ಭಾರತ “ಎ’ ತಂಡದಲ್ಲಿ ಕೃಣಾಲ್‌, ಥಂಪಿ


Team Udayavani, Jun 30, 2017, 3:35 AM IST

SPORTS-9.jpg

ಹೊಸದಿಲ್ಲಿ: ಪ್ರಸಕ್ತ ಋತುವಿನ ಐಪಿಎಲ್‌ನಲ್ಲಿ ಮಿಂಚಿದ ಆಲ್‌ರೌಂಡರ್‌ ಕೃಣಾಲ್‌ ಪಾಂಡ್ಯ ಮತ್ತು ಮಧ್ಯಮ ವೇಗಿ ಬಾಸಿಲ್‌ ಥಂಪಿ ಮೊದಲ ಬಾರಿಗೆ ಭಾರತ “ಎ’ ತಂಡದಲ್ಲಿ ಆಡುವ ಅವಕಾಶ ಸಂಪಾದಿಸಿದ್ದಾರೆ. ಮುಂದಿನ ತಿಂಗಳ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಆರಿಸಲಾದ ತಂಡದಲ್ಲಿ ಇವರಿಬ್ಬರೂ ಸ್ಥಾನ ಸಂಪಾದಿಸಿದ್ದಾರೆ.

ಈ ಪ್ರವಾಸದ ವೇಳೆ ಆಸ್ಟ್ರೇಲಿಯವನ್ನೊಳಗೊಂಡ ಏಕದಿನ ತ್ರಿಕೋನ ಸರಣಿ ಹಾಗೂ ಚತುರ್ದಿನ ಪಂದ್ಯಗಳ ಸರಣಿ ನಡೆಯಲಿದೆ. ಇವೆರಡಕ್ಕೂ ಪ್ರತ್ಯೇಕ ತಂಡಗಳನ್ನು ಆರಿಸಲಾಗಿದ್ದು, ಎರಡಕ್ಕೂ ಕರ್ನಾಟಕದ ಕ್ರಿಕೆಟಿಗರೇ ನಾಯಕರಾಗಿರುವುದು ವಿಶೇಷ. ಇವರೆಂದರೆ ಮನೀಷ್‌ ಪಾಂಡೆ ಮತ್ತು ಕರುಣ್‌ ನಾಯರ್‌. ಸ್ನಾಯು ಸೆಳೆತದಿಂದ ವಿಶ್ರಾಂತಿಯಲ್ಲಿದ್ದ ಪಾಂಡೆ ಈಗ ಚೇತರಿಸಿಕೊಂಡಿದ್ದಾರೆ.

ಈಗಾಗಲೇ ಟೀಮ್‌ ಇಂಡಿಯಾದಲ್ಲಿ ಸ್ಥಾನ ಭದ್ರಪಡಿಸಿಕೊಂಡಿರುವ ಹಾರ್ದಿಕ್‌ ಪಾಂಡ್ಯ ಅವರ ಸಹೋದರನಾಗಿರುವ 26ರ ಹರೆಯದ ಕೃಣಾಲ್‌ ಪಾಂಡ್ಯ ರಣಜಿಯಲ್ಲಿ ಬರೋಡ ತಂಡವನ್ನು ಪ್ರತಿನಿಧಿಸುತ್ತಾರೆ. ಎಡಗೈ ಬ್ಯಾಟಿಂಗ್‌ ಹಾಗೂ ಎಡಗೈ ಆಫ್ ಸ್ಪಿನ್‌ ಬೌಲಿಂಗ್‌ ಮೂಲಕ ಗಮನ ಸೆಳೆದಿದ್ದಾರೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಸದಸ್ಯ. 2017ರ ಐಪಿಎಲ್‌ ಋತುವಿನಲ್ಲಿ 243 ರನ್‌ ಜತೆ 10 ವಿಕೆಟ್‌ ಹಾರಿಸಿದ ಸಾಧನೆ ಪಾಂಡ್ಯ ಅವರದು.

ಕೇರಳದ ಕ್ರಿಕೆಟ್‌ ಪ್ರತಿಭೆ
ಕೇರಳದ ಎರ್ನಾಕುಳಂನವರಾದ ಬಾಸಿಲ್‌ ಥಂಪಿ ಮೊದಲ ಸಲ ಐಪಿಎಲ್‌ ಋತುವಿನಲ್ಲೇ 11 ವಿಕೆಟ್‌ ಹಾರಿಸಿ, ಗುಜರಾತ್‌ ಲಯನ್ಸ್‌ ಬೌಲಿಂಗ್‌ ಯಾದಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದರು. ಪರಿಣಾಮಕಾರಿ ಯಾರ್ಕರ್‌ಗಳ ಮೂಲಕ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ತಬ್ಬಿಬ್ಬುಗೊಳಿಸಿದ್ದರು.

