ಮುನಿದ ನಾರಾಯಣ: ಆರ್‌ಸಿಬಿಗೆ ಸೋಲು; 4 ವಿಕೆಟ್‌ನಿಂದ ಗೆದ್ದ ಕೆಕೆಆರ್‌


Team Udayavani, Apr 10, 2018, 7:00 AM IST

PTI4_8_2018_000251B.jpg

ಕೋಲ್ಕತಾ: ಪ್ರಸಕ್ತ ಋತುವಿನ ತನ್ನ ಮೊದಲ ಐಪಿಎಲ್‌ ಪಂದ್ಯದಲ್ಲಿ ರಾಯಲ್ಸ್‌ ಚಾಲೆಂಜರ್ ಬೆಂಗಳೂರು ತಂಡ 4 ವಿಕೆಟ್‌ಗಳಿಂದ ಕೋಲ್ಕತಾ ನೈಟ್‌ ರೈಡರ್ ತಂಡದ ವಿರುದ್ಧ ಸೋಲು ಅನುಭವಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಬ್ರೆಂಡನ್‌ ಮೆಕಲಂ (43 ರನ್‌), ಎಬಡಿ ವಿಲಿಯರ್ (44 ರನ್‌) ಹಾಗೂ ವಿರಾಟ್‌ ಕೊಹ್ಲಿ (31 ರನ್‌) ನೆರವಿನಿಂದ 20 ಓವರ್‌ಗೆ 7 ವಿಕೆಟ್‌ ಗೆ 176 ರನ್‌ಗಳಿಸಿತು. 

ಈ ಗುರಿ ಬೆನ್ನಟ್ಟಿದ ಕೋಲ್ಕತಾ ನೈಟ್‌ ರೈಡರ್ ಸ್ಪಿನ್ನರ್‌ ಸುನೀಲ್‌ ನಾರಾಯಣ್‌ (50 ರನ್‌, 19 ಎಸೆತ), ದಿನೇಶ್‌ ಕಾರ್ತಿಕ್‌ (ಅಜೇಯ 35 ರನ್‌) ನೆರವಿನಿಂದ 18.5 ಓವರ್‌ಗಳಲ್ಲಿ 6 ವಿಕೆಟ್‌ಗೆ 177 ರನ್‌ಗಳಿಸಿ ಗೆಲುವುಗಳಿಸಿತು. ಸ್ಪಿನ್ನರ್‌ಗಳು ಕೈಕೊಟ್ಟಿದ್ದು ಕೊಹ್ಲಿ ಪಡೆಗೆ ದುಭಾರಿಯಾಯಿತು.

ಮೆಕಲಂ ಅಬ್ಬರ: ಇದಕ್ಕೂ ಮೊದಲು ಭಾನುವಾರ ರಾತ್ರಿ ಕೋಲ್ಕತಾದ “ಈಡನ್‌ ಗಾರ್ಡನ್ಸ್‌’ ನಲ್ಲಿ ಟಾಸ್‌ ಸೋತು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಆರ್‌ಸಿಬಿಗೆ ಈ ಬಾರಿ ಕ್ರಿಸ್‌ ಗೇಲ್‌ ನೆರವು ಇರಲಿಲ್ಲ. ಆದರೆ ಬ್ರೆಂಡನ್‌ ಮೆಕಲಂ-ಕ್ವಿಂಟನ್‌ ಡಿ ಕಾಕ್‌ ರೂಪದಲ್ಲಿ ಸಿಡಿಲಬ್ಬರದ ಆರಂಭಿಕ ಜೋಡಿ ಹೋರಾಟಕ್ಕೆ ಅಣಿಯಾಗಿತ್ತು. ಇವರಲ್ಲಿ ಡಿ ಕಾಕ್‌ (4 ರನ್‌) ಅಗ್ಗಕ್ಕೆ ಔಟಾದರು. ಮೆಕಲಂ ಎಂದಿನ ಅಬ್ಬರ ಆಟ ಪ್ರದರ್ಶಿಸಿ 27 ಎಸೆತಗಳಿಂದ 43 ರನ್‌ ಸಿಡಿಸಿ ದರು (27 ಎಸೆತ, 6 ಬೌಂಡರಿ, 2 ಸಿಕ್ಸರ್‌).

ಕೊಹ್ಲಿ ನಿಧಾನಗತಿ ಬ್ಯಾಟಿಂಗ್‌: ನಾಯಕ ವಿರಾಟ್‌ ಕೊಹ್ಲಿ ಆಟ ನಿಧಾನ ಗತಿಯಿಂದ ಕೂಡಿತ್ತು. 31 ರನ್ನಿಗಾಗಿ ಅವರು 33 ಎಸೆತ ತೆಗೆದುಕೊಂಡರು (1 ಬೌಂಡರಿ, 1 ಸಿಕ್ಸರ್‌). 44 ರನ್‌ ಹೊಡೆದ ಎಬಿ ಡಿ ವಿಲಿಯರ್ ಆರ್‌ಸಿಬಿ ಸರದಿಯ ಸರ್ವಾಧಿಕ ಸ್ಕೋರರ್‌. ಎಬಿಡಿ 5 ಸಿಕ್ಸರ್‌ ಹಾಗೂ ಒಂದು ಬೌಂಡರಿ ಬಾರಿಸಿ ಅಬ್ಬರಿಸಿದರು. 6ನೇ ಕ್ರಮಾಂಕದಲ್ಲಿ ಬಂದ ಮನ್‌ದೀಪ್‌ ಸಿಂಗ್‌ ಕೂಡ ಬಿರುಸಿನ ಆಟಕ್ಕಿಳಿದರು. ಮನ್‌ದೀಪ್‌ ಗಳಿಕೆ 37 ರನ್‌.18 ಎಸೆತಗಳ ಈ ಆಕರ್ಷಕ ಇನಿಂಗ್ಸ್‌ ನಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್‌ ಸೇರಿತ್ತು.

ಸಂಕ್ಷಿಪ್ತ ಸ್ಕೋರ್‌: ಆರ್‌ಸಿಬಿ 20 ಓವರ್‌ಗೆ 176/7 ( ಬ್ರೆಂಡನ್‌ ಮೆಕಲಂ 43, ಎಬಡಿ ವಿಲಿಯರ್ 44, ರಾಣಾ 11ಕ್ಕೆ2), ಕೆಕೆಆರ್‌ 18.5 ಓವರ್‌ ಗೆ 177/6 ( ಸುನೀಲ್‌ ನಾರಾಯಣ್‌ 50, ದಿನೇಶ್‌ ಕಾರ್ತಿಕ್‌ ಅಜೇಯ 35, ವೋಕ್ಸ್‌ 36ಕ್ಕೆ3)

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.