ಆಸ್ಟ್ರೇಲಿಯಾ ಓಪನ್‌: ಶ್ರೀಕಾಂತ್‌ ಫೈನಲ್‌ಗೆ


Team Udayavani, Jun 25, 2017, 3:45 AM IST

AUS-OPAN.jpg

ಸಿಡ್ನಿ: ಭರ್ಜರಿ ಹೋರಾಟ ಪ್ರದರ್ಶಿಸಿದ ಭಾರತದ ಭರವಸೆಯ ಬ್ಯಾಡ್ಮಿಂಟನ್‌ ಆಟಗಾರ ಕೆ.ಶ್ರೀಕಾಂತ್‌ ಆಸ್ಟ್ರೇಲಿಯಾ ಓಪನ್‌ ಸೂಪರ್‌ ಸೀರೀಸ್‌ ಬ್ಯಾಡ್ಮಿಂಟನ್‌ ಕೂಟದಲ್ಲಿ ಫೈನಲ್‌ಗೆ ಲಗ್ಗೆ ಹಾಕಿದ್ದಾರೆ.

ಶನಿವಾರ ನಡೆದ ಪುರುಷರ ಸಿಂಗಲ್ಸ್‌ ಸೆಮಿಫೈನಲ್‌ ಪಂದ್ಯದಲ್ಲಿ ಶ್ರೀಕಾಂತ್‌ 21-10, 21-14 ರಿಂದ ನೇರ ಸೆಟ್‌ನಲ್ಲಿಯೇ ಚೀನಾದ ಷಿ ಯುಕಿ ವಿರುದ್ಧ ಜಯ ಸಾಧಿಸಿದರು. ಇಬ್ಬರ ನಡುವಿನ ಹೋರಾಟ 40 ನಿಮಿಷಗಳ ಕಾಲ ನಡೆಯಿತು.

ಮೊದಲನೇ ಸೆಟ್‌ನ ಆರಂಭದಲ್ಲಿ 11ನೇ ಶ್ರೇಯಾಂಕಿತ ಶ್ರೀಕಾಂತ್‌ ಮತ್ತು 4ನೇ ಶ್ರೇಯಾಂಕಿತ ಚೀನಾ ಆಟಗಾರನ ನಡುವೆ ಭಾರೀ ಹೋರಾಟವಿತ್ತು. ಒಂದು ಹಂತದಲ್ಲಿ ಪಂದ್ಯ 5-5 ರಿಂದ ಸಮಬಲದಲ್ಲಿತ್ತು. ಆದರೆ ಈ ಹಂತದಲ್ಲಿ ಆಕ್ರಮಣಕಾರಿ ಆಟಕ್ಕೆ ಮುಂದಾದ ಶ್ರೀಕಾಂತ್‌ ಒಂದರ ನಂತರ ಒಂದರಂತೆ ನಿರಂತರವಾಗಿ ಅಂಕವನ್ನು ಕಲೆಹಾಕುತ್ತಾ ಸಾಗಿದರು. ಈ ಹಂತದಲ್ಲಿ ಭಾರತೀಯ ಆಟಗಾರನ ಹೊಡೆತಕ್ಕೆ ಚೀನಾ ಆಟಗಾರ ತಿರುಗೇಟು ನೀಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಶ್ರೀಕಾಂತ್‌ 1ನೇ ಗೇಮ್‌ ಅನ್ನು 21-10 ರಿಂದ ವಶಪಡಿಸಿಕೊಂಡರು. ಈ ಗೇಮ್‌ ಕೇವಲ 15 ನಿಮಿಷದಲ್ಲಿಯೇ ಅಂತ್ಯವಾಯಿತು.

ಎರಡನೇ ಗೇಮ್‌ನ ಆರಂಭದಲ್ಲಿ ಇಬ್ಬರ ನಡುವೆ ಜಿದ್ದಾಜಿದ್ದಿನ ಹೋರಾಟವಿತ್ತು. ಒಂದು ಹಂತದಲ್ಲಿ 6-6 ಅಂಕದಿಂದ ಸಮಬಲದಲ್ಲಿತ್ತು. ನಂತರ ನಿಧಾನಕ್ಕೆ ಶ್ರೀಕಾಂತ್‌ ಅಂಕವನ್ನು ಹೆಚ್ಚಿಸಿಕೊಳ್ಳುತ್ತಾ 11-8 ರಿಂದ ಮುನ್ನಡೆ ಪಡೆದರು. ಅಂತಿಮವಾಗಿ ಭಾರತೀಯ ಆಟಗಾರ ಶ್ರೀಕಾಂತ್‌ 21-14 ರಿಂದ ವಶಪಡಿಸಿಕೊಂಡು ಫೈನಲ್‌ಗೆ ಲಗ್ಗೆ ಹಾಕಿದರು.

ಸತತ 3ನೇ ಸೂಪರ್‌ ಸೀರೀಸ್‌ ಫೈನಲ್‌:
ಶ್ರೀಕಾಂತ್‌ ಆಸ್ಟ್ರೇಲಿಯಾ ಓಪನ್‌ನಲ್ಲಿ ಚೀನಾದ ಶಿ ಯುಕಿಯನ್ನು ಸೋಲಿಸಿ ಫೈನಲ್‌ ಪ್ರವೇಶಿಸುವ ಮೂಲಕ ಸತತ ಮೂರು ಸೂಪರ್‌ ಸೀರೀಸ್‌ ಕೂಟದಲ್ಲಿ ಫೈನಲ್‌ ತಲುಪಿದ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಏಪ್ರಿಲ್‌ನಲ್ಲಿ ನಡೆದ ಸಿಂಗಾಪುರ್‌ ಓಪನ್‌ನಲ್ಲಿ ಫೈನಲ್‌ ತಲುಪಿ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತರಾಗಿದ್ದರು. ಕಳೆದವಾರ ನಡೆದ ಇಂಡೋನೇಷ್ಯಾ ಓಪನ್‌ನಲ್ಲಿ ಫೈನಲ್‌ ತಲುಪಿ ಪ್ರಶಸ್ತಿ ಗೆದ್ದಿದ್ದರು. ಈ ಸಾಧನೆ ಮಾಡಿದ ಭಾರತೀಯ ಪುರುಷರಲ್ಲಿ ಮೊದಲನೇ ವ್ಯಕ್ತಿಯಾಗಿದ್ದಾರೆ. ಉಳಿದಂತೆ ವಿಶ್ವಮಟ್ಟದಲ್ಲಿ ಇಂಡೋನೇಷ್ಯಾದ ಸೋನಿ ಡ್ವಿ ಕುನ್‌ಕೊರೊ, ಮಲೇಷ್ಯಾದ ಲೀ ಚಾಂಗ್‌ ವೈ, ಚೀನಾದ ಲಿನ್‌ ಡಾನ್‌ ಮತ್ತು ಚೆನ್‌ ಲಾಂಗ್‌ ಈ ಸಾಧನೆ ಮಾಡಿದ್ದಾರೆ.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.