ಮುಂದಿನ ಸುತ್ತಿನ ರೇಸ್‌ನಲ್ಲಿ ಪಂಜಾಬ್‌-ಹೈದರಾಬಾದ್‌


Team Udayavani, Oct 23, 2020, 10:13 PM IST

ಮುಂದಿನ ಸುತ್ತಿನ ರೇಸ್‌ನಲ್ಲಿ ಪಂಜಾಬ್‌-ಹೈದರಾಬಾದ್‌

ದುಬಾೖ: ಐಪಿಎಲ್‌ ಈಗ ರೋಚಕ ಘಟ್ಟ ತಲುಪಿದೆ. ಪ್ಲೇ ಆಫ್ ಪ್ರವೇಶಕ್ಕಾಗಿ ಸಾಮರ್ಥ್ಯ ಮೀರಿ ಹೋರಾಡುವ ಸ್ಥಿತಿ ಕನಿಷ್ಠ 5 ತಂಡಗಳ ಮುಂದೆ ಉದ್ಭವಿಸಿದೆ. ಕೊನೆಯ ಒಂದು ಸ್ಥಾನಕ್ಕಾಗಿ ಈ ತಂಡಗಳ ನಡುವೆ ರೋಚಕ ಹಣಾಹಣಿ ನಡೆಯಲಿರುವ ಸೂಚನೆಯೊಂದು ದಟ್ಟವಾಗಿದೆ. ಅದರಲ್ಲೂ ಪಂಜಾಬ್‌-ಹೈದರಾಬಾದ್‌ ತಂಡಗಳ ಮುಂದಿನ ಹಾದಿ ಬಹಳ ಕಠಿನ. 10 ಪಂದ್ಯಗಳನ್ನಾಡಿರುವ ಇತ್ತಂಡಗಳು ತಲಾ 5 ಜಯದೊಂದಿಗೆ 10 ಅಂಕ ಹೊಂದಿವೆ. ಶನಿವಾರ ಇತ್ತಂಡಗಳ ನಡುವೆ ಮಹತ್ವದ ಸ್ಪರ್ಧೆ ನಡೆಯಲಿದ್ದು, ಇಲ್ಲಿ ಗೆಲ್ಲಲೇಬೇಕಾದ ಒತ್ತಡ ಎರಡೂ ತಂಡಗಳ ಮೇಲಿದೆ.

ಚೈತನ್ಯ ತುಂಬಿದ ಗೇಲ್‌
ಸತತ ಸೋಲಿನಿಂದ ಕಂಗೆಟ್ಟಿದ್ದ ಪಂಜಾಬ್‌ಗ ಗೇಲ್‌ ಆಗಮನ ಅದೃಷ್ಟದ ಬಾಗಿಲೊಂದನ್ನು ತೆರೆದಿದೆ ಎನ್ನಲಡ್ಡಿಯಿಲ್ಲ. ಹಾಗೆಯೇ ಬ್ಯಾಟಿಂಗ್‌ ಬರ ಅನುಭವಿಸುತ್ತಿದ್ದ ಆಸೀಸ್‌ ಆಲ್‌ರೌಂಡರ್‌ ಮ್ಯಾಕ್ಸ್‌ ವೆಲ್‌ ಕಳೆದ ಪಂದ್ಯದಲ್ಲಿ ತುಸು ಚೇತರಿಕೆ ಕಂಡಿರುವುದು ತಂಡದ ಪಾಲಿನ ಶುಭ ಸಮಾಚಾರ. ಪೂರಣ್‌ ಕೂಡ ಬ್ಯಾಟಿಂಗ್‌ ಪರಾಕ್ರಮ ತೋರ್ಪಡಿಸುತ್ತಿದ್ದಾರೆ. ರಾಹುಲ್‌ ಪಡೆಯೀಗ ಹ್ಯಾಟ್ರಿಕ್‌ ಗೆಲುವಿನೊಂದಿಗೆ ಮುನ್ನುಗುತ್ತಿದ್ದು, ಹೈದರಾಬಾದನ್ನು ಮಣಿಸಿದರೆ ಪ್ಲೇ ಆಫ್ ಕನಸು ಜೀವಂತವಾಗಿರಲಿದೆ.

