ವಿಜಯ್ ಹಜಾರೆ ಟ್ರೋಪಿಯಲ್ಲಿ ಶುಭಾರಂಭ: 236 ರನ್ ಅಂತರದಿಂದ ಗೆದ್ದ ಕರ್ನಾಟಕ ತಂಡ
Team Udayavani, Dec 8, 2021, 4:07 PM IST
ತಿರುವನಂತಪುರಂ: 2021-22ನೇ ಸಾಲಿನ ವಿಜಯ್ ಹಜಾರೆ ಟ್ರೋಫಿ ಕೂಟ ಇಂದು ಆರಂಭವಾಗಿದೆ. ಪುದುಚೇರಿ ವಿರುದ್ಧ ತನ್ನ ಮೊದಲ ಪಂದ್ಯವಾಡಿದ ಕರ್ನಾಟಕ ತಂಡ ಭರ್ಜರಿ ಗೆಲುವಿನೊಂದಿಗೆ ಕೂಟದಲ್ಲಿ ಶುಭಾರಂಭ ಮಾಡಿದೆ.
ಮಂಗಳಾಪುರಂನ ಕೆಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮನೀಷ್ ಪಡೆಯು ಪುದುಚೇರಿ ವಿರುದ್ಧ ಸವಾರಿ ಮಾಡಿತು. ಮೊದಲು ಬ್ಯಾಟಿಂಗ್ ನಡೆಸಿದ ಕರ್ನಾಟಕ ತಂಡ 50 ಓವರ್ ನಲ್ಲಿ ಆರು ವಿಕೆಟ್ ನಷ್ಟಕ್ಕೆ 289 ರನ್ ಗಳಿಸಿದರೆ, ಗುರಿ ಬೆನ್ನತ್ತಿದ್ದ ಪುದುಚೇರಿ ತಂಡ 17.3 ಓವರ್ ನಲ್ಲಿ ಕೇವಲ 53 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಇದರಿಂದ ಕರ್ನಾಟಕ ತಂಡವು 236 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿತು.
ರಾಜ್ಯ ತಂಡದ ಪರ ರವಿಕುಮಾರ್ ಸಮರ್ಥ್ 95 ರನ್ ಗಳಿಸಿದರೆ, ಕೃಷ್ಣಮೂರ್ತಿ ಸಿದ್ದಾರ್ಥ್ 61 ರನ್, ನಾಯಕ ಮನೀಷ್ ಪಾಂಡೆ 64 ರನ್, ಶ್ರೀನಿವಾಸ್ ಸಮರ್ಥ್ ಅವರು 55 ರನ್ ಗಳಿಸಿದರು. ಪುದುಚೇರಿ ಪರವಾಗಿ ಆಡುತ್ತಿರುವ ಕರ್ನಾಟಕದ ಪವನ್ ದೇಶಪಾಂಡೆ 16 ರನ್ ಗಳಿಸಿದ್ದೇ ಹೆಚ್ಚಿನ ಗಳಿಕೆ.
ಇದನ್ನೂ ಓದಿ:ಬಿಬಿಎಲ್ ಗೆ ಕಿಚ್ಚು ಹಚ್ಚಿದ ಯುವ ಆಟಗಾರನ ಅದ್ಭುತ ಕ್ಯಾಚ್: ವಿಡಿಯೋ
ಬಿಗು ದಾಳಿ ಸಂಘಟಿಸಿದ ಜಗದೀಶ್ ಸುಚಿತ್ ಕೇವಲ ಮೂರು ರನ್ ನೀಡಿ ನಾಲ್ಕು ವಿಕೆಟ್ ಕಿತ್ತರೆ, ಕೌಶಿಕ್ 19 ರನ್ ನೀಡಿ ಮೂರು ವಿಕೆಟ್ ಕಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು