IPL 2024; ಅಮೋಘ ಆಟವಾಡಿ ಮೂರನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಕೆಆರ್

ಹೀನಾಯ ನಿರ್ವಹಣೆ ತೋರಿದ ಹೈದರಾಬಾದ್

Team Udayavani, May 26, 2024, 10:25 PM IST

1-qqw-qwewqewqeqwe

ಚೆನ್ನೈ : ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಅತ್ಯಮೋಘ ಬೌಲಿಂಗ್ ದಾಳಿ ನಡೆಸಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಜಯ ಸಾಧಿಸಿ ಮೂರನೇ ಬಾರಿ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಕೆಕೆಆರ್ ಲೀಗ್ ಹಂತದಲ್ಲೂ ಪ್ರಾಬಲ್ಯ ಮೆರೆದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ವಿರಾಜಮಾನವಾಗಿತ್ತು. ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿತ್ತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಸನ್ ರೈಸರ್ಸ್ ಹೈದರಾಬಾದ್ ತಂಡ ಕೋಲ್ಕತಾ ನೈಟ್ ರೈಡರ್ಸ್ ಬೌಲರ್ ಗಳ ಚಂಡ ಮಾರುತದಂತೆ ಎರಗಿದ ದಾಳಿಗೆ ನಲುಗಿ 18.3 ಓವರ್ ಗಳಲ್ಲಿ ಐಪಿಎಲ್ ಫೈನಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ಮೊತ್ತಕ್ಕೆ ಆಲೌಟಾಯಿತು.

ಕೆಕೆಆರ್ ಗೆಲುವಿಗೆ 114 ರನ್ ಗಳ ಸಣ್ಣ ಗುರಿ ಮುಂದಿಟ್ಟಿತು. ಗುರಿ ಬೆನ್ನತ್ತಿದ್ದ ಕೆಕೆಆರ್ ಸುನಿಲ್ ನಾರಾಯಣ್ ಅವರ ವಿಕೆಟ್ ಕಳೆದುಕೊಂಡರೂ ವೆಂಕಟೇಶ್ ಅಯ್ಯರ್ ಅಂಜದೆ ಆಟ ಮುಂದುವರಿಸಿದರು. ಸ್ಪೋಟಕ ಆಟವಾಡಿದ ವೆಂಕಟೇಶ್ ಅಯ್ಯರ್ ಸ್ಮರಣೀಯ ಅರ್ಧ ಶತಕ 52ರನ್( 26ಎಸೆತ ) ಸಿಡಿಸಿದರು. ನಾಯಕ ಶ್ರೇಯಸ್ ಅಯ್ಯರ್ ಗೆಲುವಿನ ದಡ ಸುಲಭದಲ್ಲಿ ತಲುಪಿಸಿದರು. 10.3ಓವರ್ ಗಳಲ್ಲಿ 114 ರನ್ ಗಳಿಸಿ ಜಯಭೇರಿ ಬಾರಿಸಿತು.  ಗುರ್ಬಾಜ್ 39(31ಎಸೆತ) ರನ್ ಗಳಿಸಿ ಔಟಾದರು.

ಹೀನಾಯ ನಿರ್ವಹಣೆ ತೋರಿದ ಹೈದರಾಬಾದ್
ಮೊದಲ ಓವರ್ ನಲ್ಲೆ 2 ರನ್ ಗಳಿಸಿದ್ದ ಅಭಿಷೇಕ್ ಶರ್ಮ ಅವರ ವಿಕೆಟ್ ಮಿಚೆಲ್ ಸ್ಟಾರ್ಕ್ ಕ್ಲೀನ್ ಬೌಲ್ಡ್ ಮಾಡುವ ಮೂಲಕ ಕಿತ್ತರು. ಇನ್ನೊಂದು ಓವರ್ ನಲ್ಲಿ ಹೆಡ್ ಶೂನ್ಯಕ್ಕೆ ನಿರ್ಗಮಿಸಿದರು. ತಂಡ ಭಾರೀ ಆಘಾತಕ್ಕೆ ಸಿಲುಕಿತು.

ಆರಂಭಿಕ ಆಘಾತದ ಬಳಿಕ ಕೆಕೆಆರ್ ಬೌಲರ್ ಗಳು ಕೇಕೆ ಹಾಕುತ್ತಲೇ ಸಾಗಿದರು. ಹೈದರಾಬಾದ್ ಬ್ಯಾಟ್ಸ್ ಮ್ಯಾನ್ ಮಂಕಾದರು. ಹೆಚ್ಚು ಹೊತ್ತು ನಿಲ್ಲಲಿಲ್ಲ.ರಾಹುಲ್ ತ್ರಿಪಾಠಿ 9,ನಿತೀಶ್ ರೆಡ್ಡಿ 13,ಐಡೆನ್ ಮಾರ್ಕ್ರಾಮ್ 20 , ಶಹಬಾಜ್ ಅಹ್ಮದ್ 8,ಅಬ್ದುಲ್ ಸಮದ್ 4, ಹೆನ್ರಿಚ್ ಕ್ಲಾಸೆನ್ 16, ಜಯದೇವ್ ಉನದ್ಕತ್ 4 ರನ್ ಗಳಿಸಿ ಔಟಾದರು.

ಕೊನೆಯಲ್ಲಿ ನಾಯಕ ಪ್ಯಾಟ್ ಕಮ್ಮಿನ್ಸ್ ನೂರು ದಾಟಲು ನೆರವಾದರು. 24 ರನ್ ಗಳಿಸಿ ಕ್ಯಾಚಿತ್ತು ನಿರ್ಗಮಿಸಿದರು.

ಕೆಕೆಆರ್ ನ ಆಂಡ್ರೆ ರಸೆಲ್3 ವಿಕೆಟ್ , ಮಿಚೆಲ್ ಸ್ಟಾರ್ಕ್ 2ವಿಕೆಟ್ , ಹರ್ಷಿತ್ ರಾಣಾ 2 ವಿಕೆಟ್, ವರುಣ್ ಚಕ್ರವರ್ತಿ ಮತ್ತು ವೈಭವ್ ಅರೋರಾ ತಲಾ ಒಂದು ವಿಕೆಟ್ ಕಿತ್ತು ಮಾರಕವಾಗಿ ಪರಿಣಮಿಸಿದರು.

ಟಾಪ್ ನ್ಯೂಸ್

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

Rabkavi Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.