Team India; ಇನ್ನು ಮುಂದೆ ಕೆಎಲ್ ರಾಹುಲ್ ಗಿಲ್ಲ ವಿಕೆಟ್ ಕೀಪಿಂಗ್ ಜವಾಬ್ದಾರಿ
Team Udayavani, Jan 14, 2024, 11:57 AM IST
ಮುಂಬೈ: ದಕ್ಷಿಣ ಪ್ರವಾಸದ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕೀಪಿಂಗ್ ಮಾಡಿದ್ದ ಕೆಎಲ್ ರಾಹುಲ್ ಅವರನ್ನು ಟೆಸ್ಟ್ ಕೀಪರ್ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.
ದಕ್ಷಿಣ ಆಫ್ರಿಕಾದಲ್ಲಿ ಎರಡು ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲಿಯೂ ಕೆಎಲ್ ರಾಹುಲ್ ಅವರು ತಮ್ಮ ಕೌಶಲದಿಂದ ಮಿಂಚಿದ್ದರು. ಆದರೆ ಇಂಗ್ಲೆಂಡ್ ವಿರುದ್ಧ ಭಾರತದಲ್ಲಿ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ನಡೆಸುವುದಿಲ್ಲ. ಅವರು ಸ್ಪೆಷಲಿಸ್ಟ್ ಬ್ಯಾಟರ್ ಆಗಿ ತಂಡದಲ್ಲಿ ಆಡಲಿದ್ದಾರೆ ಎನ್ನಲಾಗಿದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಮತ್ತು ತಂಡದ ಮ್ಯಾನೇಜ್ ಮೆಂಟ್ ಮುಂಬರುವ ಸರಣಿಯಲ್ಲಿ ತಜ್ಞ ವಿಕೆಟ್-ಕೀಪರ್ ಕೆಎಸ್ ಭರತ್ ಅವರತ್ತ ಎದುರು ನೋಡುತ್ತಿದೆ.
ಇದನ್ನೂ ಓದಿ:Bengaluru; ಜೀವನದಲ್ಲಿ ಧೈರ್ಯವಿರಬೇಕು, ಭಂಡತನ ಇರಬಾರದು: ಡಿಸಿಎಂ ಡಿಕೆಶಿವಕುಮಾರ್
ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ಗಳಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಕೆಎಸ್ ಭರತ್ ಮತ್ತು ಧ್ರುವ್ ಜುರೆಲ್ ಅವರನ್ನು ವಿಕೆಟ್-ಕೀಪರ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಜುರೆಲ್ ಅವರು ಇದೇ ಮೊದಲ ಬಾರಿಗೆ ಟೆಸ್ಟ್ ಕರೆ ಪಡೆದಿದ್ದಾರೆ.
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಸ್ಪಿನ್ ಸ್ನೇಹಿ ತವರು ಪಿಚ್ ಗಳಲ್ಲಿ ವಿಕೆಟ್ ಕೀಪರ್ ಪಾತ್ರಕ್ಕೆ ರಾಹುಲ್ ಸೂಕ್ತ ಎಂದು ಬಿಸಿಸಿಐ ಭಾವಿಸುವುದಿಲ್ಲ, ಆದ್ದರಿಂದ ಇಬ್ಬರು ತಜ್ಞರನ್ನು ಆಯ್ಕೆ ಮಾಡಲಾಗಿದೆ.
“ರಾಹುಲ್ ಇನ್ಮುಂದೆ ಸ್ಪೆಷಲಿಸ್ಟ್ ಬ್ಯಾಟರ್ ಆಗಿ ಆಡುತ್ತಾರೆ. ಸಾಗರೋತ್ತರ ಟೆಸ್ಟ್ ಗಳಲ್ಲಿ ನೀವು ವೇಗಿಗಳಿಗೆ ಕೀಪಿಂಗ್ ಮಾಡಬಲ್ಲರು, ಸ್ಪಿನ್ನರ್ ಗಳು ಹೆಚ್ಚಾಗಿ ಕಾರ್ಯನಿರ್ವಹಿಸುವ ಭಾರತದಲ್ಲಿ ವಿಕೆಟ್ ಕೀಪಿಂಗ್ ಸುಲಭವಲ್ಲ. ಸ್ಪಿನ್ ಸ್ನೇಹಿ ತವರು ವಿಕೆಟ್ ಗಳಲ್ಲಿ ಚೆಂಡು ಪುಟಿಯಬಹುದು ಅಥವಾ ತೀವ್ರವಾಗಿ ತಿರುಗಬಹುದು. ಕೀಪರ್ ಆಗಿ ಮೇಲಕ್ಕೆ ಮತ್ತು ಕೆಳಕ್ಕೆ ಚಲಿಸುತ್ತಿರಬೇಕು. ಹೀಗಾಗಿ ಸ್ಪೆಷಲಿಸ್ಟ್ ಕೀಪರ್ ಅಗತ್ಯವಿದೆ” ಎಂದು ಬಿಸಿಸಿಐ ಮೂಲವೊಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