“ಎ’ ತಂಡಗಳ ಅನಧಿಕೃತ ಟೆಸ್ಟ್‌ ಭಾರತ ಜಯಭೇರಿ


Team Udayavani, Aug 24, 2017, 9:10 AM IST

24-SPORTS-3.jpg

ಪೊಚೆಫ್ಸ್ಟ್ರೋಮ್‌: ನಾಯಕ ಕರುಣ್‌ ನಾಯರ್‌ ಅವರ ಅಮೋಘ ಆಟದಿಂದಾಗಿ ಭಾರತ “ಎ’ ತಂಡವು ಎರಡನೇ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ “ಎ’ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದೆ. 

ಗೆಲ್ಲಲು 224 ರನ್‌ ಗಳಿಸುವ ಸವಾಲು ಪಡೆದ ಭಾರತ “ಎ’ ತಂಡವು ನಾಯರ್‌ ಸಹಿತ ಆರಂಭಿಕ ರವಿಕುಮಾರ್‌ ಸಮರ್ಥ್ ಮತ್ತು ಅಂಕಿತ್‌ ಭಾವೆ° ಅವರ ತಾಳ್ಮೆಯ ಆಟದಿಂದಾಗಿ 62.3 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ಕಳೆದುಕೊಂಡು ಗೆಲುವು ದಾಖಲಿಸಿತು. ಇದರಿಂದಾಗಿ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್‌ ಸರಣಿ 1-1 ಅಂತರದಿಂದ ಸಮಬಲದಲ್ಲಿ ಅಂತ್ಯಗೊಂಡಿತು. 

ನಾಯರ್‌ ಅವರ ಬಿರುಸಿನ ಆಟದಿಂದಾಗಿ ಭಾರತ “ಎ’ ಜಯ ಕಾಣುವಂತಾಯಿತು. ಸಮರ್ಥ್ ಜತೆ ಮೂರನೇ ವಿಕೆಟಿಗೆ ಅಮೂಲ್ಯ 74 ರನ್‌ ಪೇರಿಸಿದ ನಾಯರ್‌ ಆ ಬಳಿಕ ಅಂಕಿತ್‌ ಜತೆ ನಾಲ್ಕನೇ ವಿಕೆಟಿಗೆ 93 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ತಂಡದ ಗೆಲುವು ಖಚಿತಪಡಿಸಿದರು. ಗೆಲ್ಲಲು ಕೇವಲ 2 ರನ್‌ ಗಳಿರುವಾಗ 90 ರನ್‌ ಗಳಿಸಿದ್ದ ನಾಯರ್‌ ಔಟಾದರು. 144 ಎಸೆತ ಎದುರಿಸಿದ್ದ ಅವರು 13 ಬೌಂಡರಿ ಬಾರಿಸಿದ್ದರು. ಸಮರ್ಥ್ 55 ಮತ್ತು ಭಾವೆ° 32 ರನ್‌ ಹೊಡೆದರು. 

ಈ ಮೊದಲು ಭಾರತ “ಎ’ ತಂಡದ ಬೌಲರ್‌ಗಳ ಬಿಗು ದಾಳಿಯಿಂದಾಗಿ ದಕ್ಷಿಣ ಆಫ್ರಿಕಾ “ಎ’ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 177 ರನ್ನಿಗೆ ಆಲೌಟಾಯಿತು. 4 ವಿಕೆಟಿಗೆ 138 ರನ್ನಿನಿಂದ ದಿನದಾಟ ಆರಂಭಿಸಿದ್ದ ದಕ್ಷಿಣ ಆಫ್ರಿಕಾ “ಎ’ ತಂಡ ಮುಂದಿನ 39 ರನ್‌ ಗಳಿಸುವಷ್ಟರಲ್ಲಿ 5 ವಿಕೆಟ್‌ ಕಳೆದುಕೊಂಡು ಒದ್ದಾಡಿತು. ಇದರಿಂದ ಭಾರತಕ್ಕೆ ಸುಲಭ ಗುರಿ ಸಿಕ್ಕಿತು. 

ಎಡಗೈ ವೇಗಿ ಅಂಕಿತ್‌ ರಜಪೂತ್‌ 15 ರನ್ನಿಗೆ 3 ಮತ್ತು ಎಡಗೈ ಸ್ಪಿನ್ನರ್‌ ಶಾಬಾಜ್‌ ನದೀಮ್‌ 47 ರನ್ನಿಗೆ 3 ವಿಕೆಟ್‌ ಪಡೆದರು. ಎರಡು ಪಂದ್ಯಗಳ ಈ ಸರಣಿಯಲ್ಲಿ ಒಟ್ಟಾರೆ 11 ವಿಕೆಟ್‌ ಕಿತ್ತ ನದೀಮ್‌ ಭಾರತದ ಯಶಸ್ವಿ ಬೌಲರ್‌ ಎನಿಸಿಕೊಂಡರು. 

ಆಶ್ಚರ್ಯವೆಂಬಂತೆ 2013ರ ಪ್ರವಾಸದ ವೇಳೆಯೂ ಭಾರತ “ಎ’ ತಂಡ “ಎ’ ತಂಡಗಳ ತ್ರಿಕೋನ ಸರಣಿ ಜಯಿಸಿದ್ದರೆ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್‌ ಸರಣಿಯನ್ನು 1-1ರಿಂದ ಸಮಬಲಗೊಳಿಸಿತ್ತು.

ಸಂಕ್ಷಿಪ್ತ ಸ್ಕೋರು: ದಕ್ಷಿಣ ಆಫ್ರಿಕಾ “ಎ’ 322 ಮತ್ತು 177 (ಸ್ಟೀಫ‌ನ್‌ ಕುಕ್‌ 70, ನದೀಮ್‌ 47ಕ್ಕೆ 3, ರಜಪೂತ್‌ 15ಕ್ಕೆ 3; ಭಾರತ “ಎ’ 276 ಮತ್ತು 4 ವಿಕೆಟಿಗೆ 226 (ಕರುಣ್‌ ನಾಯರ್‌ 90, ಸಮರ್ಥ್ 45, ಅಂಕಿತ್‌ ಭಾವೆ° 32 ಔಟಾಗದೆ).

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.