ಬ್ಯಾಟ್ಸ್‌ಮನ್‌ಗಳಾದ ಹನುಮ ವಿಹಾರಿ, ಸುದೀಪ್‌ ಚಟರ್ಜಿ; ಸೀಮರ್‌ಗಳಾದ ಅಂಕಿತ್‌ ರಜಪೂತ್‌, ಮೊಹಮ್ಮದ್‌ ಸಿರಾಜ್‌ ಕೂಡ ಇದೇ ಮೊದಲ ಸಲ ಭಾರತ “ಎ’ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಆಂಧ್ರದ ವಿಹಾರಿ 2016-17ರ ರಣಜಿ ಸಾಲಿನಲ್ಲಿ ಒಂದು ದ್ವಿಶತಕ ಸಹಿತ 688 ರನ್‌ ಬಾರಿಸಿದರೆ, ಸಿರಾಜ್‌ ಹೈದರಾಬಾದ್‌ ಪರ ಸರ್ವಾಧಿಕ 41 ವಿಕೆಟ್‌ ಹಾರಿಸಿದ್ದರು.

ಜು. 26ರಂದು ತ್ರಿಕೋನ ಸರಣಿ ಮೊದಲ್ಗೊಳ್ಳಲಿದೆ. ಆಗಸ್ಟ್‌ನಲ್ಲಿ 2 ಚತುರ್ದಿನ ಪಂದ್ಯಗಳು ನಡೆಯಲಿವೆ. ಸ್ಥಳ: ಬೆನೋನಿ ಮತ್ತು ಪೊಚೆಫ್ಸೂಮ್‌.

ಭಾರತ ತಂಡಗಳು
ತ್ರಿಕೋನ ಸರಣಿ: ಮನೀಷ್‌ ಪಾಂಡೆ (ನಾಯಕ), ಮನ್‌ದೀಪ್‌ ಸಿಂಗ್‌, ಶ್ರೇಯಸ್‌ ಅಯ್ಯರ್‌, ಸಂಜು ಸ್ಯಾಮ್ಸನ್‌, ದೀಪಕ್‌ ಹೂಡಾ, ಕರುಣ್‌ ನಾಯರ್‌, ಕೃಣಾಲ್‌ ಪಾಂಡ್ಯ, ರಿಷಬ್‌ ಪಂತ್‌ (ವಿ.ಕೀ.), ವಿಜಯ್‌ ಶಂಕರ್‌, ಅಕ್ಷರ್‌ ಪಟೇಲ್‌, ಯಜ್ವೇಂದ್ರ ಚಾಹಲ್‌, ಜಯಂತ್‌ ಯಾದವ್‌, ಬಾಸಿಲ್‌ ಥಂಪಿ, ಮೊಹಮ್ಮದ್‌ ಸಿರಾಜ್‌, ಶಾದೂìಲ್‌ ಠಾಕೂರ್‌, ಸಿದ್ಧಾರ್ಥ ಕೌಲ್‌.

ಚತುರ್ದಿನ ಪಂದ್ಯ: ಕರುಣ್‌ ನಾಯರ್‌ (ನಾಯಕ), ಪ್ರಿಯಾಂಕ್‌ ಪಾಂಚಾಲ್‌, ಅಭಿನವ್‌ ಮುಕುಂದ್‌, ಶ್ರೇಯಸ್‌ ಅಯ್ಯರ್‌, ಅಂಕಿತ್‌ ಬವೆ°, ಸುದೀಪ್‌ ಚಟರ್ಜಿ, ಇಶಾನ್‌ ಕಿಶನ್‌ (ವಿ.ಕೀ.), ಹನುಮ ವಿಹಾರಿ, ಜಯಂತ್‌ ಯಾದವ್‌, ಶಾಬಾಜ್‌ ನದೀಂ, ನವದೀಪ್‌ ಸೈನಿ, ಮೊಹಮ್ಮದ್‌ ಸಿರಾಜ್‌, ಶಾದೂìಲ್‌ ಠಾಕೂರ್‌, ಅನಿಕೇತ್‌ ಚೌಧರಿ, ಅಂಕಿತ್‌ ರಜಪೂತ್‌.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.