ಪಡಿಕ್ಕಲ್ 99 ಔಟ್: ಹಿಮಾಚಲ ಪ್ರದೇಶ ವಿರುದ್ಧ ಸಂಕಷ್ಟದಲ್ಲಿ ಕರ್ನಾಟಕ
Team Udayavani, Dec 28, 2019, 11:22 AM IST
ಮೈಸೂರು: ಹಿಮಾಚಲ ಪ್ರದೇಶ ವಿರುದ್ಧದ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ಸಂಕಷ್ಟಕ್ಕೆ ಸಿಲುಕಿದೆ. ಈಗಾಗಲೇ 122 ರನ್ ಮುನ್ನಡೆಯಲ್ಲಿರುವ ಕರ್ನಾಟಕ ಡ್ರಾ ಮಾಡುವ ಪ್ರಯತ್ನದಲ್ಲಿದೆ.
ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೂರನೇ ದಿನದ ಅಂತ್ಯಕ್ಕೆ ಕರ್ನಾಟಕ ಮೂರು ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತ್ತು.
ದೇವದತ್ತ್ ಪಡಿಕ್ಕಲ್ 69 ರನ್ ಮತ್ತು ಕರುಣ್ ನಾಯರ್ 62 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಇಂದಿನ ಆಟದಲ್ಲಿ ನಾಯಕ ಕರುಣ್ ನಾಯರ್ 64 ರನ್ ಗಳಿಸಿ ಬೇಗನೇ ವಿಕೆಟ್ ಒಪ್ಪಿಸಿದರು. ದೇವದತ್ತ್ ಪಡಿಕ್ಕಲ್ 99 ರನ್ ಗಳಿಸಿದ್ದ ವೇಳೆ ವೈಭವ್ ಅರೋರಾ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದು ಒಂದು ರನ್ ನಿಂದ ಶತಕ ವಂಚಿತರಾದರು.
83 ಓವರ್ ನಂತರ ಕರ್ನಾಟಕ ತಂಡ ಆರು ವಿಕೆಟ್ ನಷ್ಟಕ್ಕೆ 236 ರನ್ ಗಳಿಸಿ 122 ರನ್ ಮುನ್ನಡೆಯಲ್ಲಿದೆ. ಇಂದು ಅಂತಿಮ ದಿನವಾಗಿದ್ದು ಪಂದ್ಯವನ್ನು ಡ್ರಾ ಮಾಡುವ ಪ್ರಯತ್ನದಲ್ಲಿ ಕರುಣ್ ಬಳಗವಿದೆ.
ಕರ್ನಾಟಕ ಮೊದಲ ಇನ್ನಿಂಗ್ಸ್: 166
ಹಿಮಾಚಲ ಪ್ರದೇಶ ಮೊದಲ ಇನ್ನಿಂಗ್ಸ್: 280
ಕರ್ನಾಟಕ ದ್ವಿತೀಯ ಇನ್ನಿಂಗ್ಸ್: 236/ 6 ( 83 ಓವರ್ ನಷ್ಟಕ್ಕೆ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