
ರಾಹುಲ್-ಅಥಿಯಾ ಮದುವೆಗೆ ದುಬಾರಿ ಗಿಫ್ಟ್ ಬಂದಿದ್ದು ನಿಜವೇ? ಇಲ್ಲಿದೆ ಸ್ಪಷ್ಟನೆ
Team Udayavani, Jan 27, 2023, 1:56 PM IST

ಮುಂಬೈ: ಇತ್ತೀಚೆಗೆ ವಿವಾಹವಾದ ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಗೆ ದುಬಾರಿ ರಿಯಲ್ ಎಸ್ಟೇಟ್, ಕಾರುಗಳು ಮತ್ತು ಆಭರಣಗಳು ಉಡುಗೊರೆ ರೂಪದಲ್ಲಿ ಬಂದಿವೆ ಎಂಬ ವರದಿಗಳು ಸುಳ್ಳು ಎಂದು ವಧುವಿನ ಕುಟುಂಬ ಮಾಹಿತಿ ನೀಡಿದೆ.
ಆಥಿಯಾ ತಂದೆ ಸುನೀಲ್ ಶೆಟ್ಟಿ ಅವರ ವಕ್ತಾರರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿದ್ದು, “ದುಬಾರಿ ಉಡುಗೊರೆ ಕುರಿತ ಎಲ್ಲಾ ವರದಿಗಳು ಸಂಪೂರ್ಣವಾಗಿ ಆಧಾರ ರಹಿತವಾಗಿವೆ. ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಅವರಿಗೆ ಬಂದ ಉಡುಗೊರೆಗಳ ಬಗ್ಗೆ ಸುದ್ದಿಗಳು ನಿಜವಲ್ಲ, ಅಂತಹ ತಪ್ಪು ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವ ಮೊದಲು ನಮ್ಮೊಂದಿಗೆ ವಿವರಗಳನ್ನು ಖಚಿತಪಡಿಸಿ” ಎಂದಿದ್ದಾರೆ.
ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಜ.23ರಂದು ಸುನಿಲ್ ಶೆಟ್ಟಿ ನಿವಾಸದಲ್ಲಿ ವಿವಾಹವಾದರು. ಈ ವೇಳೆ ನೂತನ ದಂಪತಿಗಳಿಗೆ ಕ್ರಿಕೆಟಿಗರು ಮತ್ತು ಬಾಲಿವುಡ್ ಸೆಲೆಬ್ರಿಟಿಗಳು ಬೆಲೆಬಾಳುವ ಉಡುಗೊರೆಗಳನ್ನು ನೀಡಿದ್ದಾರೆ ಎಂದು ಹಲವಾರು ವರದಿಗಳು ಹೇಳಿವೆ.
ಇದನ್ನೂ ಓದಿ:ಚುನಾವಣೆಗೆ ಮೂರು ತಿಂಗಳು ಇರುವಾಗಲೇ ಆಮಿಷ ಆರಂಭ ; ಜನಪ್ರಿಯ ಯೋಜನೆಗಳ ಬೆನ್ನೇರಿ…
ವರದಿಗಳ ಪ್ರಕಾರ, ಸಲ್ಮಾನ್ ಖಾನ್ ಅವರು ನೂತನ ದಂಪತಿಗೆ ₹ 1.64 ಕೋಟಿ ಮೌಲ್ಯದ ಆಡಿ ಕಾರು ಮತ್ತು ಜಾಕಿ ಶ್ರಾಫ್ ಅವರು ಅಥಿಯಾ ಅವರಿಗೆ 30 ಲಕ್ಷ ರೂ. ಮೌಲ್ಯದ ಚೋಪಾರ್ಡ್ ವಾಚ್ ನೀಡಿದರು. ಅಲ್ಲದೆ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 2 ಕೋಟಿ ರೂ. ಹೆಚ್ಚು ಮೌಲ್ಯದ ಬಿಎಂಡಬ್ಲ್ಯು ಮತ್ತು ಎಂಎಸ್ ಧೋನಿ 80 ಲಕ್ಷ ಮೌಲ್ಯದ ಕವಾಸಕಿ ಬೈಕನ್ನು ಉಡುಗೊರೆಯಾಗಿ ನೀಡಿದ್ದಾರೆ. ನಟ ಅರ್ಜುನ್ ಕಪೂರ್ ಅವರು ಅಥಿಯಾ ಅವರಿಗೆ 1.5 ಕೋಟಿ ರೂ. ಬೆಲೆಯ ವಜ್ರದ ಬ್ರೇಸ್ಲೆಟ್ ನೀಡಿದ್ದಾರೆ ಎಂದು ವರದಿಯಾಗಿದೆ. ಆದರೆ ಇದೆಲ್ಲವನ್ನೂ ಈಗ ವಕ್ತಾರರು ಅಲ್ಲಗಳೆದಿದ್ದಾರೆ.
ಅಲ್ಲದೆ ಅಥಿಯಾ ತಂದೆ ಸುನಿಲ್ ಶೆಟ್ಟಿ ಅವರು ಮುಂಬೈನಲ್ಲಿ 50 ಕೋಟಿ ರೂ ಮೌಲ್ಯದ ಅಪಾರ್ಟ್ ಮೆಂಟ್ ಗಿಫ್ಟ್ ನೀಡಿದ್ದಾರೆ ಎಂದು ವರದಿಯಾಗಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಷಿಯಲ್ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್ ಕೊಹ್ಲಿ!

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?
MUST WATCH
ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!