ವೈರಲ್ ಆಗುತ್ತಿದೆ ಬೆನ್ನಿ ದಯಾಳ್ ರ ‘ಕೂ’ ಕ್ರಿಕೆಟ್ ಗೀತೆ


Team Udayavani, Oct 30, 2021, 12:54 PM IST

ವೈರಲ್ ಆಗುತ್ತಿದೆ ಬೆನ್ನಿ ದಯಾಳ್ ರ ‘ಕೂ’ ಕ್ರಿಕೆಟ್ ಗೀತೆ

ಬೆಂಗಳೂರು: ಟಿ20 ವಿಶ್ವಕಪ್ ಕ್ರಿಕೆಟ್ ನ ಕ್ರೇಜ್ ಈಗಾಗಲೇ ಎಲ್ಲೆಡೆ ಮನೆ ಮಾಡಿದೆ. ಇದನ್ನು ಹೆಚ್ಚಿಸಲು ಕೂ ಆ್ಯಪ್ ‘ಕೂ ಪೆ ಬೊಲೆಗಾ’ ಎಂಬ ಆಕರ್ಷಕ ಗೀತೆಯೊಂದನ್ನು ಬಿಡುಗಡೆಗೊಳಿಸಿದೆ. ಈ ಟಿ-20 ವಿಶ್ವಕಪ್ 2021 ರ ಸರಣಿಯ ಈ ಸಮಯದಲ್ಲಿ ಟೀಮ್ ಇಂಡಿಯಾವನ್ನು ಹುರಿದುಂಬಿಸುವ ಅಭಿಮಾನಿಗಳ ಉತ್ಸಾಹವನ್ನು ಈ ಗೀತೆ ಪ್ರತಿಧ್ವನಿಸುತ್ತದೆ.

ಜನಪ್ರಿಯ ಗಾಯಕ ಬೆನ್ನಿ ದಯಾಳ್ ಸಂಗೀತ ಸಂಯೋಜಿಸಿ ಹಾಡಿರುವ ಆಕರ್ಷಕ ಗೀತೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳನ್ನು ಸೆಳೆದಿದೆ. ಗೀತೆ ಬಿಡುಗಡೆಗೊಂಡಾಗಿನಿಂದ ಬೆನ್ನಿ ದಯಾಳ್ ಅವರ ಫಾಲೋವರ್ಸ್ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. ಬೆನ್ನಿ ದಯಾಳ್ ಅವರು 16 ಭಾಷೆಗಳಲ್ಲಿ 2000 ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದಾರೆ ಮತ್ತು ಕೂಗಾಗಿ ಈ ಗೀತೆಯು ಭಾರತೀಯ ಭಾಷೆಗಳಾದ್ಯಂತ ಬಳಕೆದಾರರ ಪ್ರತಿಕ್ರಿಯೆಗಳೊಂದಿಗೆ ಪ್ರತಿಧ್ವನಿಸುತ್ತಿದೆ.

ಗಾಯಕ ಬೆನ್ನಿ ದಯಾಳ್ ಕ್ರಿಕೆಟ್ ಗೀತೆಯನ್ನು ಹಂಚಿಕೊಳ್ಳುವ ಮೂಲಕ ” ಕ್ರಿಕೆಟ್ ಜ್ವರ ಈಗ ಆರಂಭಗೊಂಡಿದೆ! ನೀಲಿ ಜರ್ಸಿಯ ಹುಡುಗರನ್ನು ಹುರಿದುಂಬಿಸಲು ನಾವು ಮತ್ತೊಮ್ಮೆ ಸಜ್ಜಾಗಿದ್ದೇವೆ. ಅದು ಗೆಲುವೇ ಆಗಿರಲಿ ಸೋಲೆ ಆಗಿರಲಿ, ಇಡೀ ರಾಷ್ಟ್ರ ನಮ್ಮ ಚಾಂಪಿಯನ್ ಗಳಿಗಾಗಿ ಕೂ ಗೀತೆಯ ಜೊತೆಗೆ ಕೂನಲ್ಲಿ ಮಾತನಾಡುತ್ತಾರೆ, ಈ ಹಾಡಿಗೆ ನನ್ನೊಂದಿಗೆ ದನಿಗೂಡಿಸಿ, ಉತ್ಸಾಹ ಕುಂದದಂತೆ, ಈ ಕ್ರಿಕೆಟ್ ಸೀಸನನ್ನು ಪರಿಪೂರ್ಣ ಹುರುಪಿನೊಂದಿಗೆ ಪ್ರೋತ್ಸಾಹಿಸೋಣ ” ಎಂದು ಕೂ ಮಾಡಿದ್ದಾರೆ.

