ಖೇಲೋ ಇಂಡಿಯಾ ಪ್ರಧಾನಿ ಮೋದಿ ಅವರ ಕನಸು : ಅನುರಾಗ್ ಠಾಕೂರ್
Team Udayavani, May 3, 2022, 6:53 PM IST
ಬೆಂಗಳೂರು : ಖೇಲೋ ಇಂಡಿಯಾ ಗೇಮ್ ಪ್ರಧಾನಿ ಮೋದಿ ಅವರ ಕನಸು ಬೆಂಗಳೂರಿನಲ್ಲಿ ಆಯೋಜನೆ ಆಗಿರೋ ಖೇಲೋ ಇಂಡಿಯಾ ಸಂಪೂರ್ಣ ಯಶಸ್ವಿಯಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಕಳೆದ ಹತ್ತು ದಿನಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಖೇಲೋ ಇಂಡಿಯಾ 2021 ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು ಖೇಲೋ ಇಂಡಿಯಾ ಆಲೋಚನೆ 2016ರಿಂದ ಆರಂಭವಾಯ್ತು. ಇದು ಪ್ರಧಾನಿ ಮೋದಿ ಅವರ ಕನಸಾಗಿತ್ತು ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿರುವುದು ಸಂತಸದ ವಿಚಾರ ಅಲ್ಲದೆ ಬೆಂಗಳೂರಿನಲ್ಲಿ ಆಯೋಜನೆಗೊಂಡ ಕ್ರೀಡೆ ಸಂಪೂರ್ಣ ಯಶಸ್ಸುಗೊಂಡಿದೆ ಮೂರು ಸಾವಿರ ಜನ ಈ ಕ್ರೀಡೆಯಲ್ಲಿ ಭಾಗವಹಿಸಿದ್ದರು. ಶಿವ ಶ್ರೀಧರ್ (ಈಜು) ,ಅನ್ ಮೇರಿಯಾ (ವೈಟ್ ಲಿಫ್ಟಿಂಗ್) ಈ ಇಬ್ಬರು ಕ್ರೀಡಾಪಟುಗಳು ನ್ಯಾಷನಲ್ ರೆಕಾರ್ಡ್ ಮಾಡಿರುವುದು ಸಂತಸದ ವಿಷಯ ಎಂದರು.
ಕ್ರೀಡೆಯಲ್ಲಿ ಯೋಗ ಕೂಡ ಅಳವಡಿಸಿದ್ದು, ಯೋಗದ ಶಕ್ತಿಯನ್ನ ಈಗ ನೋಡಿದ್ದೇವೆ. ಮೋದಿ ಅವರು ಕೂಡ ಯೋಗವನ್ನ ಉತ್ತೇಜಿಸಿದ್ದಾರೆ. ವಿಶ್ವ ಸಂಸ್ಥೆ ಕೂಡ ಯೋಗ ದಿನಾಚರಣೆ ಮಾಡಲು ಒಪ್ಪಿಗೆ ನೀಡಿದ್ದು, ಅದರ ಶಕ್ತಿ ಏನೆಂಬುದು ನೋಡಿದೆವು ಎಂದ ಅವರು ಯೋಗ ಮಾಡಿದ ಯುವತಿಗೆ ಧನ್ಯವಾದ ಅರ್ಪಿಸಿದ ಠಾಕೂರ್ 20 ಗೋಲ್ಡ್ ಮೆಡಲ್ ಪಡೆದ ಜೈನ್ ವಿವಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ, ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ಸಚಿವರಾದ ಅರಗ ಜ್ಞಾನೇಂದ್ರ, ಅಶ್ವಥ್ ನಾರಾಯಣ್, ನಾರಾಯಣ್ ಗೌಡ, ಸಂಸದ ಪಿ.ಸಿ ಮೋಹನ್, ತೇಜಸ್ವಿ ಸೂರ್ಯ, ನಟ ಸುದೀಪ್ ಪಾಲ್ಗೊಂಡಿದ್ದರು.
ಇದನ್ನೂ ಓದಿ :14 ವರ್ಷಗಳ ಹಿಂದಿನ ಪ್ರಕರಣದಲ್ಲಿ ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