿರಲಿಲ್ಲ. ಆದರೆ ದಿಲ್ಲಿಗೆ ತೆರಳಿ ಫೈನಲ್‌ ಪಂದ್ಯವನ್ನು ವೀಕ್ಷಿಸಬೇಕೆಂದು ನಿರ್ಧರಿಸಿದ್ದೇನೆ’ ಎಂದು ಕರ್ನಾಟಕ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷ ರೋಜರ್‌ ಬಿನ್ನಿ ತಿಳಿಸಿದ್ದಾರೆ.

“ಅಂಧರ ಕ್ರಿಕೆಟನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಪಂದ್ಯವನ್ನು ಸ್ಪರ್ಧೆ ಎಂದು ತೆಗೆದುಕೊಳ್ಳಬೇಡಿ. ಖುಷಿಯಿಂದಲೇ ಆಡಿ’ ಎಂದು ರಾಜ್ಯ ತಂಡದ ಆಟಗಾರ್ತಿಯರಿಗೆ ಬಿನ್ನಿ ಶುಭ ಹಾರೈಸಿದರು.

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.