ಸಯ್ಯದ್ ಮುಷ್ತಾಕ್ ಅಲಿ: ಗೋವಾ ವಿರುದ್ಧ ಗೆದ್ದು ಅಗ್ರ ಸ್ಥಾನಿಯಾದ ಕರ್ನಾಟಕ
Team Udayavani, Nov 17, 2019, 4:24 PM IST
ವಿಶಾಖಪಟ್ಟಣ: ಸಯ್ಯದ್ ಮುಷ್ತಾಕ್ ಅಲಿ ಟಿ ಟ್ವೆಂಟಿ ಟೂರ್ನಿಯ ಇಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ಗೋವಾ ತಂಡವನ್ನು 35 ರನ್ ಅಂತರದಿಂದ ಸೋಲಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡಕ್ಕೆ ರಾಹುಲ್ ಮತ್ತು ಪವನ್ ದೇಶಪಾಂಡೆ ನೆರವಾದರು. ರಾಹುಲ್ 34 ರನ್ ಗಳಿಸಿ ಔಟಾದರೆ, ಪವನ್ ದೇಶಪಾಂಡೆ ಕೇವಲ 32 ಎಸೆತಗಳಲ್ಲಿ ಭರ್ಜರಿ ಐದು ಸಿಕ್ಸರ್ ನೆರವಿನಿಂದ 63 ರನ್ ಬಾರಿಸಿದರು. ನಿಗದಿತ 20 ಓವರ್ ನಲ್ಲಿ ಕರ್ನಾಟಕ 9ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು.
ಗುರಿ ಬೆನ್ನತ್ತಿದ ಗೋವಾ ತಂಡ ಸತತ ವಿಕೆಟ್ ಕೈಚೆಲ್ಲಿತು. ಆದಿತ್ಯ ಕೌಶಿಕ್ 48 ರನ್, ಮಲ್ಲಿಕ್ ಸಾಬ್ 27 ಮತ್ತು ಸುಯಾಷ್ ಪ್ರಭು ದೇಸಾಯ್ 28 ರನ್ ಗಳಿಸಿ ಅಲ್ಪ ಕಾಣಿಕೆ ನೀಡಿದರು. ಅಂತಿಮವಾಗಿ ಗೋವಾ 19.3 ಓವರ್ ನಲ್ಲಿ 137 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಶ್ರೇಯಸ್ ಗೋಪಾಲ್ ಮೂರು ವಿಕೆಟ್ ಪಡೆದರು. ಈ ಜಯದೊಂದಿಗೆ ಗುಂಪಿನಲ್ಲಿ ಕರ್ನಾಟಕ ಅಗ್ರಸ್ಥಾನ ಪಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