ಹೈದರಾಬಾದ್‌ ಸಮಸ್ಯೆ
ಕಳೆದ ಪಂದ್ಯದಲ್ಲಿ ರಾಜಸ್ಥಾನವನ್ನು 8 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸಿದರೂ ಹೈದರಾಬಾದ್‌ ಸಮಸ್ಯೆಯೇನೂ ಪರಿಹಾರಗೊಂಡಿಲ್ಲ. ಬೇರ್‌ಸ್ಟೋ-ವಾರ್ನರ್‌ ಅವರ ಓಪನಿಂಗ್‌ ವೈಫ‌ಲ್ಯ ಮಧ್ಯಮ ಕ್ರಮಾಂಕದ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಆದರೆ ವಿಂಡೀಸ್‌ ಆಲ್‌ರೌಂಡರ್‌ ಜಾಸನ್‌ ಹೋಲ್ಡರ್‌ ಆಗಮನದಿಂದ ತಂಡ ಹೆಚ್ಚು ಸಮತೋಲನಗೊಂಡಿರುವುದು ಸುಳ್ಳಲ್ಲ. ಕಳೆದ ಪಂದ್ಯದ ಹೀರೋಗಳಾದ ಮನೀಷ್‌ ಪಾಂಡೆ ಮತ್ತು ವಿಜಯ್‌ ಶಂಕರ್‌ ಮೇಲೆ ತಂಡ ಹೆಚ್ಚಿನ ನಿರೀಕ್ಷೆ ಇರಿಸಿದೆ.

ಅಗ್ರಸ್ಥಾನ ಗಟ್ಟಿಗೊಳಿಸಲು ಡೆಲ್ಲಿ ಹೊರಾಟ
ಶನಿವಾರದ ಮೊದಲ ಪಂದ್ಯದಲ್ಲಿ ಡೆಲ್ಲಿ ಅಗ್ರಸ್ಥಾನ ಗಟ್ಟಿಪಡಿಸಲು ಹೋರಾಟ ನಡೆಸಲಿದೆ. ಅಯ್ಯರ್‌ ಪಡೆಯ ಎದುರಾಳಿ ಕೆಕೆಆರ್‌. ಇದು 4ನೇ ಸ್ಥಾನದಲ್ಲಿದ್ದು, ಇಲ್ಲಿಯೇ ಇನ್ನಷ್ಟು ಗಟ್ಟಿಯಾಗಿ ಬಳಿಕ ಮೇಲೇರುವ ಯೋಜನೆಯಲ್ಲಿದೆ. ಡೆಲ್ಲಿ ಆರಂಭಕಾರ ಶಿಖರ್‌ ಧವನ್‌ ಸತತ ಸೆಂಚುರಿ ಸಿಡಿಸಿ ಪ್ರಚಂಡ ಫಾರ್ಮ್ ಪ್ರದರ್ಶಿಸಿದ್ದಾರೆ. ಆದರೆ ಯುವ ಆಟಗಾರ ಪೃಥ್ವಿ ಶಾ ಅವರ ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅವರು ಈ ಪಂದ್ಯದಿಂದ ಹೊರಗುಳಿದರೂ ಅಚ್ಚರಿ ಇಲ್ಲ. ಮಧ್ಯಮ ಕ್ರಮಾಂಕದಲ್ಲಿ ನಾಯಕ ಶ್ರೇಯಸ್‌ ಅಯ್ಯರ್‌, ಪಂತ್‌ ಮತ್ತು ಸ್ಟೋಯಿನಿಸ್‌ ಆಧಾರವಾಗಿ ನಿಲ್ಲಬೇಕಿದೆ.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.