ಸ್ಥಳೀಯ ಭಾರತೀಯ ಭಾಷೆಗಳಲ್ಲಿ ಸ್ವಯಂ ಅಭಿವ್ಯಕ್ತಿಗೆ ವೇದಿಕೆಯಾದ Koo (ಕೂ) ಅಪ್ಲಿಕೇಶನ್ ಕ್ರಿಕೆಟ್ ಅಭಿಮಾನಿಗಳಿಗೆ ಸಮೃದ್ಧ, ಮನಮುಟ್ಟುವ ಹಾಗು ತೀರಾ ಸ್ಥಳೀಯ ಎನಿಸುವ ಅನುಭವವನ್ನು ನೀಡುತ್ತದೆ. ಕ್ರಿಕೆಟ್ ಗೀತೆಯ ಜೊತೆಗೆ, ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಮತ್ತು ಅವರ ಮಾತೃಭಾಷೆಯಲ್ಲಿ ಪರಸ್ಪರ ತೊಡಗಿಸಿಕೊಳ್ಳಲು ಜನರನ್ನು ಪ್ರೇರೇಪಿಸಲು(ಕೂ ತನ್ನ ಮೊಟ್ಟಮೊದಲ ದೂರದರ್ಶನ ಅಭಿಯಾನವನ್ನು (TVC) #KooKiyaKya –  ಹ್ಯಾಶ್‌ಟ್ಯಾಗ್ ಜೊತೆಗೆ ಸ್ಕ್ರಿಪ್ಟ್ ಮಾಡಿದೆ. ಈ TVC –  ಚಮತ್ಕಾರಿ ಮಾತುಗಳು, ಹಾಸ್ಯದೊಂದಿಗೆ ಕಿರು-ಸ್ವರೂಪದ ಜಾಹೀರಾತುಗಳ ಸರಣಿಯನ್ನು ಒಳಗೊಂಡಿರುತ್ತದೆ – ಸ್ಥಳೀಯ ಭಾಷೆಗಳಲ್ಲಿ ಸ್ವಯಂ ಅಭಿವ್ಯಕ್ತಿಗಾಗಿ ಸಾಮಾಜಿಕ ಮಾಧ್ಯಮವನ್ನು ಬಳಸಿಕೊಳ್ಳುವ ಬಳಕೆದಾರರ ಬಯಕೆಯನ್ನು ಪ್ರತಿಬಿಂಬಿಸುತ್ತದೆ. ವೇದಿಕೆಯು ಅತ್ಯಾಕರ್ಷಕ ಬಳಕೆದಾರರ ಸ್ಪರ್ಧೆಯನ್ನು ಘೋಷಿಸಿದ್ದು- ಕೂ ಕ್ರಿಯೇಟರ್ ಕಪ್, ಕೂ ನಲ್ಲಿನ ಕ್ರಿಯೇಟರ್ ಗಳು ತಮ್ಮ ಸೃಜನಶೀಲತೆಯನ್ನು ಮೀಮ್, ವೀಡಿಯೊಗಳು ಅಥವಾ ನೈಜ-ಸಮಯದ ಕೂಮೆಂಟರಿ ಮೂಲಕ ಪಂದ್ಯಗಳಲ್ಲಿ ಭಾಗವಹಿಸಬಹುದಾಗಿದೆ. ಈ ಮೂಲಕ ಅತ್ಯಾಕರ್ಷಕ ಬಹುಮಾನಗಳನ್ನು ಸಹ ಗೆಲ್ಲಬಹುದಾಗಿದೆ.

” ಮೈಕ್ರೋ ಬ್ಲಾಗಿಂಗ್ ವೇದಿಕೆಯಾಗಿ ಪ್ರತಿಯೊಬ್ಬ ಭಾರತಿಯನನ್ನು ಅವರ ಮಾತೃಭಾಷೆಯಲ್ಲಿ ಸಂಪರ್ಕಿಸುವ ಗುರಿಯನ್ನು ಹೊಂದಿದೆ, ನಾವು ಭಾರತೀಯ ಆಚರಣೆಗಳ ರಾಯಭಾರಿಯಾಗಿದ್ದೇವೆ. ನಮಗೆ ಕ್ರಿಕೆಟ್ ಎನ್ನುವುದು ಉತ್ಸಾಹವನ್ನು ಹೊಮ್ಮಿಸುವ ಭಾವನೆ. ಪ್ರತಿಭಾವಂತ ಬೆನ್ನಿ ದಯಾಳ್ ಅವರು ನಮ್ಮ ಕ್ರಿಕೆಟ್ ಗೀತೆಯನ್ನು ಅತ್ಯಂತ ಅದ್ಭುತವಾಗಿ ಸಂಯೋಜಿಸಿದ್ದು ನಮಗೆ ಗೌರವ ತಂದಿದೆ. ನಮ್ಮ TVC ಅಭಿಯಾನ, ಕೂ ಕ್ರಿಯೇಟರ್ ಕಪ್ ಮತ್ತು ನೈಜ ಸಮಯದ ವೀಕ್ಷಕ ವಿವರಣೆ ಜೊತೆಗೆ ಬಳಕೆದಾರರು ತೊಡಗಿಸಿಕೊಂಡಾಗ ಮತ್ತು #KooKiyaKya ಮೂಲಕ ಸಂಪರ್ಕಗೊಂಡಾಗ ಈ ಗೀತೆ ಆಕರ್ಷಕ ಅನುಭವವನ್ನು ನೀಡುತ್ತದೆ.” ಎಂದು ಕೂ ವಕ್ತಾರರು ಹೇಳಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.