ಐಪಿಎಲ್‌ನಲ್ಲಿ  ವೇಗಿಗಳಿಗೆ ವಿಶ್ರಾಂತಿ: ಕೊಹ್ಲಿ ಸಲಹೆ


Team Udayavani, Nov 9, 2018, 12:34 PM IST

kohli.jpg

ಹೊಸದಿಲ್ಲಿ: ತನ್ನನ್ನು ಟೀಕಿಸಿದ ಅಭಿಮಾನಿಗೆ ದೇಶಬಿಟ್ಟು ಹೋಗು ಎಂದ ಭಾರತ ಕ್ರಿಕೆಟ್‌ ತಂಡದ ನಾಯಕ ಕೊಹ್ಲಿ ಇದೀಗ ಮತ್ತೂಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮುಂದಿನ ಏಕದಿನ ವಿಶ್ವಕಪ್‌ ಹಿನ್ನೆಲೆಯಲ್ಲಿ ಐಪಿಎಲ್‌ನಿಂದ ಭಾರತದ ಪ್ರಮುಖ ವೇಗಿಗಳಿಗೆ ವಿಶ್ರಾಂತಿ ನೀಡಬೇಕು ಎಂದು ಬಿಸಿಸಿಐ ನಡೆಸಿದ ಸಭೆಯಲ್ಲಿ ಕೊಹ್ಲಿ ಹೇಳಿದ್ದಾರೆ.

ವೇಗಿಗಳಿಗೆ ಮಾತ್ರ ವಿಶ್ರಾಂತಿ ನೀಡಿ ಎಂದು ಹೇಳಿ, ಬ್ಯಾಟ್ಸ್‌ಮನ್‌ಗಳ ಬಗ್ಗೆ ಸೊಲ್ಲೆತ್ತದಿರುವುದು ಕೊಹ್ಲಿ ಹೇಳಿಕೆಯ ತಾರ್ಕಿಕತೆಯ ಬಗ್ಗೆಯೇ ಪ್ರಶ್ನೆ ಮೂಡಿಸಿದೆ. ಮುಂದಿನ ವರ್ಷ ಮೇ 30ರಿಂದ ಜು. 4ರ ವರೆಗೆ ಇಂಗ್ಲೆಂಡ್‌ನ‌ಲ್ಲಿ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ನಡೆಯಲಿದೆ. ಅದಕ್ಕೂ ಹತ್ತು ದಿನಗಳ ಮುನ್ನ ಐಪಿಎಲ್‌ ಮುಗಿಯುತ್ತದೆ. ಹೀಗಾದರೆ ಬೌಲರ್‌ಗಳ ಮೇಲೆ ಒತ್ತಡ ಬೀಳುತ್ತದೆ, ಅವರಿಗೆ ಅಗತ್ಯ ವಿಶ್ರಾಂತಿ ಸಿಗದಿದ್ದರೆ ಇಂಗ್ಲೆಂಡ್‌ನ‌ಲ್ಲಿ ಅವರ ಪ್ರದರ್ಶನದ ಮೇಲೆ ಹೊಡೆತ ಬೀಳುತ್ತದೆ ಎನ್ನುವ ಕಾರಣಕ್ಕೆ ಕೊಹ್ಲಿ ಹೀಗೆ ಹೇಳಿದ್ದಾರೆ. ಆದರೆ ಬ್ಯಾಟ್ಸ್‌ಮನ್‌ಗಳಿಗೂ ವಿಶ್ರಾಂತಿ ಸಿಗದಿದ್ದರೆ ಅವರ ಪ್ರದರ್ಶನದ ಮೇಲೆ ಒತ್ತಡ ಬೀಳುವುದಿಲ್ಲವೇ ಎಂಬ ಪ್ರಶ್ನೆಗಳು ಇಲ್ಲಿ ಮೂಡಿವೆ.

ಈಗೇಕೆ ಈ ಅನಿಸಿಕೆ?
ಇತ್ತೀಚೆಗೆ, ಭಾರತ ತಂಡ, ಇಂಗ್ಲೆಂಡ್‌ ಪ್ರವಾಸ ಕೈಗೊಂಡಿದ್ದಾಗ ತೋರಿದ್ದ ಕಳಪೆ ಪ್ರದರ್ಶನದ ಕಾರಣ ತಿಳಿಯಲು ಸಿಒಎ, ಗುರುವಾರ ಸಭೆ ಕರೆದಿದ್ದರು. ಸಿಒಎ ಸದಸ್ಯರಾದ ವಿನೋದ್‌ ರಾಯ್‌, ಡಯಾನಾ ಎಡುಲ್ಜಿ, ನಾಯಕ ವಿರಾಟ್‌ ಕೊಹ್ಲಿ, ಅಜಿಂಕ್ಯ ರಹಾನೆ, ರೋಹಿತ್‌ ಶರ್ಮ, ಕೋಚ್‌ ರವಿಶಾಸಿ ಹಾಗೂ ರಾಷ್ಟ್ರೀಯ ಆಯ್ಕೆ ಮಂಡಳಿ ಅಧ್ಯಕ್ಷ ಎಂಎಸ್‌ಕೆ ಪ್ರಸಾದ್‌ ಸಭೆಯಲ್ಲಿ ಭಾಗವಹಿಸಿದ್ದರು. 

ತಂಡದ ಕಳಪೆ ಪ್ರದರ್ಶನದ ಬಗ್ಗೆ ಮಾಹಿತಿ ನೀಡುವಾಗ ಕೊಹ್ಲಿ ಮೇಲಿನಂತೆ ಸಲಹೆ ಇಟ್ಟಿದ್ದಾರೆ. ಆದರೆ ಹೀಗೆ ವಿಶ್ರಾಂತಿ ನೀಡಿದರೆ ಐಪಿಎಲ್‌ ತಂಡಗಳ ಮೇಲೆ ಹೊಡೆತ ಬೀಳುತ್ತದೆ. ಜತೆಗೆ ಬುಮ್ರಾ, ಭುವನೇಶ್ವರ್‌ಗೆ ಐಪಿಎಲ್‌ನಿಂದ ದೊರೆಯುವ ಹಣಕ್ಕೂ ಕತ್ತರಿ ಬೀಳುತ್ತದೆ. ಇದನ್ನು ಬಿಸಿಸಿಐ ತುಂಬಿಕೊಡಬೇಕು ಎಂದು ಸಭೆಯಲ್ಲಿ ವಿನಂತಿಸಲಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.