ಡೆಲ್ಲಿಗೆ ಕೆಕೆಆರ್‌ ಸವಾಲು


Team Udayavani, Apr 27, 2018, 6:20 AM IST

Delhi-Daredevils-players.jpg

ಹೊಸದಿಲ್ಲಿ: ಸತತ ಸೋಲು ಮತ್ತು ಗೌತಮ್‌ ಗಂಭೀರ್‌ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ಕಂಗೆಟ್ಟಿರುವ ಡೆಲ್ಲಿ ಡೇರ್‌ಡೆವಿಲ್ಸ್‌ ತಂಡವು ಯುವ ನಾಯಕ ಶ್ರೇಯಸ್‌ ಅಯ್ಯರ್‌ ನೇತೃತ್ವದಲ್ಲಿ ಶುಕ್ರವಾರ ಕೋಲ್ಕತಾ ನೈಟ್‌ರೈಡರ್ ತಂಡವನ್ನು ಎದುರಿಸಲು ಸಿದ್ಧವಾಗಿದ್ದು ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ರಯತ್ನಿಸಲಿದೆ.

ಕೂಟದ ಮಧ್ಯದಲ್ಲಿಯೇ ಗಂಭೀರ್‌ ನಾಯಕತ್ವ ತೊರೆದಿರುವುದು ಡೆಲ್ಲಿಗೆ ದೊಡ್ಡ ಹೊಡೆತವಾಗಿದೆ. ಇದರಿಂದ ಡೆಲ್ಲಿ ತಂಡ ಚೇತರಿಸಿಕೊಳ್ಳಲು ತಂಡ ವ್ಯವಸ್ಥಾಪಕರು ಹೊಸ ಯೋಚನೆ, ಯೋಜನೆಗಳನ್ನು ರೂಪಿಸಬೇಕಾಗಿದೆ. ಶ್ರೇಯಸ್‌ ನಾಯಕತ್ವದಲ್ಲಿ ತಂಡ ತಿರುಗೇಟು ನೀಡಿದರೆ ತನ್ನ ಅಭಿಯಾನಕ್ಕೆ ಜೀವ ನೀಡಬಹುದು.

ಗಂಭೀರ್‌ ಅವರ ಸಹಿತ ಇತರ ಆಟಗಾರರ ಘೋರ ಬ್ಯಾಟಿಂಗ್‌ ವೈಫ‌ಲ್ಯದಿಂದ ಯುವ ರಿಷಬ್‌ ಪಂತ್‌ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ. ಮ್ಯಾಕ್ಸ್‌ವೆಲ್‌ ಸಿಡಿಯುತ್ತಿಲ್ಲ. ತಂಡ ಇಷ್ಟರವರೆಗೆ ಆರು ಪಂದ್ಯಗಳನ್ನು ಆಡಿದ್ದು ಐದರಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದೆ.

ಡೆಲ್ಲಿ ತಿರುಗೇಟು ನೀಡಬೇಕಾದರೆ ಗಂಭೀರ್‌ ಕೂಡ ಸಿಡಿಯುವುದು ಅತ್ಯಗತ್ಯವಾಗಿದೆ. ಇನ್ನು ಎಂಟು ಪಂದ್ಯ ಬಾಕಿ ಉಳಿದಿದ್ದು ಪ್ಲೇ ಆಫ್ಗೆ ತೇರ್ಗಡೆಯಾಗಬೇಕಾದರೆ ಕಡಿಮೆಪಕ್ಷ ಏಳರಲ್ಲಿ ಗೆಲುವು ಸಾಧಿಸಬೇಕಾಗಿದೆ. ಹಾಗಾಗಿ ತಂಡ ಆಲ್‌ರೌಂಡ್‌ ಪ್ರದರ್ಶನ ನೀಡುವುದು ಅಗತ್ಯವಾಗಿದೆ.

ಬ್ಯಾಟಿಂಗ್‌ನಲ್ಲಿ ಮಿಂಚುತ್ತಿರುವ 23ರ ಹರೆಯದ ಶ್ರೇಯಸ್‌ ಅಯ್ಯರ್‌ ಇನ್ನು ನಾಯಕತ್ವದ ಜವಾಬ್ದಾರಿ ವಹಿಸಬೇಕಾಗಿದೆ. ಹಾಗಾಗಿ ಒತ್ತಡದಿಂದಲೇ ಎದುರಾಳಿ ಜತೆ ಆಡಬೇಕಾಗಿದೆ. ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಪರಿಣಾಮಕಾರಿಯಾಗಿ ಆಡಿದರೆ ಮತ್ತು ಜತೆಗೆ ಅದೃಷ್ಟವೂ ಒಲಿದರೆ ಡೆಲ್ಲಿ ಗೆಲುವಿನ ಟ್ರ್ಯಾಕ್‌ಗೆ ಮರಳುವ ಸಾಧ್ಯತೆಯಿದೆ.

ಮ್ಯಾಕ್ಸ್‌ವೆಲ್‌ ವೈಫ‌ಲ್ಯ
ವಿದೇಶಿ ಆಟಗಾರರಾದ ಜಾಸನ್‌ ರಾಯ್‌ ಮತ್ತು ಕ್ರಿಸ್‌ ಮಾರಿಸ್‌ ಗಾಯದಿಂದ ಬಳಲುತ್ತಿದ್ದರೆ ಮ್ಯಾಕ್ಸ್‌ವೆಲ್‌ ಸಿಡಿಯದಿರುವುದು ಡೆಲ್ಲಿಯ ವೈಫ‌ಲ್ಯಕ್ಕೆ ಕಾರಣವಾಗಿದೆ. ಇಷ್ಟರವರೆಗಿನ ಪಂದ್ಯಗಳಲ್ಲಿ ಮ್ಯಾಕ್ಸ್‌ವೆಲ್‌ 17, 13, 57, 4 ಮತ್ತು 12 ರನ್‌ ಗಳಿಸಿದ್ದರು.

ಬೌಲಿಂಗ್‌ದಲ್ಲಿ ಒದ್ದಾಟ
ಕೆಕೆಆರ್‌ ಕೂಡ ಬೌಲಿಂಗ್‌ನಲ್ಲಿ ಒದ್ದಾಡುತ್ತಿದೆ. ಆದರೆ ಬ್ಯಾಟಿಂಗ್‌ನಲ್ಲಿ ಉತ್ತಮ ನಿರ್ವಹಣೆ ನೀಡುತ್ತಿದೆ. ಆಟಗಾರರ ಉತ್ತಮ ನಿರ್ವಹಣೆಯಿಂದ ಕೆಕೆಆರ್‌ ಎರಡು ಬಾರಿ 200ರ ಮೊತ್ತ ಪೇರಿಸಿತ್ತು. ಕೆಕೆಆರ್‌ ಆಡಿದ ಆರು ಪಂದ್ಯಗಳಲ್ಲಿ ಮೂರರಲ್ಲಿ ಜಯ ಸಾಧಿಸಿ ನಾಲ್ಕನೇ ಸ್ಥಾನದಲ್ಲಿದೆ. ಈ ಹಿಂದೆ ಈ ಎರಡು ತಂಡಗಳು ಪರಸ್ಪರ ಮುಖಾಮುಖೀಯಾದಾಗ ಕೆಕೆಆರ್‌ 200 ರನ್‌ ಪೇರಿಸಿತ್ತು ಮತ್ತು 71 ರನ್ನುಗಳಿಂದ ಜಯಭೇರಿ ಬಾರಿಸಿತ್ತು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.