ಕಾರ್ತಿಕ್‌ ತ್ಯಾಗಿ ಮ್ಯಾಜಿಕ್‌ ದಾಳಿ; ಭಾರತ ಸೆಮಿಗೆ


Team Udayavani, Jan 28, 2020, 10:47 PM IST

tyagi-magic

ಪೊಚೆಫ್ಸೂಮ್‌ (ದಕ್ಷಿಣ ಆಫ್ರಿಕಾ): ಬ್ಯಾಟಿಂಗ್‌ನಲ್ಲಿ ವೈಫ‌ಲ್ಯ ಅನುಭವಿಸಿದರೂ ಬೌಲಿಂಗ್‌ನಲ್ಲಿ ಅಮೋಘ ನಿರ್ವಹಣೆ ದಾಖಲಿಸಿದ ಹಾಲಿ ಚಾಂಪಿಯನ್‌ ಭಾರತ ತಂಡವು ಬಲಿಷ್ಠ ಆಸ್ಟ್ರೇಲಿಯ ತಂಡವನ್ನು 74 ರನ್ನುಗಳಿಂದ ಸೋಲಿಸಿ ಐಸಿಸಿ ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಸೆಮಿಫೈನಲ್‌ ಹಂತಕ್ಕೇರಿಸಿತು.

ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ತಂಡವು ಆಸ್ಟ್ರೇಲಿಯದ ನಿಖರ ದಾಳಿಗೆ ರನ್‌ ಗಳಿಸಲು ಒದ್ದಾಡಿತು. ಕೊನೆ ಹಂತದಲ್ಲಿ ಅಥರ್ವ ಅಂಕೋಲೆಕರ್‌ ಮತ್ತು ಆರಂಭಿಕ ಯಶಸ್ವಿ ಜೈಸ್ವಾಲ್‌ ಅವರ ಹೋರಾಟದ ಅರ್ಧಶತಕದಿಂದಾಗಿ ಭಾರತ 9 ವಿಕೆಟಿಗೆ 233 ರನ್ನುಗಳ ಸಾಧಾರಣ ಮೊತ್ತ ಪೇರಿಸಿತು.

ಗುರಿ ಸಾಧಾರಣವಾಗಿದ್ದರೂ ಭಾರತ ಉತ್ಕೃಷ್ಟ ಮಟ್ಟದ ಬೌಲಿಂಗ್‌ ದಾಳಿ ಸಂಘಟಿಸಿ ಆಸ್ಟ್ರೇಲಿಯವನ್ನು ಕಟ್ಟಿಹಾಕಲು ಯಶಸ್ವಿಯಾಯಿತು. 4 ರನ್‌ ತಲುಪುವಷ್ಟರಲ್ಲಿ 3 ವಿಕೆಟ್‌ ಕಿತ್ತ ಭಾರತ ಎದುರಾಳಿಗೆ ಪ್ರಬಲ ಹೊಡೆತ ನೀಡಿತು. ಆಬಳಿಕ ಸ್ಯಾಮ್‌ ಫ‌ನ್ನಿಂಗ್‌ ಮತ್ತು ಲಿಯಮ್‌ ಸ್ಕಾಟ್‌ ಭರ್ಜರಿಯಾಗಿ ಆಡಿ ಭಯ ಹುಟ್ಟಿಸಿದರು. ಆದರೆ ಈ ಜೋಡಿ ಮುರಿಯುತ್ತಲೇ ಮತ್ತೆ ಕುಸಿದ ಆಸ್ಟ್ರೇಲಿಯ 43.3 ಓವರ್‌ಗಳಲ್ಲಿ 159 ರನ್ನಿಗೆ ಆಲೌಟಾಗಿ ಶರಣಾಯಿತು.

ನಾಟಕೀಯ ಕುಸಿತ
ಗೆಲ್ಲಲು 234 ರನ್‌ ಗಳಿಸುವ ಗುರಿ ಪಡೆದ ಆಸ್ಟ್ರೇಲಿಯ ಆರಂಭದಲ್ಲಿಯೇ ನಾಟಕೀಯ ರೀತಿಯಲ್ಲಿ ಕುಸಿತ ಕಂಡಿತು. ಇನ್ನೂ ರನ್‌ ಖಾತೆ ತೆರೆಯುವ ಮೊದಲೇ ಮೆಕ್‌ಗುರ್ಕ್‌ ರನೌಟಾ ದರು. ಆಬಳಿಕ ತ್ಯಾಗಿ ಮ್ಯಾಜಿಕ್‌ ದಾಳಿಗೆ 3 ವಿಕೆಟ್‌ ಬೇಗನೇ ಉರುಳಿತು. 17 ರನ್‌ ಗಳಿಸುವಷ್ಟರಲ್ಲಿ ತಂಡ 4 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು.

