ಉಪ ನಾಯಕತ್ವ ಪಟ್ಟವನ್ನೂ ಕಳೆದುಕೊಂಡ ಕೆಎಲ್ ರಾಹುಲ್..ಮುಂದೇನು?


Team Udayavani, Dec 28, 2022, 11:04 AM IST

ಉಪ ನಾಯಕತ್ವ ಪಟ್ಟವನ್ನೂ ಕಳೆದುಕೊಂಡ ಕೆಎಲ್ ರಾಹುಲ್..ಮುಂದೇನು?

ಮುಂಬೈ: ಇತ್ತೀಚೆಗೆಷ್ಟೇ ಮುಗಿದ ಬಾಂಗ್ಲಾದೇಶ ವಿರುದ್ದದ ಕೊನೆಯ ಎರಡು ಏಕದಿನ ಪಂದ್ಯದಲ್ಲಿ ನಾಯಕತ್ವ, ಟೆಸ್ಟ್ ಸರಣಿಯ ನಾಯಕತ್ವ. ಇದಾಗಿ ಎರಡೇ ದಿನಕ್ಕೆ ನೇಮಕವಾದ ಲಂಕಾ ವಿರುದ್ಧದ ಏಕದಿನ ಸರಣಿಗೆ ಕನಿಷ್ಟ ಉಪ ನಾಯಕನ ಪಟ್ಟವೂ ಇಲ್ಲ. ಇದು ಕೆ.ಎಲ್ ರಾಹುಲ್ ಪರಿಸ್ಥಿತಿ.

ಮುಂಬರುವ ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ನೇಮಕ ಮಾಡಲಾಗಿದೆ. ನಿರೀಕ್ಷೆಯಂತೆ ಟಿ20 ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯಗೆ ನೀಡಲಾಗಿದೆ.

ಗಮನಾರ್ಹ ಸಂಗತಿಯೆಂದರೆ ಟಿ20 ಸರಣಿಗೆ ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ, ಕೆ.ಎಲ್‌.ರಾಹುಲ್‌ ಸ್ಥಾನ ಪಡೆದಿಲ್ಲ. ರೋಹಿತ್‌ಗೆ ಗಾಯವಾಗಿದೆ, ರಾಹುಲ್‌ಗೆ ಅದೇ ಸಂದರ್ಭದಲ್ಲಿ ಮದುವೆಯಿರುವುದರಿಂದ ಇದು ನಿರೀಕ್ಷಿತ ಬೆಳವಣಿಗೆ.

ಎಲ್ಲಕ್ಕಿಂತ ಮುಖ್ಯವಾದ ಸಂಗತಿಯೊಂದಿದೆ. ಮೂರು ಮಾದರಿಯ ತಂಡಗಳಿಗೆ ರಾಹುಲ್‌ ಉಪನಾಯಕನಾಗಿದ್ದರು. ಅರ್ಥಾತ್‌ ಅವರೇ ಭವಿಷ್ಯದ ನಾಯಕ ಎಂದು ಬಿಂಬಿಸಲ್ಪಟ್ಟಿದ್ದರು. ಭಾರತ ತಂಡದ ಟಿ20 ವಿಶ್ವಕಪ್‌ ವೈಫ‌ಲ್ಯದ ನಂತರ ಈ ವಿಚಾರವೇ ಉಲ್ಟಾ ಆಗಿದೆ. ಟಿ20ಗೆ ಹಾರ್ದಿಕ್‌ ಅವರೇ ಮುಂದಿನ ನಾಯಕ ಎನ್ನುವುದು ಖಚಿತವಾಗಿದೆ. ಇಲ್ಲಿ ರಾಹುಲ್‌ ಅವರು ಸ್ಥಾನ ಉಳಿಸಿಕೊಳ್ಳುವುದೇ ಕಷ್ಟ ಎನಿಸಿಕೊಂಡಿದೆ. ಇನ್ನು ಶ್ರೀಲಂಕಾ ಪ್ರವಾಸದಲ್ಲೇ ರಾಹುಲ್‌ ಏಕದಿನ ತಂಡದ ಉಪನಾಯಕ ಪಟ್ಟವನ್ನು ಕಳೆದುಕೊಂಡಿದ್ದಾರೆ. ಹಾರ್ದಿಕ್‌ ಆ ಸ್ಥಾನ ಪಡೆದಿದ್ದಾರೆ. ಅಲ್ಲಿಗೆ ಏಕದಿನ, ಟಿ20ಗೆ ಹಾರ್ದಿಕ್‌ ಮುಂದಿನ ನಾಯಕ ಎಂಬ ಸುಳಿವನ್ನು ಬಿಸಿಸಿಐ ನೀಡಿದೆ.

ಮುಂದಿನ ಪ್ರವಾಸಕ್ಕೆ ಬಿಸಿಸಿಐ ತಂಡ ಆಯ್ಕೆ ಮಾಡುವಾಗ ರೋಹಿತ್‌ ಶರ್ಮ ನಾಯಕತ್ವದ ಉಳಿವಿನ ಬಗ್ಗೆ ನಿರ್ಣಯವಾಗಲಿದೆ. ಈ ಹಿಂದೆ ವಿರಾಟ್‌ ಕೊಹ್ಲಿ ಜಾಗದಲ್ಲಿ ರೋಹಿತ್‌ರನ್ನು ನಾಯಕರನ್ನಾಗಿ ಆಯ್ಕೆ ಮಾಡುವಾಗ ಬಿಸಿಸಿಐಗೆ ಭಾರೀ ನಿರೀಕ್ಷೆಗಳಿದ್ದವು. ಆದರೆ ಅದರ ಲೆಕ್ಕಾಚಾರಕ್ಕೆ ತಕ್ಕಂತೆ ಯಾವುದೂ ನಡೆದಿಲ್ಲ. ಹಾಗೆಯೇ ಕೆ.ಎಲ್‌.ರಾಹುಲ್‌ ಅವರು ಸತತವಾಗಿ ಲಯ ಕಳೆದುಕೊಂಡು ಬ್ಯಾಟಿಂಗ್‌ನಲ್ಲಿ ಒದ್ದಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಟೆಸ್ಟ್‌ ತಂಡದಿಂದಲೂ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.

ಏಕದಿನಕ್ಕೆ ರಾಹುಲ್ಕೀಪರ್‌: ರಾಹುಲ್‌ ಏಕದಿನ ತಂಡದ ಉಪ ನಾಯಕ ಸ್ಥಾನ ಕಳೆದುಕೊಂಡಿರುವುದು ಮಾತ್ರವಲ್ಲ, ವಿಕೆಟ್‌ ಕೀಪರ್‌ ಆಗಿ ನೇಮಿಸಲ್ಪಟ್ಟಿದ್ದಾರೆ! ಇವರಿಗೆ ಸಹಕಾರಿಯಾಗಿ ಇಶಾನ್‌ ಕಿಶನ್‌ ಇದ್ದಾರೆ. ಸದಾ ಅಸ್ಥಿರ ಪ್ರದರ್ಶನ ನೀಡುವ ರಿಷಭ್‌ ಪಂತ್‌ ಕೂಡ ಜಾಗ ಕಳೆದುಕೊಂಡಿದ್ದಾರೆ. ಇದು ರಿಷಭ್‌ ಭವಿಷ್ಯದ ಪ್ರಶ್ನೆಯೂ ಹೌದು.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.