ಕುಸಿದ ತಂಡವನ್ನು ಮೇಲಕ್ಕೆತ್ತುವ ಪ್ರಯತ್ನವನ್ನು ಆರಂಭಿಕ ಫ‌ನ್ನಿಂಗ್‌ ಮತ್ತು ಸ್ಕಾಟ್‌ ಮಾಡಿದರು. ಅವರಿಬ್ಬರು ಆರನೇ ವಿಕೆಟಿಗೆ 81 ರನ್‌ ಪೇರಿಸಿದಾಗ ಭಾರತ ದಿಗಿಲುಗೊಂಡಿತ್ತು. ಆದರೆ ಈ ಜೋಡಿಯನ್ನು ಬಿಷ್ಣೋಯಿ ಮುರಿಯುತ್ತಲೇ ಭಾರತದ ಪಾಳಯದಲ್ಲಿ ನಗು ಬಂತು. 21 ಎಸೆತಗಳ ಅಂತರದಲ್ಲಿ ಕೊನೆಯ 5 ವಿಕೆಟ್‌ ಉರುಳಿದ್ದವು. ಆಸ್ಟ್ರೇಲಿಯದ ನಾಟಕೀಯ ಕುಸಿತಕ್ಕೆ ಕಾರಣರಾದ ಕಾರ್ತಿಕ್‌ ತ್ಯಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಯಶಸ್ವಿ ಅರ್ಧಶತಕ
ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಮಾತ್ರ ಆಸೀಸ್‌ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ಅವರ ಅರ್ಧಶತಕದಿಂದ ತಂಡ ಸಾಧಾರಣ ಮೊತ್ತ ಪೇರಿಸುವಂತಾಯಿತು. 82 ಎಸೆತ ಎದುರಿಸಿದ ಅವರು 62 ರನ್‌ ಹೊಡೆದರು. ಅಗ್ರ ಕ್ರಮಾಂಕದ ಉಳಿದ ಆಟಗಾರರು ಉತ್ತಮವಾಗಿ ಆಡಲು ವಿಫ‌ಲರಾದರು.

ಕೊನೆ ಹಂತದಲ್ಲಿ ಅಥರ್ವ ಅಮೋಲೆಕರ್‌ ಮಿಂಚಿನ ಆಟ ಆಡಿದ್ದರಿಂದ ತಂಡದ ಮೊತ್ತ 200ರ ಗಡಿ ದಾಟಿತು. ಅಥರ್ವ 54 ಎಸೆತಗಳಲ್ಲಿ 55 ಮತ್ತು ಬಿಷ್ಣೋಯಿ 35 ರನ್‌ ಹೊಡೆದರು.

ಸಂಕ್ಷಿಪ್ತ ಸ್ಕೋರು
ಭಾರತ 9 ವಿಕೆಟಿಗೆ 233 (ಯಶಸ್ವಿ ಜೈಸ್ವಾಲ್‌ 62, ಸಿದ್ದೇಶ್‌ ವೀರ್‌ 25, ಅಥರ್ವ ಅಂಕೋಲೆಕರ್‌ 55, ರವಿ ಬಿಷ್ಣೋಯಿ 30, ಕೋರೆ ಕೆಲ್ಲಿ 45ಕ್ಕೆ 2, ಟಾಡ್‌ ಮರ್ಫಿ 40ಕ್ಕೆ 2); ಆಸ್ಟ್ರೇಲಿಯ 43.3 ಓವರ್‌ಗಳಲ್ಲಿ 159ಕ್ಕೆ ಆಲೌಟ್‌ (ಸ್ಯಾಮ್‌ ಫ‌ನ್ನಿಂಗ್‌ 75, ಲಿಯಮ್‌ ಸ್ಕಾಟ್‌ 35, ಕಾರ್ತಿಕ್‌ ತ್ಯಾಗಿ 24ಕ್ಕೆ 4, ಆಕಾಶ್‌ ಸಿಂಗ್‌ 30ಕ್ಕೆ 3).

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.